ಮಹಾರಾಷ್ಟ್ರ: ಇದೆಂಥಾ ಮೌಢ್ಯ, ಶಿಶುವಿಗೆ ಅನಾರೋಗ್ಯವೆಂದು 65 ಕಡೆ ಬರೆ ಹಾಕಿದ್ರು

ಶಿಶುವಿಗೆ ಅನಾರೋಗ್ಯವೆಂದು ಪೋಷಕರು 65 ಕಡೆ ಬರೆ ಎಳೆದಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಗುವಿಗೆ ಅನಾರೋಗ್ಯವಾದರೆ ಕಬ್ಬಿಣದ ಕಡ್ಡಿಯನ್ನು ಕಾಯಿಸಿ ಬರೆ ಹಾಕಿದರೆ ಗುಣವಾಗುವುದೆಂಬ ಮೂಢನಂಬಿಕೆಯಿಂದ ಮಗುವಿಗೆ ಬರೆ ಹಾಕಿದ್ದಾರೆ. ಮಗು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕೇವಲ 22 ದಿನಗಳ ಶಿಶುವಿಗೆ 65 ಕಡೆ ಬರೆ ಹಾಕಲಾಗಿದೆ.

ಮಹಾರಾಷ್ಟ್ರ: ಇದೆಂಥಾ ಮೌಢ್ಯ, ಶಿಶುವಿಗೆ ಅನಾರೋಗ್ಯವೆಂದು 65 ಕಡೆ ಬರೆ ಹಾಕಿದ್ರು
ಮಗು
Image Credit source: Firstcry

Updated on: Feb 28, 2025 | 9:21 AM

ಮಹಾರಾಷ್ಟ್ರ, ಫೆಬ್ರವರಿ 28: ಶಿಶುವಿಗೆ ಅನಾರೋಗ್ಯವೆಂದು ಪೋಷಕರು 65 ಕಡೆ ಬರೆ ಎಳೆದಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಗುವಿಗೆ ಅನಾರೋಗ್ಯವಾದರೆ ಕಬ್ಬಿಣದ ಕಡ್ಡಿಯನ್ನು ಕಾಯಿಸಿ ಬರೆ ಹಾಕಿದರೆ ಗುಣವಾಗುವುದೆಂಬ ಮೂಢನಂಬಿಕೆಯಿಂದ ಮಗುವಿಗೆ ಬರೆ ಹಾಕಿದ್ದಾರೆ. ಮಗು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೇವಲ 22 ದಿನಗಳ ಶಿಶುವಿಗೆ 65 ಕಡೆ ಬರೆ ಹಾಕಲಾಗಿದೆ.

ಈ ಘಟನೆ ಮಹಾರಾಷ್ಟ್ರದ ಅಮರಾವತಿಯಲ್ಲಿ ನಡೆದಿದೆ. ಮಗುವಿನ ಸ್ಥಿತಿ ಶೀಘ್ರವಾಗಿ ಹದಗೆಟ್ಟಿತು, ಅಂತಿಮವಾಗಿ ಗಂಭೀರ ಸ್ಥಿತಿಯಲ್ಲಿ ಅಮರಾವತಿಯ ಡಫರಿನ್ ಆಸ್ಪತ್ರೆಗೆ ದಾಖಲಿಸಲಾಯಿತು.

ಫುಲ್ವಂತಿ ರಾಜು ಅಧಿಕಾರ್ ಎಂಬ ಶಿಶು ಅನಾರೋಗ್ಯಕ್ಕೆ ಒಳಗಾಗಿತ್ತು, ಸಂಬಂದಿಕರು ಬಂದವರು ಮಗುವಿಗೆ ಬರೆ ಹಾಕಿದರೆ ಎಲ್ಲಾ ಸರಿ ಹೋಗುತ್ತದೆ ಎಂದು ಹೇಳಿ ಎಲ್ಲಾ ಕಡೆ ಬರೆ ಎಳೆದಿದ್ದಾರೆ. ಮಗುವಿನ ಹೊಟ್ಟೆಗೆ 65 ಬಾರಿ ಬರೆ ಹಾಕಿದ್ದಾರೆ.
ಮಗುವಿನ ಪೋಷಕರಾದ ರಾಜು ಅಧಿಕಾರ್ ಮತ್ತು ಅವರ ಪತ್ನಿ ಕೂಡ ಈ ಭಯಾನಕ ಘಟನೆಯಲ್ಲಿ ಭಾಗಿಯಾಗಿದ್ದಾರೆ.

ಈ ಕೃತ್ಯವು ಮಗುವಿನ ಅನಾರೋಗ್ಯವನ್ನು ಗುಣಪಡಿಸುತ್ತದೆ ಎಂದು ಸಂಬಂಧಿಕರು ನಂಬಿದ್ದರು, ಇದು ಆ ಪ್ರದೇಶದಲ್ಲಿ ಇನ್ನೂ ಅಪಾಯಕಾರಿ ಮತ್ತು ಅವೈಜ್ಞಾನಿಕ ಪದ್ಧತಿ ನಡೆಯುತ್ತಿದೆ ಎಂಬುದಕ್ಕೆ ನಿದರ್ಶನವಾಗಿದೆ.

ಮತ್ತಷ್ಟು ಓದಿ: ಯಾದಗಿರಿಯಲ್ಲಿ‌ 2 ವಾರದ ಅಂತರದಲ್ಲಿ 3 ನವಜಾತ ಶಿಶುಗಳ ಸಾವು, 130ಕ್ಕೆ ಏರಿಕೆ

ಗಾಯಗಳ ತೀವ್ರತೆ ಮತ್ತು ಉಸಿರಾಟದ ತೊಂದರೆಯಿಂದಾಗಿ ಶಿಶುವನ್ನು ಆರಂಭದಲ್ಲಿ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು ಅಂತಿಮವಾಗಿ ಆಸ್ಪತ್ರೆಗೆ ದಾಖಲಿಸಲಾಯಿತು.

ಅಮರಾವತಿಯ ಜಿಲ್ಲಾ ಮಹಿಳಾ ಆಸ್ಪತ್ರೆಯ ವೈದ್ಯರು ಮಗುವಿಗೆ ತೀವ್ರ ಉಸಿರಾಟದ ತೊಂದರೆ ಉಂಟಾಗಿದೆ ಎಂದು ಹೇಳಿದ್ದಾರೆ. ಹೊಟ್ಟೆಯ ಮೇಲೆ ಗಾಯಗಳಾಗಿರುವುದನ್ನು ಒಪ್ಪಿಕೊಂಡರೂ, ಪ್ರಾಥಮಿಕ ಕಾಳಜಿ ಮಗುವಿನ ಉಸಿರಾಟದ ತೊಂದರೆ ಎಂದು ಹೇಳಿದರು. ವಿಶೇಷ ಸೌಲಭ್ಯಗಳ ಕೊರತೆಯಿಂದಾಗಿ, ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ನಾಗ್ಪುರಕ್ಕೆ ಕಳುಹಿಸುವ ಸಾಧ್ಯತೆಯಿದೆ ಎಂದು ವರದಿ ತಿಳಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us