AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra: ರಾಯಗಢದಲ್ಲಿ ಭೂಕುಸಿತ, ಸಾವಿನ ಸಂಖ್ಯೆ 22ಕ್ಕೆ ಏರಿಕೆ

ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ್ ತಹಸಿಲ್‌ನ ಇರ್ಶಲವಾಡಿ ಗ್ರಾಮದಲ್ಲಿ ಭಾರೀ ಭೂಕುಸಿತದಿಂದ ಇಲ್ಲಿಯವರೆಗೆ 22 ಜನ ಸಾವನ್ನಪ್ಪಿದ್ದಾರೆ ಎಂದು ಎನ್​​ಡಿಆರ್​ಎಫ್​​ ಅಧಿಕಾರಿಗಳು ತಿಳಿಸಿದ್ದಾರೆ.

Maharashtra: ರಾಯಗಢದಲ್ಲಿ ಭೂಕುಸಿತ, ಸಾವಿನ ಸಂಖ್ಯೆ 22ಕ್ಕೆ ಏರಿಕೆ
ಖಲಾಪುರ್ ತಹಸಿಲ್‌ನ ಇರ್ಶಲವಾಡಿ ಗ್ರಾಮದಲ್ಲಿ ಭೂಕುಸಿತ
ಅಕ್ಷಯ್​ ಪಲ್ಲಮಜಲು​​
|

Updated on: Jul 22, 2023 | 1:12 PM

Share

ಮುಂಬೈ, ಜು.22: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ್ ತಹಸಿಲ್‌ನ ಇರ್ಶಲವಾಡಿ ಗ್ರಾಮದಲ್ಲಿ ಭಾರೀ ಭೂಕುಸಿತದಿಂದ ಇಲ್ಲಿಯವರೆಗೆ 22 ಜನ ಸಾವನ್ನಪ್ಪಿದ್ದಾರೆ ಎಂದು ಎನ್​​ಡಿಆರ್​ಎಫ್​​ ಅಧಿಕಾರಿಗಳು ತಿಳಿಸಿದ್ದಾರೆ. ಭೂಕುಸಿತದಿಂದ ಅವಶೇಷಗಳಡಿಯಲ್ಲಿ ಸಿಲುಕಿರುವ ಜನರ ರಕ್ಷಣೆ ಕಾರ್ಯಚರಣೆ ಮುಂದುವರಿದಿದೆ. ರಕ್ಷಣಾ ಕಾರ್ಯಚರಣೆ ಮೂರನೇ ದಿನಕ್ಕೆ ಮುಂದುವರಿದಿದ್ದು, ಒಟ್ಟು 22 ಜನ ಸಾವನ್ನಪ್ಪಿದ್ದಾರೆ. 86 ಮಂದಿ ಇನ್ನೂ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರೀ ಮಳೆಯಿಂದ ಶುಕ್ರವಾರ (ಜು.22) ರಕ್ಷಣಾ ಕಾರ್ಯಚರಣೆ ಸ್ಥಗಿತಗೊಂಡಿತು. ನಾಲ್ಕು ಎನ್‌ಡಿಆರ್‌ಎಫ್ ತಂಡಗಳು ಮತ್ತು ಇತರ ಏಜೆನ್ಸಿಗಳು, ಸ್ಥಳೀಯರು ಇಂದು ಬೆಳಿಗ್ಗೆ ಕಾರ್ಯಾಚರಣೆಯನ್ನು ಪುನರಾರಂಭಿಸಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಈ ಪ್ರದೇಶದಲ್ಲಿ ಒಟ್ಟು 48 ಕುಟುಂಬಗಳು ವಾಸವಾಗಿದ್ದು, 17 ಮನೆಗಳು ಭೂಕುಸಿತದ ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದೆ. ರಾಯಗಢ ಜಿಲ್ಲಾ ವಿಪತ್ತು ನಿರ್ವಹಣಾ ಕಚೇರಿಯ ಪ್ರಕಾರ, 48 ಕುಟುಂಬಗಳ 229 ಜನರಲ್ಲಿ ಇಲ್ಲಿಯವರೆಗೆ 22 ಜನ ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಇನ್ನೂ 111 ಮಂದಿ ಸುರಕ್ಷಿತವಾಗಿದ್ದಾರೆ, 86 ಜನರನ್ನು ಇನ್ನೂ ಪತ್ತೆ ನಡೆಸಲಾಗುತ್ತಿದೆ ಎಂದು ಹೇಳಿದೆ.

ಇದನ್ನೂ ಓದಿ: ಖಲಾಪುರ ಭೂಕುಸಿತ, ಇದುವರೆಗೆ 16 ಸಾವು, 100 ಮಂದಿಗೆ ಗಾಯ, ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

ಗಾಯಗೊಂಡಿರುವವರನ್ನು ನಿರಾಶ್ರಿತರ ಶಿಬಿರಗಳಲ್ಲಿ ದಾಖಲಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ರಕ್ಷಣಾ ಕಾರ್ಯಚರಣೆ ಬಗ್ಗೆ ರಾಜ್ಯ ಸರ್ಕಾರ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆಯುತ್ತಿದೆ. ಭೂಕುಸಿತ ಘಟನೆಯ ಹಿನ್ನೆಲೆಯಲ್ಲಿ, ರಾಜ್ಯದ ಎಲ್ಲಾ ಭೂಕುಸಿತ ಪೀಡಿತ ಪ್ರದೇಶಗಳ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ಶುಕ್ರವಾರ ರಾಜ್ಯ ವಿಧಾನಸಭೆಗೆ ತಿಳಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?