AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra: ರಾಯಗಢದಲ್ಲಿ ಭೂಕುಸಿತ, ಸಾವಿನ ಸಂಖ್ಯೆ 22ಕ್ಕೆ ಏರಿಕೆ

ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ್ ತಹಸಿಲ್‌ನ ಇರ್ಶಲವಾಡಿ ಗ್ರಾಮದಲ್ಲಿ ಭಾರೀ ಭೂಕುಸಿತದಿಂದ ಇಲ್ಲಿಯವರೆಗೆ 22 ಜನ ಸಾವನ್ನಪ್ಪಿದ್ದಾರೆ ಎಂದು ಎನ್​​ಡಿಆರ್​ಎಫ್​​ ಅಧಿಕಾರಿಗಳು ತಿಳಿಸಿದ್ದಾರೆ.

Maharashtra: ರಾಯಗಢದಲ್ಲಿ ಭೂಕುಸಿತ, ಸಾವಿನ ಸಂಖ್ಯೆ 22ಕ್ಕೆ ಏರಿಕೆ
ಖಲಾಪುರ್ ತಹಸಿಲ್‌ನ ಇರ್ಶಲವಾಡಿ ಗ್ರಾಮದಲ್ಲಿ ಭೂಕುಸಿತ
ಅಕ್ಷಯ್​ ಪಲ್ಲಮಜಲು​​
|

Updated on: Jul 22, 2023 | 1:12 PM

Share

ಮುಂಬೈ, ಜು.22: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ್ ತಹಸಿಲ್‌ನ ಇರ್ಶಲವಾಡಿ ಗ್ರಾಮದಲ್ಲಿ ಭಾರೀ ಭೂಕುಸಿತದಿಂದ ಇಲ್ಲಿಯವರೆಗೆ 22 ಜನ ಸಾವನ್ನಪ್ಪಿದ್ದಾರೆ ಎಂದು ಎನ್​​ಡಿಆರ್​ಎಫ್​​ ಅಧಿಕಾರಿಗಳು ತಿಳಿಸಿದ್ದಾರೆ. ಭೂಕುಸಿತದಿಂದ ಅವಶೇಷಗಳಡಿಯಲ್ಲಿ ಸಿಲುಕಿರುವ ಜನರ ರಕ್ಷಣೆ ಕಾರ್ಯಚರಣೆ ಮುಂದುವರಿದಿದೆ. ರಕ್ಷಣಾ ಕಾರ್ಯಚರಣೆ ಮೂರನೇ ದಿನಕ್ಕೆ ಮುಂದುವರಿದಿದ್ದು, ಒಟ್ಟು 22 ಜನ ಸಾವನ್ನಪ್ಪಿದ್ದಾರೆ. 86 ಮಂದಿ ಇನ್ನೂ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರೀ ಮಳೆಯಿಂದ ಶುಕ್ರವಾರ (ಜು.22) ರಕ್ಷಣಾ ಕಾರ್ಯಚರಣೆ ಸ್ಥಗಿತಗೊಂಡಿತು. ನಾಲ್ಕು ಎನ್‌ಡಿಆರ್‌ಎಫ್ ತಂಡಗಳು ಮತ್ತು ಇತರ ಏಜೆನ್ಸಿಗಳು, ಸ್ಥಳೀಯರು ಇಂದು ಬೆಳಿಗ್ಗೆ ಕಾರ್ಯಾಚರಣೆಯನ್ನು ಪುನರಾರಂಭಿಸಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಈ ಪ್ರದೇಶದಲ್ಲಿ ಒಟ್ಟು 48 ಕುಟುಂಬಗಳು ವಾಸವಾಗಿದ್ದು, 17 ಮನೆಗಳು ಭೂಕುಸಿತದ ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದೆ. ರಾಯಗಢ ಜಿಲ್ಲಾ ವಿಪತ್ತು ನಿರ್ವಹಣಾ ಕಚೇರಿಯ ಪ್ರಕಾರ, 48 ಕುಟುಂಬಗಳ 229 ಜನರಲ್ಲಿ ಇಲ್ಲಿಯವರೆಗೆ 22 ಜನ ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಇನ್ನೂ 111 ಮಂದಿ ಸುರಕ್ಷಿತವಾಗಿದ್ದಾರೆ, 86 ಜನರನ್ನು ಇನ್ನೂ ಪತ್ತೆ ನಡೆಸಲಾಗುತ್ತಿದೆ ಎಂದು ಹೇಳಿದೆ.

ಇದನ್ನೂ ಓದಿ: ಖಲಾಪುರ ಭೂಕುಸಿತ, ಇದುವರೆಗೆ 16 ಸಾವು, 100 ಮಂದಿಗೆ ಗಾಯ, ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

ಗಾಯಗೊಂಡಿರುವವರನ್ನು ನಿರಾಶ್ರಿತರ ಶಿಬಿರಗಳಲ್ಲಿ ದಾಖಲಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ರಕ್ಷಣಾ ಕಾರ್ಯಚರಣೆ ಬಗ್ಗೆ ರಾಜ್ಯ ಸರ್ಕಾರ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆಯುತ್ತಿದೆ. ಭೂಕುಸಿತ ಘಟನೆಯ ಹಿನ್ನೆಲೆಯಲ್ಲಿ, ರಾಜ್ಯದ ಎಲ್ಲಾ ಭೂಕುಸಿತ ಪೀಡಿತ ಪ್ರದೇಶಗಳ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ಶುಕ್ರವಾರ ರಾಜ್ಯ ವಿಧಾನಸಭೆಗೆ ತಿಳಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​