AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಯುತಿ ಸಭೆ ಏಕಾಏಕಿ ರದ್ದು, ಮಹಾರಾಷ್ಟ್ರದಲ್ಲಿ ಮುಂದುವರೆದ ರಾಜಕೀಯ ಪ್ರಕ್ಷುಬ್ಧತೆ

ಮಹಾರಾಷ್ಟ್ರ ನೂತನ ಮುಖ್ಯಮಂತ್ರಿ ಹೆಸರು ಇಂದು ಘೋಷಣೆಯಾಗಬೇಕಿತ್ತು. ಆದರೆ ಏಕಾಏಕಿ ಮಹಾಯುತಿ ಸಭೆ ರದ್ದಾಗಿದೆ. ಸಿಎಂ ಹುದ್ದೆ ಘೋಷಣೆಗೂ ಮುನ್ನ ನಡೆಯಬೇಕಿದ್ದ ಮಹಾಮೈತ್ರಿಕೂಟ ಸಭೆ ರದ್ದಾಗಿದೆ. ಈ ಸಭೆಯನ್ನು ಇದ್ದಕ್ಕಿದ್ದಂತೆ ರದ್ದುಗೊಳಿಸಲಾಯಿತು. ಏಕನಾಥ್ ಶಿಂಧೆ ತಮ್ಮ ಮೂಲಗಾಂವ್ ಸತಾರಾಕ್ಕೆ ಹೋಗುತ್ತಿದ್ದಾರೆ.

ಮಹಾಯುತಿ ಸಭೆ ಏಕಾಏಕಿ ರದ್ದು, ಮಹಾರಾಷ್ಟ್ರದಲ್ಲಿ ಮುಂದುವರೆದ ರಾಜಕೀಯ ಪ್ರಕ್ಷುಬ್ಧತೆ
Follow us
ನಯನಾ ರಾಜೀವ್
|

Updated on:Nov 29, 2024 | 2:46 PM

ಮಹಾರಾಷ್ಟ್ರ ನೂತನ ಮುಖ್ಯಮಂತ್ರಿ ಹೆಸರು ಇಂದು ಘೋಷಣೆಯಾಗಬೇಕಿತ್ತು. ಆದರೆ ಏಕಾಏಕಿ ಮಹಾಯುತಿ ಸಭೆ ರದ್ದಾಗಿದೆ. ಸಿಎಂ ಹುದ್ದೆ ಘೋಷಣೆಗೂ ಮುನ್ನ ನಡೆಯಬೇಕಿದ್ದ ಮಹಾಮೈತ್ರಿಕೂಟ ಸಭೆ ರದ್ದಾಗಿದೆ. ಈ ಸಭೆಯನ್ನು ಇದ್ದಕ್ಕಿದ್ದಂತೆ ರದ್ದುಗೊಳಿಸಲಾಯಿತು. ಏಕನಾಥ್ ಶಿಂಧೆ ತಮ್ಮ ಮೂಲಗಾಂವ್ ಸತಾರಾಕ್ಕೆ ಹೋಗುತ್ತಿದ್ದಾರೆ.

ಮುಂದಿನ 2 ದಿನಗಳ ಕಾಲ ಈ ಸಭೆ ನಡೆಯುವುದಿಲ್ಲ. ಸಭೆಯನ್ನು ರದ್ದುಗೊಳಿಸಲು ಕಾರಣ ಇನ್ನೂ ಬಹಿರಂಗವಾಗಿಲ್ಲ. ಮೂಲಗಳ ಪ್ರಕಾರ, ಮಹಾರಾಷ್ಟ್ರದಲ್ಲಿ ಬಿಜೆಪಿಯ ಗುಂಪು ನಾಯಕನನ್ನು ಆಯ್ಕೆ ಮಾಡಲಾಗುವುದು, ನಂತರ ಮಹಾಮೈತ್ರಿಕೂಟ ಸಭೆ ಪ್ರಾರಂಭವಾಗಬಹುದು. ಮಾಹಿತಿ ಪ್ರಕಾರ ಮಹಾರಾಷ್ಟ್ರದ ಹಂಗಾಮಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಕೂಡ ಸತಾರಾದಲ್ಲಿರುವ ತಮ್ಮ ಗ್ರಾಮಕ್ಕೆ ತೆರಳಲು ಸಿದ್ಧತೆ ನಡೆಸಿದ್ದಾರೆ.

ನಿನ್ನೆ ಮಹಾಯುತಿ, ದೇವೇಂದ್ರ ಫಡ್ನವಿಸ್, ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಅವರ ಮೂರು ದೊಡ್ಡ ಮುಖಗಳು ದೆಹಲಿಯಲ್ಲಿ ಸಭೆ ನಡೆಸಿದ್ದವು. ಗೃಹ ಸಚಿವ ಅಮಿತ್ ಶಾ ಅವರ ನಿವಾಸದಲ್ಲಿ ಈ ಸಭೆ ನಡೆದಿದೆ. ಈ ಸಭೆಯಲ್ಲಿ ಮಹಾಯುತಿ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಿದ್ದಾರೆ ಎಂಬ ಸುದ್ದಿ ಹೊರಬಿದ್ದಿತ್ತು.

ಮುಂಬೈನಲ್ಲಿ ಮಹಾಯುತಿ ಸಭೆಯ ನಂತರ ಸಿಎಂ ಮುಖವನ್ನು ಪ್ರಕಟಿಸಲಾಗುವುದು. ಆದರೆ, ಈಗ ಈ ಸಭೆಯೇ ರದ್ದಾಗಿದೆ. ನಿಸ್ಸಂಶಯವಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಯಾರೆಂಬುದನ್ನು ತಿಳಿಯಲು ಸ್ವಲ್ಪ ಸಮಯ ಕಾಯಬೇಕಾಗಬಹುದು.

ಮಹಾರಾಷ್ಟ್ರದಲ್ಲಿ ಚುನಾವಣಾ ಫಲಿತಾಂಶ ಪ್ರಕಟವಾಗಿ ಸುಮಾರು ಒಂದು ವಾರ ಕಳೆದಿದೆ. ಆದರೆ, ಮುಖ್ಯಮಂತ್ರಿ ಸ್ಥಾನದ ಬಗ್ಗೆ ಬಿಜೆಪಿ, ಶಿವಸೇನೆ ಮತ್ತು ಎನ್‌ಸಿಪಿ ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ. ಶುಕ್ರವಾರ ಸಂಜೆ ಮಹಾಯುತಿ ಸಭೆ ನಡೆಯಬಹುದು ಹೇಳಲಾಗಿತ್ತು. ಆದರೆ ಸಭೆಯನ್ನು ರದ್ದುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮತ್ತಷ್ಟು ಓದಿ: ಇವಿಎಂ ಮಂದಿರ ನಿರ್ಮಾಣ ಮಾಡ್ಬೇಕು, ಒಂದು ಕಡೆ ಮೋದಿ, ಮತ್ತೊಂದು ಕಡೆ ಅಮಿತ್ ಶಾ ಮೂರ್ತಿ ಇರ್ಬೇಕು: ಸಂಜಯ್ ರಾವತ್

ಮೊದಲು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈವರೆಗೆ ಬಂದಿರುವ ಮಾಹಿತಿ ಪ್ರಕಾರ ಮೊದಲು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಅದರಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗುತ್ತದೆ. ನಂತರ ಮಹಾಯುತಿಯ ಜಂಟಿ ಸಭೆ ನಡೆಯಲಿದೆ. ಡಿಸೆಂಬರ್ 1 ಅಥವಾ 2 ರಂದು ದೆಹಲಿಯಿಂದ ಬರುವ ಎರಡೂ ವೀಕ್ಷಕರ ಸಮ್ಮುಖದಲ್ಲಿ ಸಿಎಂ ಘೋಷಣೆಯಾಗಬಹುದು. ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಆಯೋಜಿಸಬಹುದು ಎಂದು ಹೇಳಲಾಗುತ್ತಿದೆ.

ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಹಾಯುತಿ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿದರು. ಈ ಸಭೆಯಲ್ಲಿ ಅಜಿತ್ ಪವಾರ್, ಏಕನಾಥ್ ಶಿಂಧೆ ಮತ್ತು ದೇವೇಂದ್ರ ಫಡ್ನವಿಸ್ ಭಾಗವಹಿಸಿದ್ದರು. ಸಭೆಯ ನಂತರ, ಫಡ್ನವಿಸ್ ಅವರನ್ನು ಸಿಎಂ ಮಾಡಲು ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಒಪ್ಪಿಗೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಏಕನಾಥ್ ಶಿಂಧೆ ಅವರಿಗೆ ಸೂಕ್ತ ಗೌರವ ನೀಡುವುದಾಗಿ ಬಿಜೆಪಿ ಭರವಸೆ ನೀಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:39 pm, Fri, 29 November 24

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ