AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಚಿವ ಅನಿಲ್ ದೇಶ್‌ಮುಖ್​ಗೆ ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯ ಇಲ್ಲ!

ಮಾಜಿ ಸಚಿವ ಹಾಗೂ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕನಿಗೆ ಜಾಮೀನು ಸಿಕ್ಕಿದೆ. ಆದರೂ ಅವರಿಗೆ ಜೈಲೇ ಗತಿ.

ಮಾಜಿ ಸಚಿವ ಅನಿಲ್ ದೇಶ್‌ಮುಖ್​ಗೆ ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯ ಇಲ್ಲ!
Anil Deshmukh
TV9 Web
| Edited By: |

Updated on: Oct 04, 2022 | 4:41 PM

Share

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ(Money Laundering Case) ಸಿಲುಕಿರುವ ಮಹಾರಾಷ್ಟ್ರದ ಮಾಜಿ ಸಚಿವ ಹಾಗೂ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (NCP) ನಾಯಕ ಅನಿಲ್ ದೇಶ್‌ಮುಖ್‌ಗೆ ಮುಂಬೈ ಹೈಕೋರ್ಟ್ ಜಾಮೀನು ನೀಡಿದೆ.

ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದೇಶ್​ಮುಖ್​ ಅವರನ್ನು ಕಳೆದ ವರ್ಷ ನವೆಂಬರ್‌ನಲ್ಲಿ ಬಂಧಿಸಿದ್ದರು. ಈ ಪ್ರಕರಣದಲ್ಲಿ ಸೆಷನ್ಸ್​ ಕೋರ್ಟ್​ ಜಾಮೀನು ನಿರಾಕರಿಸಿದ್ದನ್ನು ಪ್ರಶ್ನಿಸಿ ದೇಶ್​ಮುಖ್​ ಮುಂಬೈ ಹೈಕೋರ್ಟ್​ ಮೊರೆ ಹೋಗಿದ್ದರು. ಅವರಿಗೆ ಈಗ ಜಾಮೀನು ಸಿಕ್ಕಿದೆ. ಜಾಮೀನು ಸಿಕ್ಕರೂ ದೇಶ್​ಮುಖ್​ಗೆ​ಜೈಲೇ ಗತಿ.

ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​​ಗೆ ಜಾರಿ ನಿರ್ದೇಶನಾಲಯ ಸಮನ್ಸ್

ಹೌದು.. ಕಳೆದ ವರ್ಷ ಏಪ್ರಿಲ್‌ನಲ್ಲಿ ಇವರ ವಿರುದ್ಧ ಸಿಬಿಐ ಇನ್ನೊಂದು ಪ್ರಕರಣ ದಾಖಲಿಸಿದ್ದು, ಅದಕ್ಕೆ ಸಂಬಂಧಿಸಿದಂತೆ ಅವರು ಜೈಲಿನಲ್ಲಿ ಇದ್ದಾರೆ. ಈ ಹಿನ್ನೆಲೆಯಲ್ಲಿ ಒಂದು ಕೇಸ್​ನಲ್ಲಿ ಜಾಮೀನು ಮಂಜೂರು ಆಗಿದ್ದರೂ, ಅವರು ಜೈಲಿನಿಂದ ಹೊರಕ್ಕೆ ಬರಲು ಸಾಧ್ಯವಿಲ್ಲ.

ಅನಿಲ್ ದೇಶ್‌ಮುಖ್‌ ಪ್ರಕರಣಗಳ ಹಿನ್ನೆಲೆ ಕಳೆದ ಫೆಬ್ರವರಿ 25ರಂದು, ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಅವರ ಮನೆಯ ಆಂಟಿಲಿಯಾ ಹೊರಗೆ ಸ್ಫೋಟಕಗಳನ್ನು ತುಂಬಿದ ವಾಹನವು ಪತ್ತೆಯಾಗಿತ್ತು. ಈ ಕೃತ್ಯದ ಹಿಂದೆ ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಹೆಸರು ಕೇಳಿಬಂದಿತ್ತು. ಇದಾದ ನಂತರ, ಮಹಾರಾಷ್ಟ್ರ ಸರ್ಕಾರವು ಆಗಿನ ಮುಂಬೈ ಪೊಲೀಸ್ ಕಮಿಷನರ್ ಪರಂಬಿರ್ ಸಿಂಗ್ ಅವರನ್ನು ಗೃಹರಕ್ಷಕ ದಳದ ಡಿಜಿಯನ್ನಾಗಿ ವರ್ಗಾವಣೆ ಮಾಡಿತ್ತು.

ಅನಿಲ್ ದೇಶ್‌ಮುಖ್ 100 ಕೋಟಿ ರೂಪಾಯಿ ವಸೂಲಿ ಮಾಡಿದ್ದಾರೆ ಎಂದು ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ಆರೋಪಿಸಿದ್ದರು. ಈ ಸಂಬಂಧ ಅವರು ಮಹಾರಾಷ್ಟ್ರದ ಅಂದಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಪತ್ರ ಬರೆದಿದ್ದ ಹಿನ್ನೆಲೆಯಲ್ಲಿ ಈ ಪ್ರಕರಣ ಮುನ್ನೆಲೆಗೆ ಬಂದಿತ್ತು. ಇದರಿಂದ ಅನಿಲ್ ದೇಶಮುಖ್ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗಿತ್ತು.

ಮುಂಬೈನ ಹೋಟೆಲ್‌ಗಳು ಮತ್ತು ಬಾರ್‌ಗಳಿಂದ ಪ್ರತಿ ತಿಂಗಳು 100 ಕೋಟಿ ರೂ. ಸಂಗ್ರಹಿಸುವಂತೆ ವಜಾಗೊಂಡ ಪೊಲೀಸ್ ಅಧಿಕಾರಿ ಸಚಿನ್ ವಾಜ್ ಅವರಿಗೆ ಅನಿಲ್ ದೇಶಮುಖ್ ನಿರ್ದೇಶನ ನೀಡಿದ್ದರು ಎಂದು ಮುಂಬೈ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ಆರೋಪಿಸಿದ್ದರು. ನಂತರ ಸಿಬಿಐ ಈ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಿತ್ತು. ಇದಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿತ್ತು. ಈಗ ಈ ಕೇಸ್​ನಲ್ಲಿ ಅವರಿಗೆ ಜಾಮೀನು ಸಿಕ್ಕಿದೆ.

Follow Us
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್