AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra Politics: ಮುಂಬೈ ಉಸ್ತುವಾರಿ, ಹಣಕಾಸು ಇಲಾಖೆಗೆ ಬಿಜೆಪಿ-ಶಿಂದೆ ಬಣದ ನಡುವೆ ಹಗ್ಗಜಗ್ಗಾಟ

ಮುಂದಿನ ಸರ್ಕಾರದಲ್ಲಿ ಶಿಂದೆ ಬಣ್ಣಕ್ಕೆ 13 ಸಚಿವ ಸ್ಥಾನವನ್ನು ನೀಡಲು ಬಿಜೆಪಿ ಮುಂದಾಗಿದೆ.

Maharashtra Politics: ಮುಂಬೈ ಉಸ್ತುವಾರಿ, ಹಣಕಾಸು ಇಲಾಖೆಗೆ ಬಿಜೆಪಿ-ಶಿಂದೆ ಬಣದ ನಡುವೆ ಹಗ್ಗಜಗ್ಗಾಟ
ಏಕನಾಥ್ ಶಿಂಧೆ ಮತ್ತು ದೇವೇಂದ್ರ ಫಡಣವಿಸ್
TV9 Web
| Edited By: |

Updated on:Jun 30, 2022 | 9:24 AM

Share

ಮುಂಬೈ: ಶಿವಸೇನೆ ನಾಯಕ ಏಕನಾಥ್ ಶಿಂದೆ (Eknath Shinde) ನೇತೃತ್ವದಲ್ಲಿ ಶಾಸಕರು ಬಂಡಾಯವೆದ್ದ ನಂತರ ಉದ್ಘವವಾಗಿದ್ದ ಮಹಾರಾಷ್ಟ್ರ ರಾಜಕಾರಣದ ಬಿಕ್ಕಟ್ಟು (Maharashtra Political Crisis) ಇಂದು ನಿರ್ಣಾಯಕ ಘಟ್ಟ ತಲುಪಿದೆ. ಇಂದು (ಜೂನ್ 30) ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ನಡೆಯಲಿದ್ದು, ದೇವೇಂದ್ರ ಫಡಣವೀಸ್ (Devendra Fadnavis) ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ಬಹುತೇಕ ಖಚಿತವಾಗಿದೆ. ಮುಂಬೈನಿಂದ ಗುಜರಾತ್​​ಗೆ, ಅಲ್ಲಿಂದ ಅಸ್ಸಾಂಗೆ ಹೋಗಿದ್ದ ಬಂಡಾಯ ಶಾಸಕರು ನಿನ್ನೆ ಗೋವಾಕ್ಕೆ ಹಿಂದಿರುಗಿದ್ದರು. ಇಂದು ಮುಂಬೈ ತಲುಪಲಿರುವ ಶಾಸಕರು ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದಾರೆ. ವಿಶ್ವಾಸಮತ ಯಾಚನೆಗೂ ಮೊದಲೇ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಅಧಿಕಾರ ಹಂಚಿಕೆ ಕುರಿತಂತೆಯೂ ಏಕನಾಥ್ ಶಿಂದೆ ಮತ್ತು ದೇವೇಂದ್ರ ಫಡಣವೀಸ್ ಜೊತೆಗೆ ಮಾತುಕತೆ ನಡೆಯುತ್ತಿದೆ. ಮುಂದಿನ ಕಾರ್ಯತಂತ್ರದ ಬಗ್ಗೆಯೂ ಇಬ್ಬರು ನಾಯಕರು ಸುದೀರ್ಘ ಚರ್ಚೆ ನಡೆಸಿದರು. ಹೊಸ ಸರ್ಕಾರ ರಚನೆಯಾಗುವವರೆಗೂ ಶಾಸಕರು ಒಟ್ಟಿಗೆ ಇರುವಂತೆ ನೋಡಿಕೊಳ್ಳಬೇಕು ಎಂದು ಈ ಸಂದರ್ಭದಲ್ಲಿ ಏಕನಾಥಶಿಂದೆ ಅವರಿಗೆ ಫಡಣವೀಸ್ ವಿನಂತಿಸಿದರು. ಮಧ್ಯಾಹ್ನ 12 ಗಂಟೆಗೆ ಬಿಜೆಪಿ ಕೋರ್ ಕಮಿಟಿ ಮೀಟಿಂಗ್ ನಡೆಯಲಿದ್ದು, ಹೊಸ ಸರ್ಕಾರದ ರಚನೆ ಹಾಗೂ ಮಂತ್ರಿ ಮಂಡಲದ ಬಗ್ಗೆ ಚರ್ಚೆ ನಡೆಯಲಿದೆ. ದೇವೇಂದ್ರ ಫಡಣವೀಸ್ ಅವರು ನಾಳೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ.

ಗೋವಾದ ತಾಜ್ ಹೊಟೆಲ್​ನಲ್ಲಿರುವ ಶಿವಸೇನೆಯ ಬಂಡಾಯ ಶಾಸಕರೊಂದಿಗೆ ಬೆಳಿಗ್ಗೆ 10 ಗಂಟೆಗೆ ಏಕನಾಥ ಶಿಂದೆ ಸಭೆ ನಡೆಸಲಿದ್ದಾರೆ. ತಮ್ಮ ಗುಂಪಿನ ಯಾವೆಲ್ಲಾ ಶಾಸಕರಿಗೆ ಸಚಿವ ಸ್ಥಾನ ಸಿಗಬೇಕು ಎಂಬ ಬಗ್ಗೆ ಸಭೆ ತೀರ್ಮಾನಿಸಲಿದೆ. ಶಾಸಕರ ಅಭಿಪ್ರಾಯ ಸಂಗ್ರಹಿಸಿದ ನಂತರ ಮುಂಬೈಗೆ ಏಕನಾಥ್ ಶಿಂಧೆ ಒಬ್ಬರೇ ತೆರಳಲಿದ್ದಾರೆ. ಅಲ್ಲಿ ದೇವೇಂದ್ರ ಫಡಣವೀಸ್ ಅವರನ್ನು ಮುಖಾಮುಖಿ ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ.

ಇದನ್ನೂ ಓದಿ
Image
Maharashtra Politics: ಗುವಾಹತಿಯಿಂದ ಗೋವಾಕ್ಕೆ ಮಹಾರಾಷ್ಟ್ರದ ಬಂಡಾಯ ಶಾಸಕರು, ಮುಂಬೈಗೆ ಸಿಟಿ ರವಿ ದೌಡು, ಇಂದು ವಿಧಾನಸಭೆ ಅಧಿವೇಶನ
Image
ನಾನು ಅನಿರೀಕ್ಷಿತ ರೀತಿಯಲ್ಲಿಅಧಿಕಾರಕ್ಕೆ ಬಂದಿದ್ದೆ, ಅದೇ ರೀತಿಯಲ್ಲಿ ಹೊರಡುತ್ತಿದ್ದೇನೆ: ಉದ್ಧವ್ ಠಾಕ್ರೆ
Image
Uddhav Thackeray Resigned ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಾಜೀನಾಮೆ
Image
ಮಹಾರಾಷ್ಟ್ರ ರಾಜಕೀಯದಲ್ಲಿ ಬಾಹುಬಲಿ ಪೋಸ್ಟರ್ ಪ್ರತ್ಯಕ್ಷ, ಗದ್ದಾರ್​ ಎಂದು ಜರಿದರು! ಆದರೆ ಇಲ್ಲಿ ಕಟ್ಟಪ್ಪ ಯಾರು?

ಶಿಂದೆ ಬಣಕ್ಕೆ ಬಿಜೆಪಿ ಆಫರ್

ದೇವೇಂದ್ರ ಫಡಣವೀಸ್ ನೇತೃತ್ವದಲ್ಲಿ ಅಧಿಕಾರಕ್ಕೆ ಬರಲಿರುವ ಮುಂದಿನ ಸರ್ಕಾರದಲ್ಲಿ ಶಿಂದೆ ಬಣ್ಣಕ್ಕೆ 13 ಸಚಿವ ಸ್ಥಾನವನ್ನು ನೀಡಲು ಬಿಜೆಪಿ ಮುಂದಾಗಿದೆ. ಈ ಪೈಕಿ 8 ಮಂದಿಗೆ ಸಂಪುಟ ದರ್ಜೆ, ಐವರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಲು ಬಿಜೆಪಿ ಒಪ್ಪಿಕೊಂಡಿದೆ ಎಂದು ಮೂಲಗಳು ಹೇಳಿವೆ. ಮುಂಬೈ ಉಸ್ತುವಾರಿ ಸೇರಿದಂತೆ ನಗರಾಭಿವೃದ್ಧಿ, ಲೋಕೋಪಯೋಗಿ ಹಾಗೂ ಆರ್ಥಿಕ ಇಲಾಖೆ ತಮಗೇ ಬೇಕೆಂದು ಶಿಂದೆ ಬಣ ಬೇಡಿಕೆ ಇಟ್ಟಿದೆ. ಆರ್ಥಿಕ ಇಲಾಖೆ ಹಾಗೂ ನಗರಾಭಿವೃದ್ಧಿ ಇಲಾಖೆಗಳು ಮುಖ್ಯಮಂತ್ರಿ ಬಳಿಯ ಇದ್ದರೆ ಒಳಿತು ಎಂದು ಬಿಜೆಪಿ ಹೇಳಿದೆ. ಸಚಿವ ಸ್ಥಾನ ಹಂಚಿಕೆ ವಿಚಾರ ಅಂತಿಮಗೊಳಿಸಲು ಶಿಂದೆ ಮತ್ತು ಫಡಣವೀಸ್ ಪರಸ್ಪರ ಚರ್ಚಿಸಲಿದ್ದಾರೆ.

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಉದ್ಧವ್ ಠಾಕ್ರೆ ಅವರ ಖಾಸಗಿ ನಿವಾಸ ‘ಮಾತೋಶ್ರೀ’ಗೆ ಮಹಾರಾಷ್ಟ್ರ ಪೊಲೀಸರು ಭದ್ರತೆಯನ್ನು ಹೆಚ್ಚಿಸಿದ್ದಾರೆ.

Published On - 9:21 am, Thu, 30 June 22

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ