AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವೇಂದ್ರ ಫಡ್ನವಿಸ್​ ಕ್ಷಮೆ ಯಾಚಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವೆ; ನವಾಬ್ ಮಲಿಕ್ ಎಚ್ಚರಿಕೆ

ಮಹಾರಾಷ್ಟ್ರದ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ನವಾಬ್ ಮಲಿಕ್ ಇದೀಗ ನವಾಬ್ ಮಲಿಕ್ ಮನೆಯಲ್ಲಿ ಡ್ರಗ್ಸ್​ ಪತ್ತೆಯಾಗಿದೆ ಎಂಬ ದೇವೇಂದ್ರ ಫಡ್ನವಿಸ್​ ಹೇಳಿಕೆಗೆ ಕ್ಷಮೆ ಯಾಚಿಸದಿದ್ದರೆ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಬೆದರಿಕೆ ಹಾಕಿದ್ದಾರೆ.

ದೇವೇಂದ್ರ ಫಡ್ನವಿಸ್​ ಕ್ಷಮೆ ಯಾಚಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವೆ; ನವಾಬ್ ಮಲಿಕ್ ಎಚ್ಚರಿಕೆ
ನವಾಬ್​ ಮಲ್ಲಿಕ್​​
TV9 Web
| Edited By: |

Updated on: Nov 11, 2021 | 3:26 PM

Share

ಮುಂಬೈ: ಮಹಾರಾಷ್ಟ್ರದ ಸಚಿವ ನವಾಬ್ ಮಲಿಕ್​ಗೆ ಭೂಗತಲೋಕದ ನಂಟಿದೆ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್​ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ದೇವೇಂದ್ರ ಫಡ್ನವಿಸ್​ ವಿರುದ್ಧವೂ ಗಂಭೀರ ಆರೋಪ ಮಾಡಿದ್ದ ನವಾಬ್ ಮಲಿಕ್, ದೇವೇಂದ್ರ ಫಡ್ನವಿಸ್​ ಅವರಿಗೆ ದಾವೂದ್ ಇಬ್ರಾಹಿಂನ ಸಹಾಯಕ ರಿಯಾಜ್ ಭಾಟಿಯೊಂದಿಗೆ ಸಂಬಂಧವಿತ್ತು ಎಂದಿದ್ದರು. 2-3 ದಿನಗಳಿಂದ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರೊಂದಿಗೆ ತೀವ್ರ ಮಾತಿನ ಸಮರಕ್ಕೆ ಸಿಲುಕಿರುವ ಮಹಾರಾಷ್ಟ್ರದ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ನವಾಬ್ ಮಲಿಕ್ ಇದೀಗ ನವಾಬ್ ಮಲಿಕ್ ಮನೆಯಲ್ಲಿ ಡ್ರಗ್ಸ್​ ಪತ್ತೆಯಾಗಿದೆ ಎಂಬ ದೇವೇಂದ್ರ ಫಡ್ನವಿಸ್​ ಹೇಳಿಕೆಗೆ ಕ್ಷಮೆ ಯಾಚಿಸದಿದ್ದರೆ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಬೆದರಿಕೆ ಹಾಕಿದ್ದಾರೆ.

ದೇವೇಂದ್ರ ಫಡ್ನವಿಸ್ 2 ದಿನಗಳ ಹಿಂದೆ ತಮ್ಮ ಮಾಧ್ಯಮ ಸಂವಾದದಲ್ಲಿ ಮಲಿಕ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಯಾರ ಮನೆಯಲ್ಲಿ ಡ್ರಗ್ಸ್ ಪತ್ತೆಯಾಗಿದೆಯೋ ಆ ಪಕ್ಷದ ಸ್ಥಿತಿಯನ್ನು ನೀವು ಊಹಿಸಬಹುದು ಎಂದಿದ್ದರು. ಇದರ ಬೆನ್ನಲ್ಲೇ, ನವಾಬ್ ಮಲಿಕ್ ಅವರ ಅಳಿಯ ಸಮೀರ್ ಖಾನ್ ಅವರು ಫಡ್ನವಿಸ್ ಅವರ ಹೇಳಿಕೆಗೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ಈ ವರ್ಷದ ಆರಂಭದಲ್ಲಿ ಸಮೀರ್ ಖಾನ್ ಮಾದಕ ದ್ರವ್ಯ ಸೇವನೆ ಪ್ರಕರಣದಲ್ಲಿ ಬಂಧಿತನಾಗಿದ್ದು, ಸದ್ಯ ಜಾಮೀನಿನ ಮೇಲೆ ಹೊರಗಿದ್ದಾರೆ. ನಮ್ಮ ಮನೆಯಲ್ಲಿ ಯಾವುದೇ ಡ್ರಗ್ಸ್​ ಪತ್ತೆಯಾಗಿಲ್ಲ. ಮಾಜಿ ಸಿಎಂ ದೇವೇಂದ್ರ ಫಡ್ನವಿಸ್​ ಅವರಿಂದ 5 ಕೋಟಿ ರೂ. ಹಾನಿಯಾಗಿದೆ ಎಂದು ಸಮೀರ್ ಖಾನ್ ಅವರು ತಮ್ಮ ವಕೀಲರ ಮೂಲಕ ಹೇಳಿದ್ದಾರೆ.

ನವಾಬ್ ಮಲಿಕ್ ಮತ್ತು ದೇವೇಂದ್ರ ಫಡ್ನವೀಸ್ ನಡುವೆ ಮಾತಿನ ಚಕಮಕಿ ನಡೆಯುತ್ತಲೇ ಇದೆ. ಆರ್ಯನ್ ಖಾನ್ ಡ್ರಗ್ಸ್ ಪ್ರಕರಣದ ಸಂದರ್ಭದಲ್ಲಿ ಮಲಿಕ್ ಫಡ್ನವಿಸ್ ವಿರುದ್ಧ ಆರೋಪಗಳನ್ನು ಮಾಡಲು ಪ್ರಾರಂಭಿಸಿದರು. ಅದಕ್ಕೆ ದೇವೇಂದ್ರ ಫಡ್ನವೀಸ್ ನವಾಬ್ ಮಲಿಕ್ ವಿರುದ್ಧ ದಾಖಲೆಗಳನ್ನು ಬಿಡುಗಡೆ ಮಾಡುವ ಮೂಲಕ ಪ್ರತೀಕಾರ ತೀರಿಸಿಕೊಂಡಿದ್ದರು.

ನವೆಂಬರ್ 1 ರಂದು ಮಲಿಕ್ ಅವರು ಫಡ್ನವಿಸ್ ಮಾದಕವಸ್ತು ವ್ಯಾಪಾರಿಗಳೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಆರೋಪಿಸಿದ್ದರು. ದೇವೇಂದ್ರ ಫಡ್ನವಿಸ್ ಅವರ ಪತ್ನಿ ಅಮೃತಾ ಅವರೊಂದಿಗೆ ಜೈದೀಪ್ ರಾಣಾ ಅವರಿರುವ ಫೋಟೋವನ್ನು ಅವರು ಬಿಡುಗಡೆ ಮಾಡಿದ್ದರು. ನವೆಂಬರ್ 9ರಂದು ಅದಕ್ಕೆ ಪ್ರತಿಯಾಗಿ, ನವಾಬ್ ಮಲಿಕ್ ಭೂಗತ ಜಗತ್ತಿನೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಫಡ್ನವಿಸ್ ಆರೋಪಿಸಿದ್ದರು. ಇದರ ಬೆನ್ನಲ್ಲೇ ಮಲಿಕ್, ದೇವೇಂದ್ರ ಫಡ್ನವೀಸ್ ಅವರು ಶಂಕಿತ ದಾವೂದ್ ಸಹಾಯಕ ರಿಯಾಜ್ ಭಾಟಿಯನ್ನು ರಕ್ಷಿಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಇದನ್ನು ಅಲ್ಲಗಳೆದ ಫಡ್ನವಿಸ್, ‘ಹಂದಿಯೊಂದಿಗೆ ಎಂದಿಗೂ ಕುಸ್ತಿಯಾಡಬೇಡಿ, ಅದರಿಂದ ನೀವೇ ಕೊಳಕಾಗುತ್ತೀರಿ’ ಎಂದಿದ್ದರು.

ಇದನ್ನೂ ಓದಿ: ಸಮೀರ್ ವಾಂಖೆಡೆಯ ಅಪ್ಪ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಗೆ ನವಾಬ್ ಮಲಿಕ್ ಪ್ರತಿಕ್ರಿಯೆ ಕೋರಿದ ಬಾಂಬೆ ಹೈಕೋರ್ಟ್

ನೋಟು ಅಮಾನ್ಯೀಕರಣ ಬಳಿಕ ಮಾಜಿ ಸಿಎಂ ಮಾಡಿದ್ದೇನು?: ದೇವೇಂದ್ರ ಫಡ್ನವೀಸ್​ ವಿರುದ್ಧ ಗಂಭೀರ ಆರೋಪ ಮಾಡಿದ ನವಾಬ್​ ಮಲ್ಲಿಕ್

Follow Us
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?