AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra: ತಾಯಿ ಗರ್ಭದೊಳಗಿರುವ ಮಗುವಿನೊಳಗೆ ಮತ್ತೊಂದು ಭ್ರೂಣ ಪತ್ತೆ

ತಾಯಿಯ ಗರ್ಭದೊಳಗಿರುವ ಮಗುವಿನ ಹೊಟ್ಟೆಯಲ್ಲಿ ಮತ್ತೊಂದು ಭ್ರೂಣ ಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಸ್ತ್ರೀರೋಗ ತಜ್ಞರಾದ ಡಾ. ಪ್ರಸಾದ್ ಅಗರ್ವಾಲ್ ಮಾತನಾಡಿ, ನಾನು ಆರಂಭದಲ್ಲಿ ಆಶ್ಚರ್ಯಚಕಿತನಾದೆ, ಎಚ್ಚರಿಕೆಯಿಂದ ಸ್ಕ್ಯಾನಿಂಗ್ ರಿಪೋರ್ಟ್​ ಪರಿಶೀಲಿಸಿದೆ. ಆಗ ಮಗುವಿನೊಳಗೆ ಭ್ರೂಣ ಇರುವುದು ದೃಢಪಟ್ಟಿದೆ.ಇದು ಅತಿ ಅಪರೂಪದ ಘಟನೆಯಾಗಿದ್ದು, ಪ್ರತಿ 200ರಲ್ಲಿ ಒಂದು ಈ ರೀತಿಯ ಪ್ರಕರಣಗಳಿರುತ್ತವೆ. ಎರಡು ದಿನಗಳ ಹಿಂದೆ 32 ವರ್ಷದ ಮಹಿಳೆಯೊಬ್ಬರಿಗೆ ಸೋನೋಗ್ರಫಿ ನಡೆಸಿದಾಗ ಸರ್ಕಾರಿ ಆಸ್ಪತ್ರೆಯಲ್ಲಿ ಭ್ರೂಣದಲ್ಲಿ ಭ್ರೂಣದ ಪ್ರಕರಣ ಪತ್ತೆಯಾಗಿದೆ.

Maharashtra: ತಾಯಿ ಗರ್ಭದೊಳಗಿರುವ ಮಗುವಿನೊಳಗೆ ಮತ್ತೊಂದು ಭ್ರೂಣ ಪತ್ತೆ
ಭ್ರೂಣImage Credit source: Verywell Health
ನಯನಾ ರಾಜೀವ್
|

Updated on: Jan 29, 2025 | 11:40 AM

Share

ತಾಯಿಯ ಗರ್ಭದೊಳಗಿರುವ ಪುಟ್ಟ ಮಗುವಿನೊಳಗೆ ಮತ್ತೊಂದು ಭ್ರೂಣ ಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಇದು ಅತಿ ಅಪರೂಪದ ಘಟನೆಯಾಗಿದ್ದು, ಪ್ರತಿ 200ರಲ್ಲಿ ಒಂದು ಈ ರೀತಿಯ ಪ್ರಕರಣಗಳಿರುತ್ತವೆ. ಎರಡು ದಿನಗಳ ಹಿಂದೆ 32 ವರ್ಷದ ಮಹಿಳೆಯೊಬ್ಬರಿಗೆ ಸೋನೋಗ್ರಫಿ ನಡೆಸಿದಾಗ ಸರ್ಕಾರಿ ಆಸ್ಪತ್ರೆಯಲ್ಲಿ ಭ್ರೂಣದಲ್ಲಿ ಭ್ರೂಣದ ಪ್ರಕರಣ ಪತ್ತೆಯಾಗಿದೆ. ಭಾರತದಲ್ಲಿ ಕೇವಲ 15-20 ಪ್ರಕರಣಗಳು ಇಲ್ಲಿಯವರೆಗೆ ವರದಿಯಾಗಿವೆ.

ಸ್ತ್ರೀರೋಗ ತಜ್ಞರಾದ ಡಾ. ಪ್ರಸಾದ್ ಅಗರ್ವಾಲ್ ಮಾತನಾಡಿ, ನಾನು ಆರಂಭದಲ್ಲಿ ಆಶ್ಚರ್ಯಚಕಿತನಾದೆ, ಎಚ್ಚರಿಕೆಯಿಂದ ಸ್ಕ್ಯಾನಿಂಗ್ ರಿಪೋರ್ಟ್​ ಪರಿಶೀಲಿಸಿದೆ. ಆಗ ಮಗುವಿನೊಳಗೆ ಭ್ರೂಣ ಇರುವುದು ದೃಢಪಟ್ಟಿದೆ. ಮಹಿಳೆಗೆ 9 ತಿಂಗಳಾಗಿವೆ, ಇನ್ನು ಕೆಲವೇ ದಿನಗಳಲ್ಲಿ ಆಕೆ ಮಗುವಿಗೆ ಜನ್ಮ ಕೊಡುವವಳಿದ್ದಳು, ಆದರೆ ಹಿಂದೆ ಮಾಡಿರುವ ಯಾವ ಸ್ಕ್ಯಾನಿಂಗ್​ಗಳಲ್ಲೂ ಇದು ಪತ್ತೆಯಾಗಿರಲಿಲ್ಲ.

ಇದು ಅಪರೂಪದ ಸ್ಥಿತಿಯಾಗಿದ್ದು, ಹಿಂದಿನ ಸೋನೋಗ್ರಫಿಯಲ್ಲೂ ಕೂಡ ಪತ್ತೆಯಾಗಿರಲಿಲ್ಲ. ಒಂದೆರಡು ದಿನ ನಾನು ವಿವರವಾದ ಅಧ್ಯಯನ ಮಾಡಿದ್ದೇನೆ ಎಂದು ಡಾ. ಅಗರ್ವಾಲ್ ಹೇಳಿದರು.

ಮತ್ತಷ್ಟು ಓದಿ: ಚರಂಡಿಯಲ್ಲಿ ಪತ್ತೆಯಾಯ್ತು ಭ್ರೂಣ, ಅಪ್ರಾಪ್ತನೊಂದಿಗಿನ ಸಂಬಂಧದಿಂದ ಗರ್ಭಿಣಿಯಾಗಿದ್ದ ಬಾಲಕಿ

ತಾಯಿಗೆ ಸಾಮಾನ್ಯ ಹೆರಿಗೆಯಾಗುವ ಸಾಧ್ಯತೆಯಿದೆ ಎಂದು ಬುಲ್ಧಾನ ಆಸ್ಪತ್ರೆಯ ಸಿವಿಲ್ ಸರ್ಜನ್ ಡಾ ಭಗವತ್ ಭೂಸಾರಿ ವಿವರಿಸಿದರು. ಆದಾಗ್ಯೂ, ಜನನದ ನಂತರ ಮಗುವಿಗೆ ತಕ್ಷಣದ ವೈದ್ಯಕೀಯ ಆರೈಕೆಯ ಅಗತ್ಯವಿರುತ್ತದೆ” ಎಂದು ಅವರು ಹೇಳಿದರು.

ಈ ಸ್ಥಿತಿಯ ನಿಖರವಾದ ಕಾರಣವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಲಾಗಿಲ್ಲ, ಆದರೆ ಒಂದೇ ರೀತಿಯ ಅವಳಿಗಳ ಬೆಳವಣಿಗೆಯ ಸಮಯದಲ್ಲಿ ಈ ಅಸಂಗತತೆಯಿಂದ ಉಂಟಾಗುತ್ತದೆ ಎಂದು ಹೇಳಲಾಗುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ