AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra: ಮಹಾರಾಷ್ಟ್ರದ ಅಮಲ್ನೇರ್​ನಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ, ಕರ್ಫ್ಯೂ ಜಾರಿ, 31 ಜನರ ಬಂಧನ

ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯ ಅಮಲ್ನೇರ್‌ನಲ್ಲಿ ಎರಡು ಗುಂಪುಗಳ ನಡುವೆ ಸಣ್ಣ ಜಗಳದ ನಂತರ ಘರ್ಷಣೆ ಸಂಭವಿಸಿದೆ. ನಗರದಲ್ಲಿ 48 ಗಂಟೆಗಳ ಕಾಲ ಕರ್ಫ್ಯೂ ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Maharashtra: ಮಹಾರಾಷ್ಟ್ರದ ಅಮಲ್ನೇರ್​ನಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ, ಕರ್ಫ್ಯೂ ಜಾರಿ, 31 ಜನರ ಬಂಧನ
ಮಹಾರಾಷ್ಟ್ರದಲ್ಲಿ ಕರ್ಫ್ಯೂImage Credit source: India Today
ನಯನಾ ರಾಜೀವ್
|

Updated on: Jun 11, 2023 | 12:55 PM

Share

ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯ ಅಮಲ್ನೇರ್‌ನಲ್ಲಿ ಎರಡು ಗುಂಪುಗಳ ನಡುವೆ ಸಣ್ಣ ಜಗಳದ ನಂತರ ಘರ್ಷಣೆ ಸಂಭವಿಸಿದೆ. ನಗರದಲ್ಲಿ 48 ಗಂಟೆಗಳ ಕಾಲ ಕರ್ಫ್ಯೂ ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜೂನ್ 9 ರಂದು (ಶುಕ್ರವಾರ) ರಾತ್ರಿ 10 ಗಂಟೆ ಸುಮಾರಿಗೆ ಮಕ್ಕಳ ಆಟಿಕೆಗಳ ಬಗ್ಗೆ ಎರಡು ಗುಂಪುಗಳ ನಡುವೆ ತೀವ್ರ ವಾಗ್ವಾದ ನಡೆದಾಗ ಈ ಘಟನೆ ಸಂಭವಿಸಿದೆ. ನಂತರ ವಾದವು ಹಿಂಸಾತ್ಮಕ ತಿರುವು ಪಡೆದುಕೊಂಡಿತು ಮತ್ತು ಎರಡೂ ಗುಂಪುಗಳು ಪರಸ್ಪರ ಇಟ್ಟಿಗೆಗಳಲ್ಲಿ ಹೊಡೆದಾಡಿಕೊಂಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ 100 ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದೆ ಮತ್ತು 31 ಜನರನ್ನು ಬಂಧಿಸಲಾಗಿದೆ. ಘರ್ಷಣೆಯ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಜೂನ್ 10 ರಂದು ಬೆಳಿಗ್ಗೆ 11 ರಿಂದ ಜೂನ್ 12 ರ ಬೆಳಿಗ್ಗೆ 11 ರವರೆಗೆ ಕರ್ಫ್ಯೂ ವಿಧಿಸಲಾಗಿದೆ. ಅಗತ್ಯವಿದ್ದರೆ ಕರ್ಫ್ಯೂ ವಿಸ್ತರಿಸಬಹುದು.

ಮತ್ತಷ್ಟು ಓದಿ: Manipur: ಹಿಂಸಾಚಾರ ಪೀಡಿತ ಮಣಿಪುರ ಸಹಜ ಸ್ಥಿತಿಗೆ; ಕರ್ಫ್ಯೂ ಸಡಿಲಿಕೆ

ಕರ್ಫ್ಯೂ ಜಾರಿಯಾದಾಗಿನಿಂದ ಪರಿಸ್ಥಿತಿ ಶಾಂತಿಯುತವಾಗಿದೆ. ಇಲ್ಲಿಯವರೆಗೆ ಯಾವುದೇ ಅಹಿತಕರ ಘಟನೆ ವರದಿಯಾಗಿಲ್ಲ. ಎರಡೂ ಗುಂಪಿನ ಆರೋಪಿಗಳನ್ನು ಪತ್ತೆ ಹಚ್ಚಲು ಪೊಲೀಸರು ಸಿಸಿಟಿವಿಗಳನ್ನು ಪರಿಶೀಲಿಸುತ್ತಿದ್ದಾರೆ.

ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಜಲಗಾಂವ್ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಎಂ ರಾಜ್‌ಕುಮಾರ್ ಜನರಿಗೆ ಮನವಿ ಮಾಡಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ