AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ ಬಂಡಾಯ ಶಾಸಕರಿಗೆ ಸಿಆರ್​ಪಿಎಫ್ ಭದ್ರತೆ ಒದಗಿಸಲು ಕೇಂದ್ರ ಸರ್ಕಾರ ನಿರ್ಧಾರ

ಈ ನಡುವೆ ಕೇಂದ್ರ ಸರ್ಕಾರವು ಶಿವಸೇನೆಯ 15 ಬಂಡಾಯ ಶಾಸಕರಿಗೆ Y+ ಭದ್ರತೆಯನ್ನು ಒದಗಿಸಿದೆ.

ಮಹಾರಾಷ್ಟ್ರ ಬಂಡಾಯ ಶಾಸಕರಿಗೆ ಸಿಆರ್​ಪಿಎಫ್ ಭದ್ರತೆ ಒದಗಿಸಲು ಕೇಂದ್ರ ಸರ್ಕಾರ ನಿರ್ಧಾರ
ಮಹಾರಾಷ್ಟ್ರದಲ್ಲಿ ಶಿವಸೇನೆಯ ಬಂಡಾಯ ಶಾಸಕರ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ.
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Jun 27, 2022 | 10:09 AM

Share

ಮುಂಬೈ: ಶಿವಸೇನೆ ನಾಯಕ ಏಕನಾಥ ಶಿಂಧೆ (Eknath Shinde) ನೇತೃತ್ವದಲ್ಲಿ ಶಾಸಕರು ಬಂಡೆದ್ದ ನಂತರ ಉದ್ಭವಿಸಿರುವ ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು (Maharashtra Political Crisis) ಭಾನುವಾರ ನಿರ್ಣಾಯಕ ಘಟ್ಟ ತಲುಪಿದೆ. ಶಾಸಕರ ಮನವೊಲಿಸುವ, ಬೆದರಿಕೆಯೊಡ್ಡುವ ಪ್ರಯತ್ನಗಳನ್ನು ಉದ್ಧವ್ ಠಾಕ್ರೆ ಮತ್ತು ಇತರ ನಾಯಕರು ಮುಂದುವರಿಸಿದ್ದಾರೆ. ಕೆಲ ಬಂಡಾಯ ಶಾಸಕರ ಮನೆಗಳು ಮತ್ತು ಕಚೇರಿಗಳ ಮೇಲೆ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಈ ನಡುವೆ ತಮ್ಮ ಬಂಡಾಯವು ಪಕ್ಷದ ಅಥವಾ ಕಾರ್ಯಕರ್ತರ ವಿರುದ್ಧವಲ್ಲ. ಮಹಾವಿಕಾಸ ಅಘಾಡಿ (Maha Vikas Aghadi – MVA) ಉಂಟು ಮಾಡಬಹುದಾದ ದುರಂತಗಳಿಂದ ಪಕ್ಷವನ್ನು ಉಳಿಸಲು ನಾನು ಪ್ರಯತ್ನಿಸುತ್ತಿದ್ದೇನೆ ಎಂಬುದನ್ನು ಕಾರ್ಯಕರ್ತರು ಅರ್ಥ ಮಾಡಿಕೊಳ್ಳಬೇಕಿದೆ ಎಂದು ಬಂಡಾಯ ಬಣದ ಶಾಸಕ ಏಕನಾಥ ಶಿಂಧೆ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.

ಪುಣೆ ಸೇರಿದಂತೆ ವಿವಿಧೆಡೆ ಬಂಡಾಯ ಶಾಸಕರ ಫ್ಲೆಕ್ಸ್​​ಗಳಿಗೆ ಸೆಗಣಿ ಎರಚಿ, ಕಲ್ಲು ತೂರಿ ಶಿವಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ನಂತರ ಏಕನಾಥ ಶಿಂಧೆ ಮೇಲಿನಂತೆ ಸ್ಪಷ್ಟನೆ ನೀಡಿದ್ದಾರೆ. ಮಹಾ ವಿಕಾಸ ಅಘಾಡಿ ಮೈತ್ರಿಕೂಟದಿಂದ ಶಿವಸೇನೆ ಹೊರಬರಬೇಕು ಎಂದು ಶಿಂಧೆ ಮತ್ತು ಅವರ ಬೆಂಬಲಿಗರು ಈ ಹಿಂದೆಯೂ ಆಗ್ರಹಿಸಿದ್ದರು. ಕಾಂಗ್ರೆಸ್ ಮತ್ತು ಎನ್​ಸಿಪಿ ದೂರ ಇರಿಸಿ, ಬಿಜೆಪಿಯೊಂದಿಗೆ ಮತ್ತೆ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂದು ಶಿಂಧೆ ಒತ್ತಾಯಿಸಿದ್ದರು.

ಈ ನಡುವೆ ಕೇಂದ್ರ ಸರ್ಕಾರವು ಶಿವಸೇನೆಯ 15 ಬಂಡಾಯ ಶಾಸಕರಿಗೆ Y+ ಭದ್ರತೆಯನ್ನು ಒದಗಿಸಿದೆ. ಇದರ ಅನ್ವಯ ಇನ್ನು ಮುಂದೆ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಪೊಲೀಸರು ಈ ಶಾಸಕರಿಗೆ ಭದ್ರತೆ ಒದಗಿಸಲಿದ್ದಾರೆ. ರಮೇಶ್​ ಬೊರ್​ನಾರೆ, ಮಂಗೇಶ್ ಕುದಾಲ್​ಕರ್, ಸಂಜಯ್ ಶ್ರೀಸಟ್, ಲತಾಬಾಯಿ ಸೊನಾವನೆ, ಪ್ರಕಾಶ್ ಸುರ್ವೆ ಈ ಪಟ್ಟಿಯಲ್ಲಿ ಸೇರಿದ್ದಾರೆ. ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್, ಡಿಜಿಪಿ ರಜನೀಶ್ ಸೇಟ್ ಅವರಿಗೆ ನಿನ್ನೆಯಷ್ಟೇ ಏಕನಾಥ ಶಿಂಧೆ ಪತ್ರ ಬರೆದು, ಬಂಡಾಯ ಶಾಸಕರಿಗೆ ನೀಡಿದ್ದ ಭದ್ರತೆ ಹಿಂಪಡೆಯಲಾಗಿದೆ ಎಂದು ಆರೋಪಿಸಿದ್ದರು. ಅವರು ಪತ್ರ ಬರೆದ ಒಂದು ದಿನದ ನಂತರ ಕೇಂದ್ರ ಸರ್ಕಾರವು ಭದ್ರತೆ ಒದಗಿಸಲು ಕ್ರಮ ತೆಗೆದುಕೊಂಡಿದೆ.

ಇದನ್ನೂ ಓದಿ
Image
MVA Crisis: ಬಾಳಾಸಾಹೇಬರ ಹೆಸರು ಬಿಡಿ, ನಿಮ್ಮಪ್ಪನ ಹೆಸರು ಬಳಸಿಕೊಳ್ಳಿ: ಬಂಡಾಯ ಶಾಸಕರಿಗೆ ಸಂಜಯ್ ರಾವುತ್ ಸವಾಲು
Image
ಬಂಡಾಯ ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರವನ್ನು ಉದ್ಧವ್ ಠಾಕ್ರೆಗೆ ನೀಡಿ ನಿರ್ಣಯ ಅಂಗೀಕರಿಸಿದ ಶಿವಸೇನಾ
Image
Maharashtra Political Analysis: ಶಿವಸೇನೆ ಪಕ್ಷದ ಇಬ್ಭಾಗ ಖಚಿತ; ಏಕನಾಥ್ ಶಿಂಧೆ ಬಣದ ಜೊತೆ ಸರ್ಕಾರ ರಚನೆಗೆ ಬಿಜೆಪಿ ಕಾತರ
Image
ಮಹಾರಾಷ್ಟ್ರ ಸರ್ಕಾರದ ಇಂದಿನ ರಾಜಕೀಯ ಬಿಕ್ಕಟ್ಟಿಗೆ ಶಿವಸೇನೆಯ ಒಳಜಗಳವೇ ಕಾರಣ -ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವ್ಯಾಖ್ಯಾನ

ಅಂಕಿಅಂಶದ ಲೆಕ್ಕಾಚಾರ

ಮಹಾರಾಷ್ಟ್ರ ವಿಧಾನಸಭೆಯ ಒಟ್ಟು ಸದಸ್ಯ ಬಲವು 288. ಈ ಪೈಕಿ ಒಂದು ಸ್ಥಾನವು ತೆರವಾಗಿದೆ. ಹೀಗಾಗಿ ಸದ್ಯ 287 ಸದಸ್ಯರಿದ್ದಾರೆ. ಶಿವಸೇನೆಯ 55 ಸದಸ್ಯರಿದ್ದು, ಎನ್​ಸಿಪಿ 53, ಕಾಂಗ್ರೆಸ್ 44 ಸದಸ್ಯ ಬಲ ಹೊಂದಿದೆ. ಮೂರು ಸಣ್ಣ ಪಕ್ಷಗಳು ಮತ್ತು 9 ಪಕ್ಷೇತರರ ಬೆಂಬಲದೊಂದಿಗೆ ಮಹಾ ವಿಕಾಸ ಅಘಾಡಿ ಮೈತ್ರಿ 166 ಸದಸ್ಯ ಬಲದ ಬೆಂಬಲದೊಂದಿಗೆ ಸರ್ಕಾರ ರಚಿಸಿದೆ. ಬಿಜೆಪಿ 106 ಸದಸ್ಯ ಬಲ ಹೊಂದಿದ್ದು, ಎರಡು ಮಿತ್ರ ಪಕ್ಷಗಳು ಮತ್ತು ನಾಲ್ವರ ಪಕ್ಷೇತರ ಸದಸ್ಯರ ಬೆಂಬಲದೊಂದಿಗೆ 112 ಮಂದಿ ತನ್ನ ಪರ ಇರುವುದಾಗಿ ಹೇಳಿದೆ.

ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಬೇಕಿರುವ ಸದಸ್ಯರ ಸಂಖ್ಯೆ 143. ಸದ್ಯ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಿಜೆಪಿ ಹಾಗೂ ಎನ್​ಡಿಎ ಮೈತ್ರಿಕೂಟ 113 ಸಂಖ್ಯಾಬಲ ಹೊಂದಿದೆ. ಇದೀಗ ಏಕನಾಥ ಶಿಂಧೆ ಬಣದಲ್ಲಿ ಪಕ್ಷೇತರ ಶಾಸಕರು ಸೇರಿದಂತೆ 48 ಶಾಸಕರು ಗುರುತಿಸಿಕೊಂಡಿದ್ದಾರೆ. ಇದರಿಂದಾಗಿ ಎನ್​​ಡಿಎ ಮತ್ತು ಏಕನಾಥ ಶಿಂಧೆ‌ ಬಣದ ಶಾಸಕರ ಸಂಖ್ಯೆ 161ಕ್ಕೆ ಹೆಚ್ಚಾಗಿದೆ. ಇದೇ ಹೊತ್ತಿಗೆ ಆಡಳಿತಾರೂಢ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟದ ಸಂಖ್ಯಾಬಲವು 124ಕ್ಕೆ ಕುಸಿತ ಕಂಡಿದೆ. ವಿಧಾನಸಭೆಯಲ್ಲಿ ಸಿಎಂ ಉದ್ಧವ್ ಠಾಕ್ರೆ ಬಹುಮತ ಕಳೆದುಕೊಳ್ಳುವ ಸಾಧ್ಯತೆ ನಿಚ್ಚಳ ಎನಿಸಿದೆ.

Published On - 2:57 pm, Sun, 26 June 22

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ