AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ ಮುಖ್ಯಮಂತ್ರಿ ಪುತ್ರ, ಸಚಿವ ಆದಿತ್ಯ ಠಾಕ್ರೆಗೆ ಕೊರೊನಾ ಸೋಂಕು..

Coronavirus: ನಾಗ್ಪುರದಲ್ಲಿ ಈಗಾಗಲೇ ಲಾಕ್​ಡೌನ್ ಹೇರಲಾಗಿದ್ದು, ನಾಳೆ ಅವಧಿ ಮುಕ್ತಾಯವಾಗುವುದಿತ್ತು. ಆದರೆ ಅದನ್ನೀಗ ವಿಸ್ತರಿಸಲಾಗಿದೆ. ಅಗತ್ಯ ವಸ್ತುಗಳು ಮಾತ್ರ ದೊರೆಯಲಿವೆ ಎಂದು ಸ್ಥಳೀಯ ಆಡಳಿತ ತಿಳಿಸಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಪುತ್ರ, ಸಚಿವ ಆದಿತ್ಯ ಠಾಕ್ರೆಗೆ ಕೊರೊನಾ ಸೋಂಕು..
ಆದಿತ್ಯ ಠಾಕ್ರೆ
Lakshmi Hegde
|

Updated on: Mar 20, 2021 | 7:28 PM

Share

ಮಹಾರಾಷ್ಟ್ರದ ಪ್ರವಾಸೋದ್ಯಮ ಮತ್ತು ಪರಿಸರ ಖಾತೆ ಸಚಿವ ಆದಿತ್ಯ ಠಾಕ್ರೆ ಅವರಿಗೆ ಕೊರೊನಾ ಸೋಂಕು ತಗುಲಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಆದಿತ್ಯ ಠಾಕ್ರೆ, ನನಗೆ ಕೊವಿಡ್​ 19 ಲಕ್ಷಣ ಸಣ್ಣ ಪ್ರಮಾಣದಲ್ಲಿ ಕಾಣಿಸಿಕೊಂಡಿತ್ತು. ಹಾಗಾಗಿ ತಪಾಸಣೆ ಮಾಡಿಸಿದ್ದೆ. ವರದಿ ಪಾಸಿಟಿವ್​ ಬಂದಿದೆ. ಕಳೆದ ಕೆಲ ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಕೊವಿಡ್​-19 ತಪಾಸಣೆ ಮಾಡಿಸಿಕೊಳ್ಳಿ. ಕೊವಿಡ್​ ಸೋಂಕು ಮತ್ತೆ ಹೆಚ್ಚಿನ ಪ್ರಮಾಣದಲ್ಲಿ ಪ್ರಸರಣ ಆಗುತ್ತಿದೆ. ಪ್ರತಿಯೊಬ್ಬರೂ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಿ, ಎಚ್ಚರದಿಂದ ಇರಿ ಎಂದು ಹೇಳಿದ್ದಾರೆ.

ಆದಿತ್ಯ ಠಾಕ್ರೆಯವರು ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಪುತ್ರ. ಇಂದು ಸಂಜೆ 6.26ರ ಹೊತ್ತಿಗೆ ಟ್ವೀಟ್​ ಮಾಡಿ ತಮಗೆ ಕೊವಿಡ್​ ಸೋಂಕು ತಗುಲಿದ್ದನ್ನು ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಕೊವಿಡ್​-19 ಎರಡನೇ ಅಲೆ ಸಿಕ್ಕಾಪಟೆ ಹೆಚ್ಚಾಗಿದೆ. ಶುಕ್ರವಾರ ಒಂದೇ ದಿನ 13,601 ಕೊರೊನಾ ಕೇಸ್​ಗಳು ದಾಖಲಾಗಿವೆ. ಹಾಗೇ 58 ಮಂದಿ ಮೃತಪಟ್ಟಿದ್ದಾರೆ. ಈ ರಾಜ್ಯದಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 1,676,37ಕ್ಕೆ ಏರಿಕೆಯಾಗಿದೆ. ಅದರಲ್ಲೂ ಐದು ಜಿಲ್ಲೆಗಳಾದ ಪುಣೆ (37,384), ನಾಗ್ಪುರ (25,861), ಮುಂಬೈ (18,850), ಥಾಣೆ(16,735) ಮತ್ತು ನಾಸಿಕ್​ಗಳು (11,867) ಮುಂಚೂಣಿಯಲ್ಲಿವೆ.

ನಾಗ್ಪುರದಲ್ಲಿ ಈಗಾಗಲೇ ಲಾಕ್​ಡೌನ್ ಹೇರಲಾಗಿದ್ದು, ನಾಳೆ ಅವಧಿ ಮುಕ್ತಾಯವಾಗುವುದಿತ್ತು. ಆದರೆ ಅದನ್ನೀಗ ವಿಸ್ತರಿಸಲಾಗಿದೆ. ಅಗತ್ಯ ವಸ್ತುಗಳು ಮಾತ್ರ ದೊರೆಯಲಿವೆ ಎಂದು ಸ್ಥಳೀಯ ಆಡಳಿತ ತಿಳಿಸಿದೆ. ಇನ್ನು ಅಮರಾವತಿ, ಯವತ್ಮಾಲ್, ಲಾತೂರ್​ಗಳಲ್ಲೂ ನಿರ್ಬಂಧ ಹೇರಲಾಗಿದ್ದು, ಔರಂಗಾಬಾದ್​ ಕಂಪ್ಲೀಟ್ ಲಾಕ್​ ಆಗಿದೆ.

Follow Us
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ