AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲೆ ಪ್ರಕರಣದಲ್ಲಿ ಆಪ್ತ ಸಹಾಯಕನ ಬಂಧನ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಧನಂಜಯ್ ಮುಂಡೆ

Dhananjay Munde Resigns: ಮಹಾರಾಷ್ಟ್ರ ಸರ್ಕಾರದ ಸಚಿವ ಮತ್ತು ಎನ್​ಸಿಪಿ ನಾಯಕ ಧನಂಜಯ್ ಮುಂಡೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಈ ಮಾಹಿತಿ ನೀಡಿದ್ದಾರೆ. ಧನಂಜಯ್ ಮುಂಡೆ ಅವರ ಆಪ್ತ ಸಹಾಯಕ ಪ್ರಶಾಂತ್ ಜೋಶಿ ಅವರು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಅಧಿಕೃತ ನಿವಾಸವನ್ನು ತಲುಪಿ ಮುಂಡೆ ಅವರ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದರು.

ಕೊಲೆ ಪ್ರಕರಣದಲ್ಲಿ ಆಪ್ತ ಸಹಾಯಕನ ಬಂಧನ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಧನಂಜಯ್ ಮುಂಡೆ
ಧನಂಜಯ್ ಮುಂಡೆImage Credit source: India Today
ನಯನಾ ರಾಜೀವ್
|

Updated on:Mar 04, 2025 | 11:49 AM

Share

ಮಹಾರಾಷ್ಟ್ರ, ಮಾರ್ಚ್​ 04: ಮಹಾರಾಷ್ಟ್ರ ಸರ್ಕಾರದ ಸಚಿವ ಮತ್ತು ಎನ್‌ಸಿಪಿ ನಾಯಕ ಧನಂಜಯ್ ಮುಂಡೆ(Dhananjay Munde) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಈ ಮಾಹಿತಿ ನೀಡಿದ್ದಾರೆ. ಧನಂಜಯ್ ಮುಂಡೆ ಅವರ ಆಪ್ತ ಸಹಾಯಕ ಪ್ರಶಾಂತ್ ಜೋಶಿ ಅವರು ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಅಧಿಕೃತ ನಿವಾಸವನ್ನು ತಲುಪಿ ಮುಂಡೆ ಅವರ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದರು.

ಮೂಲಗಳ ಪ್ರಕಾರ, ಧನಂಜಯ್ ಮುಂಡೆ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಸಿಎಂ ದೇವೇಂದ್ರ ಫಡ್ನವೀಸ್ ಅವರು ಅಜಿತ್ ಪವಾರ್ ಮತ್ತು ಪ್ರಫುಲ್ ಪಟೇಲ್ ಅವರಿಗೆ ಪತ್ರ ಬರೆದಿದ್ದರು ಎನ್ನಲಾಗಿದೆ. ಧನಂಜಯ್ ಮುಂಡೆ ಅವರ ಆಪ್ತ ಸಹಚರ ವಾಲ್ಮೀಕ್ ಕರಡ್ ಮತ್ತು ಅವರ ಆರು ಮಂದಿ ಸಹಾಯಕರನ್ನು ಈ ವರ್ಷದ ಜನವರಿಯಲ್ಲಿ ಮಹಾರಾಷ್ಟ್ರ ಪೊಲೀಸರು MCOCA (ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ, 1999) ಅಡಿಯಲ್ಲಿ ಬಂಧಿಸಿದ್ದರು.

ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಧನಂಜಯ್ ಮುಂಡೆ ಬೀಡ್ ಜಿಲ್ಲೆಯ ಪಾರ್ಲಿಯ ಎನ್‌ಸಿಪಿ ಶಾಸಕರಾಗಿದ್ದಾರೆ. ಇದಕ್ಕೂ ಮೊದಲು ಅವರು ಬೀಡ್‌ನ ಉಸ್ತುವಾರಿ ಸಚಿವರಾಗಿದ್ದರು. ಪ್ರಸ್ತುತ, ಎನ್‌ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಪುಣೆ ಮತ್ತು ಬೀಡ್ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದಾರೆ.

ಮತ್ತಷ್ಟು ಓದಿ: Bell’s Palsy: ಮಾತೇ ಬರುತ್ತಿಲ್ಲ, ಮಹಾರಾಷ್ಟ್ರ ಸಚಿವ ಧನಂಜಯ್​ಗೆ ಬೆಲ್ ಪಾಲ್ಸಿ ಕಾಯಿಲೆ, ಇದೆಷ್ಟು ಅಪಾಯಕಾರಿ?

ದೇಶಮುಖ್ ಹತ್ಯೆ ಮತ್ತು ಅದಕ್ಕೆ ಸಂಬಂಧಿಸಿದ ಎರಡು ಪ್ರಕರಣಗಳಲ್ಲಿ ಫೆಬ್ರವರಿ 27 ರಂದು ಸಿಐಡಿ ಬೀಡ್ ಜಿಲ್ಲೆಯ ನ್ಯಾಯಾಲಯದಲ್ಲಿ 1,200 ಪುಟಗಳ ಆರೋಪಪಟ್ಟಿ ಸಲ್ಲಿಸಿತು.

ಆರೋಪಿಗಳ ವಿರುದ್ಧ ಪೊಲೀಸರು ಕಠಿಣ ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಮೋಕಾ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇಲ್ಲಿಯವರೆಗೆ ಏಳು ಜನರನ್ನು ಬಂಧಿಸಲಾಗಿದ್ದು, ಅವರ ವಿರುದ್ಧ MCOCA ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಒಬ್ಬ ಆರೋಪಿ ಇನ್ನೂ ತಲೆಮರೆಸಿಕೊಂಡಿದ್ದಾನೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:11 am, Tue, 4 March 25

ದೇವೇಗೌಡರ ಈ ನಿರ್ಧಾರದ ಹಿಂದಿರುವ ರಾಜಕೀಯ ಲೆಕ್ಕಾಚಾರವೇನು ಗೊತ್ತಾ?
ದೇವೇಗೌಡರ ಈ ನಿರ್ಧಾರದ ಹಿಂದಿರುವ ರಾಜಕೀಯ ಲೆಕ್ಕಾಚಾರವೇನು ಗೊತ್ತಾ?
ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!