AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ, ಆರೋಪಿ ಜೈಲಿನಲ್ಲೇ ಆತ್ಮಹತ್ಯೆ

ಬಾಲಕಿ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿ ಜೈಲು ಸೇರಿದ್ದ ಆರೋಪಿ ಜೈಲಿನಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ಪ್ರಕರಣದ ಪ್ರಮುಖ ಆರೋಪಿ ವಿಶಾಲ್ ಗಾವ್ಲಿ ಭಾನುವಾರ ಬೆಳಗ್ಗೆ ತಲೋಜಾ ಜೈಲಿನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಮೂರು ತಿಂಗಳಿಗೂ ಹೆಚ್ಚು ಕಾಲ ಬಂಧನದಲ್ಲಿದ್ದ ಆರೋಪಿ ತಲೋಜಾ ಕೇಂದ್ರ ಕಾರಾಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜೈಲು ಅಧಿಕಾರಿಗಳ ಪ್ರಕಾರ, ಗಾವ್ಲಿ ಹಿಂದಿನ ಸಂಜೆ ಊಟ ಮಾಡಿದ್ದ ಮತ್ತು ಬೆಳಗಿನ ಜಾವ 3.30 ರ ಸುಮಾರಿಗೆ ಶೌಚಾಲಯಕ್ಕೆ ಹೋಗುತ್ತಿರುವುದು ಕಂಡುಬಂದಿದೆ.

ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ, ಆರೋಪಿ ಜೈಲಿನಲ್ಲೇ ಆತ್ಮಹತ್ಯೆ
ಜೈಲುImage Credit source: Harvard Gazette
ನಯನಾ ರಾಜೀವ್
|

Updated on: Apr 13, 2025 | 12:15 PM

Share

ಕಲ್ಯಾಣ್, ಏಪ್ರಿಲ್ 13: ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಪ್ರಕರಣದಲ್ಲಿ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಕಲ್ಯಾಣ್​ನಲ್ಲಿ ನಡೆದಿದೆ. ಮಹಾರಾಷ್ಟ್ರದ ಕಲ್ಯಾಣ್‌ನಲ್ಲಿ ಅಪ್ರಾಪ್ತ ಬಾಲಕಿಯ ಅಪಹರಣ(Kidnap), ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರಮುಖ ಆರೋಪಿ ವಿಶಾಲ್ ಗಾವ್ಲಿ ಭಾನುವಾರ ಬೆಳಗ್ಗೆ ತಲೋಜಾ ಜೈಲಿನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

ಮೂರು ತಿಂಗಳಿಗೂ ಹೆಚ್ಚು ಕಾಲ ಬಂಧನದಲ್ಲಿದ್ದ ಆರೋಪಿ ತಲೋಜಾ ಕೇಂದ್ರ ಕಾರಾಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜೈಲು ಅಧಿಕಾರಿಗಳ ಪ್ರಕಾರ, ಗಾವ್ಲಿ ಹಿಂದಿನ ಸಂಜೆ ಊಟ ಮಾಡಿದ್ದ ಮತ್ತು ಬೆಳಗಿನ ಜಾವ 3.30 ರ ಸುಮಾರಿಗೆ ಶೌಚಾಲಯಕ್ಕೆ ಹೋಗುತ್ತಿರುವುದು ಕಂಡುಬಂದಿದೆ.

ಬೆಳಗಿನ ಜಾವ 4.00 ಗಂಟೆಯ ಸುಮಾರಿಗೆ ಮತ್ತೊಬ್ಬ ಕೈದಿ ಜೈಲಿನ ಶೌಚಾಲಯದಲ್ಲಿ ಈತ ನೇಣುಹಾಕಿಕೊಂಡಿರುವುದನ್ನು ಕಂಡು ಕೂಡಲೇ ಅಧಿಕಾರಿಗಳಿಗೆ ತಿಳಿಸಿದ್ದಾರೆ. ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜೆಜೆ ಆಸ್ಪತ್ರೆಗೆ ಕಳುಹಿಸಲಾಯಿತು. ಡಿಸೆಂಬರ್ 2024 ರಲ್ಲಿ ಅಪ್ರಾಪ್ತ ಬಾಲಕಿಯ ಅಪಹರಣ, ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಗಾವ್ಲಿ ವಿಚಾರಣೆ ಎದುರಿಸುತ್ತಿದ್ದ.

ಇದನ್ನೂ ಓದಿ
Image
ಭಾರತದ ಮೊದಲ ಕಾಫಿ ತೋಟ ತಾಣದ ಕಥೆಯನ್ನು ಹಂಚಿಕೊಂಡ ಆನಂದ್‌ ಮಹೀಂದ್ರಾ
Image
ಕಾಲೇಜು ಪ್ರೊಫೆಸರ್‌ ಎನರ್ಜಿಗೆ ಫಿದಾ ಆದ ವಿದ್ಯಾರ್ಥಿಗಳು
Image
ಬೆಂಗಳೂರಿನಲ್ಲಿ ಆಟೋ ಬುಕ್ ಮಾಡುವ ಟಿಪ್ಸ್ ನೀಡಬೇಕು
Image
ಒಂದೇ ಮಂಟಪದಲ್ಲಿ, ಒಂದೇ ಸಮಯದಲ್ಲಿ ಇಬ್ಬರು ಮಹಿಳೆಯರನ್ನು ಮದುವೆಯಾದ ವ್ಯಕ್ತಿ

ಪತ್ನಿ ಸಾಕ್ಷಿ ಗಾವ್ಲಿ ಅಪರಾಧಕ್ಕೆ ಸಾಕ್ಷಿಯಾಗಿದ್ದಳು. ಗೌಲಿಯ ಮಾನಸಿಕ ಒತ್ತಡ, ಅವರ ವಿರುದ್ಧ ಪತ್ನಿ ನೀಡಿದ ಸಾಕ್ಷ್ಯದಿಂದ ಆತನಿಗೆ ಹೆಚ್ಚು ನೋವಾಗಿರಬಹುದು ಎಂದು ಹೇಳಲಾಗುತ್ತಿದೆ. 2024ರ ಡಿಸೆಂಬರ್ 23ರಂದು ವಿಶಾಲ್ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿದ್ದ, ಆಕೆಯ ಮೇಲೆ ಅತ್ಯಾಚಾರ ಮಾಡಿ, ಬಳಿಕ ಕೊಲೆ ಮಾಡಿದ್ದ.

ಮತ್ತಷ್ಟು ಓದಿ: ಅಯೋಧ್ಯೆ: ಪತ್ನಿ, ಮೂರು ವರ್ಷದ ಮಗುವನ್ನು ಕೊಂದು ವ್ಯಕ್ತಿ ಪರಾರಿ

ಪತ್ನಿ ಸಾಕ್ಷಿ ಸಹಾಯದಿಂದಲೇ ಆತ ಶವವನ್ನು ಭಿವಾಂಡಿಯ ಬಾಪಗಾವ್ ಪ್ರದೇಶದಲ್ಲಿ ವಿಲೇವಾರಿ ಮಾಡಿದ್ದ. ಆತನನ್ನು ಬಂಧಿಸಿದ ಬಳಿಕ ಇದೇ ಮೊದಲಲ್ಲ ಆತನಿಗೆ ಮಕ್ಕಳಿಗೆ ಕಿರುಕುಳ ನೀಡಿರುವ ಇತಿಹಾಸವಿದೆ ಎಂಬುದು ತಿಳಿದುಬಂದಿತ್ತು. ಆತನ ವಿರುದ್ಧ ಮೂರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು. ಬಾಲಕಿಯ ಕುಟುಂಬ ಪ್ರತಿಭಟನೆ ನಡೆಸಿ, ಆರೋಪಿಗೆ ಮರಣದಂಡನೆ ವಿಧಿಸಬೇಕೆಂದು ಒತ್ತಾಯಿಸಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್