AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಪ್ರಿಯಾ ಸುಳೆ ವಾಟ್ಸಾಪ್​ ಹ್ಯಾಕ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಹ್ಯಾಕರ್ಸ್​

ಸುಪ್ರಿಯಾ ಸುಳೆ ಸೇರಿದಂತೆ ಎನ್​ಸಿಪಿ ಪಕ್ಷದ 20ಕ್ಕೂ ಅಧಿಕ ಜನರ ವಾಟ್ಸಾಪ್ ಖಾತೆಯನ್ನು ಹ್ಯಾಕ್​ ಮಾಡಲಾಗಿತ್ತು. ಅಷ್ಟೇ ಅಲ್ಲದೆ 400 ಡಾಲರ್​ ನೀಡುವಂತೆ ಹ್ಯಾಕರ್ಸ್​ ಬೇಡಿಕೆ ಇಟ್ಟಿದ್ದರು. ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆಗೂ ಮುನ್ನ ನಾಯಕರ ಫೋನ್ ಹ್ಯಾಕ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಶರದ್ ಪವಾರ್ ಅವರ ಪಕ್ಷದ ಸಂಸದೆ ಸುಪ್ರಿಯಾ ಸುಳೆ ಸೇರಿದಂತೆ ಪಕ್ಷದ 20 ನಾಯಕರ ವಾಟ್ಸಾಪ್ ಹ್ಯಾಕ್ ಆಗಿದೆ.

ಸುಪ್ರಿಯಾ ಸುಳೆ ವಾಟ್ಸಾಪ್​ ಹ್ಯಾಕ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಹ್ಯಾಕರ್ಸ್​
ಸುಪ್ರಿಯಾ ಸುಳೆImage Credit source: The Hindu
Follow us
ನಯನಾ ರಾಜೀವ್
|

Updated on: Aug 12, 2024 | 1:59 PM

ಶರದ್​ ಪವಾರ್(Sharad Pawar)​ ಅವರ ಎನ್​ಸಿಪಿ(NCP) ಪಕ್ಷದ ಕಾರ್ಯಾಧ್ಯಕ್ಷೆ, ಸಂಸದೆ ಸುಪ್ರಿಯಾ ಸುಳೆ(Supriya Sule) ಅವರ ವಾಟ್ಸಾಪ್ ಖಾತೆಯನ್ನು ಹ್ಯಾಕ್ ಮಾಡಲಾಗಿತ್ತು. ತನ್ನ ಖಾತೆಯನ್ನು ಮರುಸ್ಥಾಪಿಸಲು ಹ್ಯಾಕರ್​ 32,000 ರೂ. ಕೊಡುವಂತೆ ಬೇಡಿಕೆ ಇಟ್ಟಿದ್ದ. ಆದರೆ ಕೆಲವೇ ಗಂಟೆಗಳಲ್ಲಿ ಪೊಲೀಸರು ವಾಟ್ಸಾಪ್ ಅ​ನ್ನು ಮರುಸ್ಥಾಪಿಸಿದ್ದಾರೆ. ಸುಪ್ರಿಯಾ ಅವರು ದೌಂಡ್ ತೆಹಸಿಲ್‌ನಲ್ಲಿ ಪಾರ್ಟಿ ಕಾರ್ಯಕ್ರಮವೊಂದರಲ್ಲಿದ್ದಾಗ ತಮ್ಮ ವಾಟ್ಸಾಪ್ ಹ್ಯಾಕ್ ಆಗಿರುವುದು ಅರಿವಾಯಿತು.

ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆಗೂ ಮುನ್ನ ನಾಯಕರ ಫೋನ್ ಹ್ಯಾಕ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಶರದ್ ಪವಾರ್ ಅವರ ಪಕ್ಷದ ಸಂಸದೆ ಸುಪ್ರಿಯಾ ಸುಳೆ ಸೇರಿದಂತೆ ಪಕ್ಷದ 20 ನಾಯಕರ ವಾಟ್ಸಾಪ್ ಹ್ಯಾಕ್ ಆಗಿದೆ. ಮೂಲಗಳ ಪ್ರಕಾರ, ಬಿಹಾರವು ಅಧಿಕಾರಿಗಳ ವಾಟ್ಸಾಪ್ ಖಾತೆಗಳನ್ನು ಹ್ಯಾಕ್ ಮಾಡುವ ಕೇಂದ್ರವಾಗಿದೆ ಎಂದು ಹೇಳಲಾಗಿದೆ.

ಆಗಸ್ಟ್ 11 ರಂದು ಮಧ್ಯಾಹ್ನ 1 ಗಂಟೆಗೆ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ವಾಟ್ಸಾಪ್ ಹ್ಯಾಕ್ ಆಗಿರುವ ಬಗ್ಗೆ ಸುಪ್ರಿಯಾ ಮೊದಲ ಮಾಹಿತಿ ನೀಡಿದರು. ನಂತರ ಸಂಜೆ 4.15ಕ್ಕೆ ವಾಟ್ಸಾಪ್ ಮರುಸ್ಥಾಪನೆ ಬಗ್ಗೆಯೂ ಮಾಹಿತಿ ನೀಡಿದ್ದರು.

ನನ್ನ ವಾಟ್ಸಾಪ್ ಬಳಸಿ ನನ್ನ ತಂಡದ ಸದಸ್ಯರೊಬ್ಬರಿಗೆ ಹ್ಯಾಕರ್ ಸಂದೇಶ ಕಳುಹಿಸಿದ್ದಾನೆ. ಹ್ಯಾಕರ್ 400 ಡಾಲರ್​ ಕೇಳಿದ್ದ, ಈ ಸಂದೇಶದ ಬಗ್ಗೆ ನನ್ನ ತಂಡದ ಸದಸ್ಯರು ತಕ್ಷಣವೇ ನನಗೆ ತಿಳಿಸಿದ್ದರು.

ಮತ್ತಷ್ಟು ಓದಿ: WhatsApp Ban: ನಿಷೇಧವಾದ ವಾಟ್ಸ್​ಆ್ಯಪ್ ಖಾತೆಯನ್ನು ಮರಳಿ ಪಡೆಯುವುದು ಹೇಗೆ?

ಹ್ಯಾಕರ್ ತನ್ನ ತಂಡದ ಇನ್ನೊಬ್ಬ ಸದಸ್ಯನ ವಾಟ್ಸಾಪ್ ಖಾತೆಯನ್ನು ಸಹ ಹ್ಯಾಕ್ ಮಾಡಿದ್ದಾನೆ ಎಂದು ಸುಪ್ರಿಯಾ ಹೇಳಿದ್ದಾರೆ. ನಂತರ ಅವರು 20 ಕ್ಕೂ ಹೆಚ್ಚು ಸಂಖ್ಯೆಗಳಿಗೆ ಸಂದೇಶಗಳನ್ನು ಕಳುಹಿಸಿದ್ದಾರೆ. ಈ ವಿಚಾರವಾಗಿ ಪುಣೆ ಗ್ರಾಮಾಂತರ ಎಸ್‌ಪಿ ಪಂಕಜ್ ದೇಶಮುಖ್ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ