ವಿದ್ಯುತ್ ಬಿಲ್ ವಿಚಾರವಾಗಿ ಜಗಳ, ಮಹಿಳಾ ಟೆಕ್ನಿಷಿಯನ್​ ಹತ್ಯೆ

ಮಹಾರಾಷ್ಟ್ರದ ಬಾರಾಮತಿಯಲ್ಲಿ ರೋಚಕ ಘಟನೆಯೊಂದು ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬರಿಗೆ ಹೆಚ್ಚಿನ ವಿದ್ಯುತ್ ಬಿಲ್​ ನೀಡಿದ ಕಾರಣ ಮಹಿಳಾ ಟೆಕ್ನಿಷಿಯನ್​ರನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ.

ವಿದ್ಯುತ್ ಬಿಲ್ ವಿಚಾರವಾಗಿ ಜಗಳ, ಮಹಿಳಾ ಟೆಕ್ನಿಷಿಯನ್​ ಹತ್ಯೆ
ಸಾವುImage Credit source: India Today
Follow us
|

Updated on: Apr 26, 2024 | 9:22 AM

ವಿದ್ಯುತ್ ಬಿಲ್​ ವಿಚಾರವಾಗಿ ಶುರುವಾದ ವಿವಾದ ಕೊಲೆಯಲ್ಲಿ ಅಂತ್ಯಗೊಂಡಿದೆ. ವ್ಯಕ್ತಿಯೊಬ್ಬ ಮಹಾರಾಷ್ಟ್ರ ಸ್ಟೇಟ್ ಎಲೆಕ್ಟ್ರಿಸಿಟಿ ಡಿಸ್ಟ್ರಿಬ್ಯೂಷನ್​ ಕಂ ಲಿಮಿಟೆಡ್​ನ ಮಹಿಳಾ ಟೆಕ್ನಿಷಿಯನ್​ನ ಹತ್ಯೆ ಮಾಡಿದ್ದಾರೆ. ಟೆಕ್ನಿಷಿಯನ್ 570 ರೂಪಾಯಿಯ ಹೆಚ್ಚಿನ ವಿದ್ಯುತ್ ಬಿಲ್ ನೀಡಿದ್ದಾರೆ ಎಂದು ಆರೋಪಿಸಿ ಹರಿತವಾದ ಆಯುಧದಿಂದ 16 ಬಾರಿ ಚುಚ್ಚಿ ಕೊಲೆ ಮಾಡಿದ್ದಾರೆ. ಅಭಿಜಿತ್ ಪೋಟೆ ಅವರು ಬೆಳಿಗ್ಗೆ ಬಾರಾಮತಿ ತಹಸಿಲ್‌ನ ಮೋರ್ಗಾಂವ್‌ನಲ್ಲಿರುವ ಎಂಎಸ್‌ಇಡಿಸಿಎಲ್ ಕಚೇರಿಯೊಳಗೆ ರಿಂಕು ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸುಪಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬುಧವಾರ ಬೆಳಗ್ಗೆ ಎಂಎಸ್‌ಇಡಿಸಿಎಲ್‌ ಕಚೇರಿಗೆ ತೆರಳಿ ಹತ್ತು ದಿನಗಳ ರಜೆ ಮುಗಿಸಿ ವಾಪಸಾದ ಥಿಟೆ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ವೇಳೆ ಅವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

302 (ಕೊಲೆ) ಸೇರಿದಂತೆ ಐಪಿಸಿಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪೋಟೆಯನ್ನು ಬಂಧಿಸಿದ್ದೇವೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು. ಈ ಘಟನೆಯು ಬಾರಾಮತಿಯಿಂದ 35 ಕಿ.ಮೀ ದೂರದಲ್ಲಿರುವ ಮೋರ್ಗಾಂವ್​ ಗ್ರಾಮದಲ್ಲಿ ನಡೆದಿದೆ. ವಿದ್ಯುತ್ ವಿತರಣಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ 34 ವರ್ಷದ ಮಹಿಳಾ ಉದ್ಯೋಗಿ ರಿಂಕು ಬನ್ಸೋಡೆ ಸಾವನ್ನಪ್ಪಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಅವರು ಕರ್ತವ್ಯ ನಿರ್ವಹಿಸುತ್ತಿದ್ದರು.

ಮತ್ತಷ್ಟು ಓದಿ: Davanagere: ತಾಯಿ ಸಾವಿಗೆ ಕಾರಣವಾದ ತಂದೆಯನ್ನೇ ಹತ್ಯೆಗೈದ ಮಗ

ಕಳೆದ ವಾರ ಇದೇ ಪ್ರದೇಶದಲ್ಲಿ ಗುಂಡವಲಿ ಗ್ರಾಮದಲ್ಲಿ ಕಾಲೇಜು ವಿದ್ಯಾರ್ಥಿಗಳ ಮೇಲೆ ಅಪ್ರಾಪ್ತರು ಹರಿತವಾದ ಆಯುಧದಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದರು. ಬಳಿಕ ವಿದ್ಯುತ್ ಇಲಾಖೆ ಸ್ಪಷ್ಟನೆ ನೀಡಿದ್ದು, ಮಹಿಳಾ ತಂತ್ರಜ್ಞರು ನೀಡಿದ್ದ ಬಿಲ್​ನಲ್ಲಿ ಯಾವುದೇ ತಪ್ಪಿರಲಿಲ್ಲ, ಏಪ್ರಿಲ್​ನಲ್ಲಿ ಆರೋಪಿ 63 ಯೂನಿಟ್​ಗಳನ್ನು ಬಳಸಿದ್ದು 570 ರೂ. ಬಿಲ್​ ಬಂದಿದೆ, ಬೇರೆತಿಂಗಳಿಗಿಂತ ಈ ತಿಂಗಳಿನಲ್ಲಿ ಸೆಕೆ ಹೆಚ್ಚಿರುವ ಕಾರಣ ವಿದ್ಯುತ್ ಹೆಚ್ಚು ಬಳಕೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!