Maharashtra Crisis: ಮಹಾರಾಷ್ಟ್ರ ಬಿಕ್ಕಟ್ಟು; ಅತೃಪ್ತ ಶಾಸಕರ ಬಣಕ್ಕೆ ಶಿವಸೇನಾ- ಬಾಳಾಸಾಹೇಬ್ ಎಂದು ಹೆಸರಿಟ್ಟ ಏಕನಾಥ್ ಶಿಂಧೆ

ಶನಿವಾರ ಗುವಾಹಟಿಯಲ್ಲಿ ನಡೆದ ಸಭೆಯಲ್ಲಿ ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ಶಿವಸೇನೆ ನಾಯಕರ ಬಣವು ‘ಶಿವಸೇನಾ ಬಾಳಾಸಾಹೇಬ್ ಗ್ರೂಪ್’ ಎಂದು ಹೆಸರಿಟ್ಟಿರುವುದಾಗಿ ಘೋಷಿಸಿದ್ದಾರೆ.

Maharashtra Crisis: ಮಹಾರಾಷ್ಟ್ರ ಬಿಕ್ಕಟ್ಟು; ಅತೃಪ್ತ ಶಾಸಕರ ಬಣಕ್ಕೆ ಶಿವಸೇನಾ- ಬಾಳಾಸಾಹೇಬ್ ಎಂದು ಹೆಸರಿಟ್ಟ ಏಕನಾಥ್ ಶಿಂಧೆ
ಏಕನಾಥ್ ಶಿಂಧೆ
Follow us
| Updated By: ಸುಷ್ಮಾ ಚಕ್ರೆ

Updated on:Jun 25, 2022 | 2:05 PM

ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು (Maharashtra Political Crisis) ಕಗ್ಗಂಟಾಗುತ್ತಲೇ ಇದೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ (uddhav thackeray) ವಿರುದ್ಧ ದಂಗೆದ್ದು ರೆಸಾರ್ಟ್​ ಸೇರಿಕೊಂಡಿರುವ 16 ಅತೃಪ್ತ ಶಾಸಕರ ಬಣದ ಮನವೊಲಿಕೆ ಕಾರ್ಯ ಮುಂದುವರೆದಿದೆ. ಈ ನಡುವೆ ಅತೃಪ್ತ ಶಾಸಕರ ತಂಡದ ನೇತೃತ್ವ ವಹಿಸಿರುವ ಶಿವಸೇನೆ ನಾಯಕ ಏಕನಾಥ್ ಶಿಂಧೆ (Eknath Shinde) ತಮ್ಮ ಬಂಡಾಯ ಶಾಸಕರ ಗುಂಪಿಗೆ ‘ಶಿವಸೇನಾ ಬಾಳಾಸಾಹೇಬ್’ (Shiv Sena Balasaheb) ಎಂದು ಹೆಸರಿಟ್ಟಿದ್ದಾರೆ.

ಏಕನಾಥ್ ಶಿಂಧೆ ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದಾರೆ. ನಮ್ಮ ತಂಡವನ್ನು ಶಿವ ಸೇನಾ- ಬಾಳಾಸಾಹೇಬ್ ಎಂಬ ಹೆಸರಿನಿಂದ ಕರೆಯಲಾಗುವುದು. ನಾವು ಯಾವುದೇ ಕಾರಣಕ್ಕೂ ಯಾವುದೇ ಪಕ್ಷದ ಜೊತೆ ಕೈಜೋಡಿಸುವುದಿಲ್ಲ. ನಾವು ಸ್ವತಂತ್ರವಾಗಿಯೇ ಹೋರಾಡುತ್ತೇವೆ ಎಂದು ಶಿವಸೇನೆ ಶಾಸಕ ದೀಪಕ್ ಕೇಸರ್​ಕರ್ ಹೇಳಿದ್ದಾರೆ.

ಈ ಗುಂಪಿಗೆ ಬಾಳ್ ಠಾಕ್ರೆ ಹೆಸರಿಡುವ ಮೂಲಕ ಶಿವಸೈನಿಕರು ತಮ್ಮ ಬಣದೊಂದಿಗೆ ಭಾವನಾತ್ಮಕವಾಗಿ ಸಂಪರ್ಕ ಹೊಂದುವಂತೆ ಮಾಡುವುದು ಏಕನಾಥ್ ಶಿಂಧೆಯ ಲೆಕ್ಕಾಚಾರ ಎನ್ನಲಾಗುತ್ತಿದೆ. ಏಕನಾಥ್ ಶಿಂಧೆ ತಂಡದ, ಪ್ರಸ್ತುತ ಗುವಾಹಟಿಯಲ್ಲಿರುವ ಬಂಡಾಯ ಶಿವಸೇನೆ ಶಾಸಕ ತಾನಾಜಿ ಸಾವಂತ್ ಅವರ ಕಚೇರಿಯನ್ನು ಶಿವಸೇನಾ ಕಾರ್ಯಕರ್ತರು ಇಂದು ಧ್ವಂಸಗೊಳಿಸಿದ್ದಾರೆ. ಸೇನಾ ಕಾರ್ಯಕರ್ತರ ಗುಂಪು ಸಾವಂತ್ ಅವರಿಗೆ ಸೇರಿದ ಭೈರವನಾಥ್ ಶುಗರ್ ವರ್ಕ್ಸ್ ಕಚೇರಿಗೆ ಬೆಳಿಗ್ಗೆ ನುಗ್ಗಿ ಕಟ್ರಾಜ್ ಪ್ರದೇಶದಲ್ಲಿದ್ದ ಕಚೇರಿಗೆ ಹಾನಿ ಮಾಡಲಾಗಿದೆ. ಅಲ್ಲದೆ, ಮುಂದಿನ ದಿನಗಳಲ್ಲಿ ಪ್ರತಿಯೊಬ್ಬ ರೆಬೆಲ್ ಶಿವಸೇನೆ ಶಾಸಕನ ಕಚೇರಿಯನ್ನೂ ಧ್ವಂಸ ಮಾಡಲಾಗುವುದು ಎಂದು ಎಚ್ಚರಿಸಲಾಗಿದೆ.

ಇದನ್ನೂ ಓದಿ: Maharashtra Crisis: ಮಹಾರಾಷ್ಟ್ರ ಹೈಡ್ರಾಮಾ; 16 ರೆಬೆಲ್ ಶಾಸಕರಿಗೆ ಇಂದು ನೋಟಿಸ್ ನೀಡ್ತಾರಾ ಡೆಪ್ಯುಟಿ ಸ್ಪೀಕರ್?

ಶನಿವಾರ ಗುವಾಹಟಿಯಲ್ಲಿ ನಡೆದ ಸಭೆಯಲ್ಲಿ ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ಶಿವಸೇನೆ ನಾಯಕರ ಬಣವು ‘ಶಿವಸೇನಾ ಬಾಳಾಸಾಹೇಬ್ ಗ್ರೂಪ್’ ಎಂದು ಹೆಸರಿಸುವುದಾಗಿ ಘೋಷಿಸಿದ್ದಾರೆ. ಪ್ರಸ್ತುತ ಅಸ್ಸಾಂನ ಗುವಾಹಟಿಯಲ್ಲಿ ಬೀಡುಬಿಟ್ಟಿರುವ ಬಂಡಾಯ ಶಾಸಕರ ಪೈಕಿ ಸೇರಿರುವ ಶಿವಸೇನೆ ಶಾಸಕ ತಾನಾಜಿ ಸಾವಂತ್ ಅವರ ಕಚೇರಿಗೆ ಪುಣೆಯಲ್ಲಿ ಶಿವಸೇನೆ ಕಾರ್ಯಕರ್ತರು ಶನಿವಾರ ದಾಳಿ ನಡೆಸಿದ್ದಾರೆ. ನಮ್ಮ ಪಕ್ಷದ ಕಾರ್ಯಕರ್ತ ತಾನಾಜಿ ಸಾವಂತ್ ಅವರ ಕಚೇರಿಯನ್ನು ಧ್ವಂಸಗೊಳಿಸಿದರು. ನಮ್ಮ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರಿಗೆ ತೊಂದರೆ ನೀಡಿದ ಎಲ್ಲಾ ದೇಶದ್ರೋಹಿಗಳು ಮತ್ತು ಬಂಡಾಯ ಶಾಸಕರು ಈ ರೀತಿಯ ಕ್ರಮವನ್ನು ಎದುರಿಸಬೇಕಾಗುತ್ತದೆ. ಅವರ ಕಚೇರಿಯ ಮೇಲೂ ದಾಳಿ ನಡೆಸಲಾಗುವುದು. ಯಾರನ್ನೂ ಬಿಡಲಾಗುವುದಿಲ್ಲ ಎಂದು ಪುಣೆ ಶಿವಸೇನೆಯ ಮುಖ್ಯಸ್ಥ ಸಂಜಯ್ ಮೋರೆ ಹೇಳಿದ್ದಾರೆ.

ಶಿವಸೇನೆಯ ಬಹುಪಾಲು ಶಾಸಕರು ಏಕನಾಥ್ ಶಿಂಧೆಯೊಂದಿಗೆ ಕೈ ಜೋಡಿಸಿದ್ದು, ಗುವಾಹಟಿಯಲ್ಲಿ ಮೊಕ್ಕಾಂ ಹೂಡಿದ್ದಾರೆ. ಈ ಮೂಲಕ ಶಿವಸೇನೆಯ ನಾಯಕ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರವನ್ನು ಬಿಕ್ಕಟ್ಟಿಗೆ ತಳ್ಳಿದ್ದಾರೆ. ಯಾವುದೇ ಕ್ಷಣದಲ್ಲಿ ಬೇಕಾದರೂ ಉದ್ಧವ್ ಠಾಕ್ರೆ ಸರ್ಕಾರ ಪತನವಾಗುವ ಸಾಧ್ಯತೆಯಿದೆ.

Published On - 1:59 pm, Sat, 25 June 22

ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ