Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ ಮುಖ್ಯಮಂತ್ರಿ ಪುತ್ರ, ಸಚಿವ ಆದಿತ್ಯ ಠಾಕ್ರೆಗೆ ಕೊರೊನಾ ಸೋಂಕು..

Coronavirus: ನಾಗ್ಪುರದಲ್ಲಿ ಈಗಾಗಲೇ ಲಾಕ್​ಡೌನ್ ಹೇರಲಾಗಿದ್ದು, ನಾಳೆ ಅವಧಿ ಮುಕ್ತಾಯವಾಗುವುದಿತ್ತು. ಆದರೆ ಅದನ್ನೀಗ ವಿಸ್ತರಿಸಲಾಗಿದೆ. ಅಗತ್ಯ ವಸ್ತುಗಳು ಮಾತ್ರ ದೊರೆಯಲಿವೆ ಎಂದು ಸ್ಥಳೀಯ ಆಡಳಿತ ತಿಳಿಸಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಪುತ್ರ, ಸಚಿವ ಆದಿತ್ಯ ಠಾಕ್ರೆಗೆ ಕೊರೊನಾ ಸೋಂಕು..
ಆದಿತ್ಯ ಠಾಕ್ರೆ
Follow us
Lakshmi Hegde
|

Updated on: Mar 20, 2021 | 7:28 PM

ಮಹಾರಾಷ್ಟ್ರದ ಪ್ರವಾಸೋದ್ಯಮ ಮತ್ತು ಪರಿಸರ ಖಾತೆ ಸಚಿವ ಆದಿತ್ಯ ಠಾಕ್ರೆ ಅವರಿಗೆ ಕೊರೊನಾ ಸೋಂಕು ತಗುಲಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಆದಿತ್ಯ ಠಾಕ್ರೆ, ನನಗೆ ಕೊವಿಡ್​ 19 ಲಕ್ಷಣ ಸಣ್ಣ ಪ್ರಮಾಣದಲ್ಲಿ ಕಾಣಿಸಿಕೊಂಡಿತ್ತು. ಹಾಗಾಗಿ ತಪಾಸಣೆ ಮಾಡಿಸಿದ್ದೆ. ವರದಿ ಪಾಸಿಟಿವ್​ ಬಂದಿದೆ. ಕಳೆದ ಕೆಲ ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಕೊವಿಡ್​-19 ತಪಾಸಣೆ ಮಾಡಿಸಿಕೊಳ್ಳಿ. ಕೊವಿಡ್​ ಸೋಂಕು ಮತ್ತೆ ಹೆಚ್ಚಿನ ಪ್ರಮಾಣದಲ್ಲಿ ಪ್ರಸರಣ ಆಗುತ್ತಿದೆ. ಪ್ರತಿಯೊಬ್ಬರೂ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಿ, ಎಚ್ಚರದಿಂದ ಇರಿ ಎಂದು ಹೇಳಿದ್ದಾರೆ.

ಆದಿತ್ಯ ಠಾಕ್ರೆಯವರು ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಪುತ್ರ. ಇಂದು ಸಂಜೆ 6.26ರ ಹೊತ್ತಿಗೆ ಟ್ವೀಟ್​ ಮಾಡಿ ತಮಗೆ ಕೊವಿಡ್​ ಸೋಂಕು ತಗುಲಿದ್ದನ್ನು ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಕೊವಿಡ್​-19 ಎರಡನೇ ಅಲೆ ಸಿಕ್ಕಾಪಟೆ ಹೆಚ್ಚಾಗಿದೆ. ಶುಕ್ರವಾರ ಒಂದೇ ದಿನ 13,601 ಕೊರೊನಾ ಕೇಸ್​ಗಳು ದಾಖಲಾಗಿವೆ. ಹಾಗೇ 58 ಮಂದಿ ಮೃತಪಟ್ಟಿದ್ದಾರೆ. ಈ ರಾಜ್ಯದಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 1,676,37ಕ್ಕೆ ಏರಿಕೆಯಾಗಿದೆ. ಅದರಲ್ಲೂ ಐದು ಜಿಲ್ಲೆಗಳಾದ ಪುಣೆ (37,384), ನಾಗ್ಪುರ (25,861), ಮುಂಬೈ (18,850), ಥಾಣೆ(16,735) ಮತ್ತು ನಾಸಿಕ್​ಗಳು (11,867) ಮುಂಚೂಣಿಯಲ್ಲಿವೆ.

ನಾಗ್ಪುರದಲ್ಲಿ ಈಗಾಗಲೇ ಲಾಕ್​ಡೌನ್ ಹೇರಲಾಗಿದ್ದು, ನಾಳೆ ಅವಧಿ ಮುಕ್ತಾಯವಾಗುವುದಿತ್ತು. ಆದರೆ ಅದನ್ನೀಗ ವಿಸ್ತರಿಸಲಾಗಿದೆ. ಅಗತ್ಯ ವಸ್ತುಗಳು ಮಾತ್ರ ದೊರೆಯಲಿವೆ ಎಂದು ಸ್ಥಳೀಯ ಆಡಳಿತ ತಿಳಿಸಿದೆ. ಇನ್ನು ಅಮರಾವತಿ, ಯವತ್ಮಾಲ್, ಲಾತೂರ್​ಗಳಲ್ಲೂ ನಿರ್ಬಂಧ ಹೇರಲಾಗಿದ್ದು, ಔರಂಗಾಬಾದ್​ ಕಂಪ್ಲೀಟ್ ಲಾಕ್​ ಆಗಿದೆ.

28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ