AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೊಸೆಯಾಗಬೇಕಾದವಳನ್ನೇ ಅಪ್ಪ ಮದುವೆಯಾಗಿದ್ದು ಕಂಡು ಸನ್ಯಾಸಿಯಾಗಲು ನಿರ್ಧರಿಸಿದ ಮಗ

ತನ್ನ ಮಗನ ಹೆಂಡತಿಯಾಗಿ, ತಮ್ಮ ಮನೆಗೆ ಸೊಸೆಯಾಗಬೇಕಾದವಳನ್ನೇ ಮಹಾರಾಷ್ಟ್ರದ ವ್ಯಕ್ತಿಯೊಬ್ಬ ಮದುವೆಯಾಗಿರುವ ಘಟನೆ ನಡೆದಿದೆ. ಇದರಿಂದ ದುಃಖಿತನಾದ ಮಗ ಸನ್ಯಾಸಿಯಾಗಲು ನಿರ್ಧರಿಸಿದ್ದಾನೆ. ಮಹಾರಾಷ್ಟ್ರದ ನಾಶಿಕ್‌ನಲ್ಲಿ ಈ ಘಟನೆ ನಡೆದಿದೆ. ಮಗನ ಮದುವೆಗೆ ಕೆಲವೇ ದಿನಗಳ ಮೊದಲು ಆತ ಮದುವೆಯಾಗಬೇಕಿದ್ದ ಯುವತಿಯನ್ನು ಅಪ್ಪನೇ ಮದುವೆಯಾಗಿಬಿಟ್ಟಿದ್ದಾನೆ. ಇದರಿಂದ ಆಘಾತಗೊಂಡ ಮಗ ಇನ್ನೆಂದೂ ಮದುವೆಯಾಗದಿರಲು ನಿರ್ಧರಿಸಿದ್ದಾನೆ.

ಸೊಸೆಯಾಗಬೇಕಾದವಳನ್ನೇ ಅಪ್ಪ ಮದುವೆಯಾಗಿದ್ದು ಕಂಡು ಸನ್ಯಾಸಿಯಾಗಲು ನಿರ್ಧರಿಸಿದ ಮಗ
Maharashtra Son
ಸುಷ್ಮಾ ಚಕ್ರೆ
|

Updated on: Jan 09, 2025 | 5:20 PM

Share

ನಾಶಿಕ್: ತಾನು ಮದುವೆಯಾಗಬೇಕಿದ್ದ ಹುಡುಗಿಯನ್ನು ತನ್ನ ತಂದೆಯೇ ಮದುವೆಯಾದ ವಿಷಯ ತಿಳಿದು ಆಘಾತಕ್ಕೊಳಗಾದ ಮಗ ಸನ್ಯಾಸಿಯಾಗಲು ನಿರ್ಧರಿಸಿರುವ ಘಟನೆ ಮಹಾರಾಷ್ಟ್ರದ ನಾಶಿಕ್​ನಲ್ಲಿ ನಡೆದಿದೆ. ತನ್ನ ಮದುವೆಗೆ ಸ್ವಲ್ಪ ದಿನ ಮೊದಲು ತನ್ನ ಭಾವಿ ಪತ್ನಿಯನ್ನು ತನ್ನ ತಂದೆಯೇ ಮದುವೆಯಾದ ಬಳಿಕ ವ್ಯಕ್ತಿಯೊಬ್ಬ ಸನ್ಯಾಸಿಯಾಗಲು ನಿರ್ಧರಿಸಿದ್ದಾನೆ.

ವಿವರಗಳ ಪ್ರಕಾರ, ಆ ವ್ಯಕ್ತಿ ತನ್ನ ತಂದೆಯೊಂದಿಗೆ ವಾಸಿಸುತ್ತಿದ್ದನು. ಅವರು ಸ್ವಲ್ಪ ಸಮಯದ ಹಿಂದೆ ತನ್ನ ಮಗನಿಗೆ ಸೂಕ್ತವಾದ ಜೋಡಿಯನ್ನು ಹುಡುಕಲು ಪ್ರಾರಂಭಿಸಿದರು. ತನ್ನ ಮಗ ಮತ್ತು ಯುವತಿ ಒಪ್ಪಿದ ನಂತರ ಮದುವೆಯನ್ನು ನಿಗದಿ ಮಾಡಿದ್ದರು. ಕೆಲವೇ ದಿನಗಳಲ್ಲಿ ಮದುವೆ ಕೂಡ ನಡೆಯುವುದರಲ್ಲಿತ್ತು. ಆದರೆ, ಮಗನಿಗಾಗಿ ನೋಡಿದ್ದ ಯುವತಿಯ ಮೇಲೆ ಅಪ್ಪನಿಗೇ ಮನಸಾಗಿದ್ದರಿಂದ ಸೊಸೆಯಾಗಬೇಕಾಗಿದ್ದ ಯುವತಿಯನ್ನು ಆತನೇ ಮದುವೆ ಮಾಡಿಕೊಂಡು ಮನೆಗೆ ಕರೆದುಕೊಂಡು ಬಂದಿದ್ದಾನೆ.

ಇದನ್ನೂ ಓದಿ: Viral: ಸೀಟಿಗಾಗಿ ದೆಹಲಿ ಮೆಟ್ರೋದಲ್ಲಿ ಮಹಿಳೆಯರಿಬ್ಬರ ನಡುವೆ ನಡೆಯಿತು ಜಡೆ ಜಗಳ; ವಿಡಿಯೋ ವೈರಲ್‌

ಈ ಘಟನೆ ಮಹಾರಾಷ್ಟ್ರದ ನಾಶಿಕ್‌ನಲ್ಲಿ ನಡೆದಿದ್ದು, ಅಲ್ಲಿ ಆ ವ್ಯಕ್ತಿಯ ಮದುವೆಗೆ ಸಿದ್ಧತೆಗಳು ನಡೆಯುತ್ತಿದ್ದವು. ಆಗ ತನ್ನ ಸೊಸೆಯಾಗಬೇಕಾದವಳನ್ನು ಮಾವನೇ ಮದುವೆಯಾಗಿ ಬಂದಿದ್ದಾನೆ. ತನ್ನ ಹೆಂಡತಿಯಾಗಬೇಕಾಗಿದ್ದ ಯುವತಿಯನ್ನು ತನ್ನ ಅಮ್ಮನ ಸ್ಥಾನದಲ್ಲಿ ನೋಡಲು ಸಾಧ್ಯವಿಲ್ಲವೆಂದು ಆ ಯುವಕ ಸನ್ಯಾಸಿಯಾಗಲು ಮುಂದಾಗಿದ್ದಾನೆ.

ಇದಾದ ನಂತರ ಆ ಯುವಕ ತನ್ನ ಅಪ್ಪನ ಬಗ್ಗೆ ಜಿಗುಪ್ಸೆಗೊಂಡು ಮನೆಗೆ ಹೋಗದೆ ರಸ್ತೆಯ ಬದಿಯಲ್ಲೇ ಜೀವನ ಕಳೆಯುತ್ತಿದ್ದಾನೆ. ರಸ್ತೆಬದಿಯಲ್ಲಿ ಕುಳಿತುಕೊಂಡು, ದೇವಸ್ಥಾನದಲ್ಲಿ ಊಟ ಮಾಡಿ, ರಸ್ತೆಯ ಬದಿಯಲ್ಲೇ ಮಲಗುತ್ತಾನೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್