AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Political Crisis:ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು: ಸಂಪುಟ ಸಭೆ ಕರೆದ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ

ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತುರ್ತು ಸಂಪುಟ ಸಭೆ ಕರೆದಿದ್ದಾರೆ. ಮಧ್ಯಾಹ್ನ 1 ಕ್ಕೆ ಸಂಪುಟ ಸಭೆ ನಡೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Political Crisis:ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು:  ಸಂಪುಟ ಸಭೆ ಕರೆದ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ
Uddhav Thackeray
TV9 Web
| Edited By: |

Updated on: Jun 22, 2022 | 10:17 AM

Share

ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತುರ್ತು ಸಂಪುಟ ಸಭೆ ಕರೆದಿದ್ದಾರೆ. ಮಧ್ಯಾಹ್ನ 1 ಕ್ಕೆ ಸಂಪುಟ ಸಭೆ ನಡೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಏಕನಾಥ ಶಿಂಧೆ ನೇತೃತ್ವದಲ್ಲಿ 30ಕ್ಕೂ ಹೆಚ್ಚು ಶಾಸಕರು ಸರ್ಕಾರದ ವಿರುದ್ಧ ಬಂಡಾಯ ಎದ್ದಿದ್ದಾರೆ. ಪಕ್ಷೇತರ ಶಾಸಕರ ಜೊತೆ ಶಿವಸೇನೆ ಶಾಸಕರು ಗುವಾಹಟಿಯ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದು, ಈ ಹಿನ್ನೆಲೆಯಲ್ಲಿ ಸಂಪುಟ ಸಭೆ ಕರೆಯಲಾಗಿದೆ.

ಮಹಾರಾಷ್ಟ್ರ ನಗರಾಭಿವೃದ್ಧಿ ಸಚಿವರಾಗಿದ್ದ ಏಕನಾಥ್ ಶಿಂಧೆ ಬಂಡಾಯವೆದ್ದಿದ್ದು, ವಿಧಾನ ಪರಿಷತ್‌ ಮತ್ತು ರಾಜ್ಯ ಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಹಿನ್ನೆಲೆಯಲ್ಲೇ ಹತ್ತಕ್ಕೂ ಹೆಚ್ಚು ಸೇನಾ ಶಾಸಕರೊಂದಿಗೆ ಸೂರತ್‌ಗೆ ತೆರಳಿದ್ದರು. ಅಲ್ಲದೇ 26ಕ್ಕೂ ಹೆಚ್ಚು ಶಾಸಕರು ಉದ್ಧವ್‌ ಠಾಕ್ರೆ ವಿರುದ್ಧ ಬಂಡಾಯವೆದ್ದು, ಶಿಂಧೆ ಜೊತೆ ಗುಜರಾತ್‌ಗೆ ತೆರಳಿದ್ದರು. ಇದೀಗ ರೆಬೆಲ್ ಶಾಸಕರನ್ನ ಸೂರತ್‌ನಿಂದ ಅಸ್ಸಾಂಗೆ ಸ್ಥಳಾಂತರಿಸಲಾಗಿದೆ.

ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆ ನಂತರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ ಆಘಾಡಿ ಸರ್ಕಾರ ಇಕ್ಕಟ್ಟಿಕ್ಕೆ ಸಿಲುಕಿದೆ. ಶಾಸಕರ ಮನವೊಲಿಸಲು ಸಾಕಷ್ಟು ಪ್ರಯತ್ನಗಳು ನಡೆಯುತ್ತಿವೆ.

ಮಂಗಳವಾರ ಉದ್ಧವ್ ಠಾಕ್ರೆ ಶಿವಸೇನಾ ಶಾಸಕರ ಸಭೆ ಕರೆಯಲಾಗಿತ್ತು, ಠಾಕ್ರೆ ನಿವಾಸದಲ್ಲಿ ನಡೆದ ಸಭೆಯ ಬಳಿಕ ಅವರು ಶಾಸಕರನ್ನು ಮುಂಬೈನ ಖಾಸಗಿ ಹೋಟೆಲ್‌ಗೆ ಕಳುಹಿಸಲಾಗಿತ್ತು. ಮತ್ತೆ ಯಾವುದೇ ಶಾಸಕರು ಏಕನಾಥ ಶಿಂಧೆ ಗುಂಪು ಸೇರದಂತೆ ಜಾಗ್ರತೆ ವಹಿಸಲಾಗಿದೆ ಎನ್ನಲಾಗಿದೆ.

ಶಿವಸೇನೆಯ ನಾಯಕ ಏಕನಾಥ ಶಿಂಧೆ ನೇತೃತ್ವದಲ್ಲಿ ಶಿವಸೇನೆಯ ಶಾಸಕರು, 7 ಪಕ್ಷೇತರ ಶಾಸಕರು ಬಂಡಾಯ ಎದ್ದಿದ್ದಾರೆ. ಗುಜರಾತ್‌ನ ಸೂರತ್‌ನ ಹೋಟೆಲ್‌ನಲ್ಲಿದ್ದ ಎಲ್ಲರೂ ಬುಧವಾರ ಬೆಳಗ್ಗೆ ಗುವಾಹಟಿ ತಲುಪಿದ್ದಾರೆ.

ಮಹಾರಾಷ್ಟ್ರದ ಮಹಾ ವಿಕಾಸ ಅಘಾಡಿ ಸರ್ಕಾರಕ್ಕೆ ಬಂಡಾಯದ ಬಿಸಿ ತತಟ್ಟಿರುವುದಂತೂ ಸತ್ಯ. ಹೀಗಾಗಿ ಮಹಾ ವಿಕಾಸ ಅಘಾಡಿ ಸರ್ಕಾರಕ್ಕೆ ಅಧಃಪತನದ ಭಯ ಮೂಡಿದೆ.

ಶಿವಸೇನೆಯಲ್ಲಿ 55 ಶಾಸಕರಿದ್ದಾರೆ ಅದರಲ್ಲಿ ನಮಗೆ 40 ಶಾಸಕರ ಬೆಂಬಲವಿದೆ ಎಂದು ಏಕನಾಥ ಶಿಂಧೆ ಹೇಳಿಕೊಂಡಿದ್ದಾರೆ. ಶಿವಸೇನೆ ಬಿಜೆಪಿ ಜೊತೆ ಸೇರಿ ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಬೇಕು ಎಂಬುದು ಬಂಡಾಯ ಎದ್ದಿರುವ ಶಾಸಕರ ಪ್ರಮುಖ ಬೇಡಿಕೆಯಾಗಿದೆ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡಿದೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ