AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್ ಬಿಲ್ ವಿಚಾರವಾಗಿ ಜಗಳ, ಮಹಿಳಾ ಟೆಕ್ನಿಷಿಯನ್​ ಹತ್ಯೆ

ಮಹಾರಾಷ್ಟ್ರದ ಬಾರಾಮತಿಯಲ್ಲಿ ರೋಚಕ ಘಟನೆಯೊಂದು ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬರಿಗೆ ಹೆಚ್ಚಿನ ವಿದ್ಯುತ್ ಬಿಲ್​ ನೀಡಿದ ಕಾರಣ ಮಹಿಳಾ ಟೆಕ್ನಿಷಿಯನ್​ರನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ.

ವಿದ್ಯುತ್ ಬಿಲ್ ವಿಚಾರವಾಗಿ ಜಗಳ, ಮಹಿಳಾ ಟೆಕ್ನಿಷಿಯನ್​ ಹತ್ಯೆ
ಸಾವುImage Credit source: India Today
ನಯನಾ ರಾಜೀವ್
|

Updated on: Apr 26, 2024 | 9:22 AM

Share

ವಿದ್ಯುತ್ ಬಿಲ್​ ವಿಚಾರವಾಗಿ ಶುರುವಾದ ವಿವಾದ ಕೊಲೆಯಲ್ಲಿ ಅಂತ್ಯಗೊಂಡಿದೆ. ವ್ಯಕ್ತಿಯೊಬ್ಬ ಮಹಾರಾಷ್ಟ್ರ ಸ್ಟೇಟ್ ಎಲೆಕ್ಟ್ರಿಸಿಟಿ ಡಿಸ್ಟ್ರಿಬ್ಯೂಷನ್​ ಕಂ ಲಿಮಿಟೆಡ್​ನ ಮಹಿಳಾ ಟೆಕ್ನಿಷಿಯನ್​ನ ಹತ್ಯೆ ಮಾಡಿದ್ದಾರೆ. ಟೆಕ್ನಿಷಿಯನ್ 570 ರೂಪಾಯಿಯ ಹೆಚ್ಚಿನ ವಿದ್ಯುತ್ ಬಿಲ್ ನೀಡಿದ್ದಾರೆ ಎಂದು ಆರೋಪಿಸಿ ಹರಿತವಾದ ಆಯುಧದಿಂದ 16 ಬಾರಿ ಚುಚ್ಚಿ ಕೊಲೆ ಮಾಡಿದ್ದಾರೆ. ಅಭಿಜಿತ್ ಪೋಟೆ ಅವರು ಬೆಳಿಗ್ಗೆ ಬಾರಾಮತಿ ತಹಸಿಲ್‌ನ ಮೋರ್ಗಾಂವ್‌ನಲ್ಲಿರುವ ಎಂಎಸ್‌ಇಡಿಸಿಎಲ್ ಕಚೇರಿಯೊಳಗೆ ರಿಂಕು ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸುಪಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬುಧವಾರ ಬೆಳಗ್ಗೆ ಎಂಎಸ್‌ಇಡಿಸಿಎಲ್‌ ಕಚೇರಿಗೆ ತೆರಳಿ ಹತ್ತು ದಿನಗಳ ರಜೆ ಮುಗಿಸಿ ವಾಪಸಾದ ಥಿಟೆ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ವೇಳೆ ಅವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

302 (ಕೊಲೆ) ಸೇರಿದಂತೆ ಐಪಿಸಿಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪೋಟೆಯನ್ನು ಬಂಧಿಸಿದ್ದೇವೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು. ಈ ಘಟನೆಯು ಬಾರಾಮತಿಯಿಂದ 35 ಕಿ.ಮೀ ದೂರದಲ್ಲಿರುವ ಮೋರ್ಗಾಂವ್​ ಗ್ರಾಮದಲ್ಲಿ ನಡೆದಿದೆ. ವಿದ್ಯುತ್ ವಿತರಣಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ 34 ವರ್ಷದ ಮಹಿಳಾ ಉದ್ಯೋಗಿ ರಿಂಕು ಬನ್ಸೋಡೆ ಸಾವನ್ನಪ್ಪಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಅವರು ಕರ್ತವ್ಯ ನಿರ್ವಹಿಸುತ್ತಿದ್ದರು.

ಮತ್ತಷ್ಟು ಓದಿ: Davanagere: ತಾಯಿ ಸಾವಿಗೆ ಕಾರಣವಾದ ತಂದೆಯನ್ನೇ ಹತ್ಯೆಗೈದ ಮಗ

ಕಳೆದ ವಾರ ಇದೇ ಪ್ರದೇಶದಲ್ಲಿ ಗುಂಡವಲಿ ಗ್ರಾಮದಲ್ಲಿ ಕಾಲೇಜು ವಿದ್ಯಾರ್ಥಿಗಳ ಮೇಲೆ ಅಪ್ರಾಪ್ತರು ಹರಿತವಾದ ಆಯುಧದಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದರು. ಬಳಿಕ ವಿದ್ಯುತ್ ಇಲಾಖೆ ಸ್ಪಷ್ಟನೆ ನೀಡಿದ್ದು, ಮಹಿಳಾ ತಂತ್ರಜ್ಞರು ನೀಡಿದ್ದ ಬಿಲ್​ನಲ್ಲಿ ಯಾವುದೇ ತಪ್ಪಿರಲಿಲ್ಲ, ಏಪ್ರಿಲ್​ನಲ್ಲಿ ಆರೋಪಿ 63 ಯೂನಿಟ್​ಗಳನ್ನು ಬಳಸಿದ್ದು 570 ರೂ. ಬಿಲ್​ ಬಂದಿದೆ, ಬೇರೆತಿಂಗಳಿಗಿಂತ ಈ ತಿಂಗಳಿನಲ್ಲಿ ಸೆಕೆ ಹೆಚ್ಚಿರುವ ಕಾರಣ ವಿದ್ಯುತ್ ಹೆಚ್ಚು ಬಳಕೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More