AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pawar Vs Pawar: ಯಾರು ಹೆಚ್ಚು ಶಾಸಕರನ್ನು ಹೊಂದಿದ್ದಾರೆ ಎಂಬುದನ್ನು ನಿರೂಪಿಸಲು ಎನ್​ಸಿಪಿಯ ಎರಡು ಬಣಗಳ ಸಭೆ

ಪಕ್ಷದ ಬಹುಪಾಲು ಶಾಸಕರು ತಮ್ಮೊಂದಿಗಿದ್ದಾರೆ ಎಂಬುದನ್ನು ನಿರೂಪಿಸಲು ಎನ್​ಸಿಪಿಯ ಎರಡು ಬಣಗಳು ಇಂದು ಮುಂಬೈನಲ್ಲಿ ಸಭೆ ಕರೆದಿವೆ. ಕಳೆದ ವಾರವಷ್ಟೇ ಅಜಿತ್ ಪವಾರ್(Ajit Pawar)  ಬಂಡಾಯವೆದ್ದು ಮಹಾರಾಷ್ಟ್ರ ಸರ್ಕಾರಕ್ಕೆ ಸೇರ್ಪಡೆಯಾದಾಗಿನಿಂದ ಈ ಚರ್ಚೆಗಳು ತೀವ್ರವಾಗಿವೆ.

Pawar Vs Pawar: ಯಾರು ಹೆಚ್ಚು ಶಾಸಕರನ್ನು ಹೊಂದಿದ್ದಾರೆ ಎಂಬುದನ್ನು ನಿರೂಪಿಸಲು ಎನ್​ಸಿಪಿಯ ಎರಡು ಬಣಗಳ ಸಭೆ
ಅಜಿತ್ ಪವಾರ್-ಶರದ್ ಪವಾರ್
ನಯನಾ ರಾಜೀವ್
|

Updated on: Jul 05, 2023 | 12:05 PM

Share

ಪಕ್ಷದ ಬಹುಪಾಲು ಶಾಸಕರು ತಮ್ಮೊಂದಿಗಿದ್ದಾರೆ ಎಂಬುದನ್ನು ನಿರೂಪಿಸಲು ಎನ್​ಸಿಪಿಯ ಎರಡು ಬಣಗಳು ಇಂದು ಮುಂಬೈನಲ್ಲಿ ಸಭೆ ಕರೆದಿವೆ. ಕಳೆದ ವಾರವಷ್ಟೇ ಅಜಿತ್ ಪವಾರ್(Ajit Pawar)  ಬಂಡಾಯವೆದ್ದು ಮಹಾರಾಷ್ಟ್ರ ಸರ್ಕಾರಕ್ಕೆ ಸೇರ್ಪಡೆಯಾದಾಗಿನಿಂದ ಈ ಚರ್ಚೆಗಳು ತೀವ್ರವಾಗಿವೆ. ಮುಂಬೈನಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ನಡೆಯಲಿದ್ದು, ಸಭೆಯಲ್ಲಿ ಪಾಲ್ಗೊಳ್ಳುವಂತೆ ಶರದ್ ಪವಾರ್ ನೇತೃತ್ವದ ನ್ಯಾಷನಾಲಿಸ್ಟ್​ ಕಾಂಗ್ರೆಸ್ ಪಾರ್ಟಿ ತನ್ನ ಎಲ್ಲಾ ಶಾಸಕರಿಗೆ ವಿಪ್ ಜಾರಿ ಮಾಡಿದೆ. ಪಕ್ಷದ ಮುಖ್ಯ ಸಚೇತಕರಾಗಿ ನೇಮಕಗೊಂಡಿರುವ ಜಿತೇಂದ್ರ ಅವದ್ ಅವರು ವಿಪ್ ಜಾರಿ ಮಾಡಿದ್ದಾರೆ.

ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಗೆ ಹಾಜರಾಗುವಂತೆ ಮತ್ತು ಮುಂದಿನ ಹಾದಿಯಲ್ಲಿ ಶರದ್ ಪವಾರ್ ಅವರಿಂದ ಮಾರ್ಗದರ್ಶನ ಪಡೆಯುವಂತೆ ಎನ್‌ಸಿಪಿಯ ಕಾರ್ಯಾಧ್ಯಕ್ಷರು ವೀಡಿಯೋ ಮೂಲಕ ಒತ್ತಾಯಿಸಿದ್ದಾರೆ.

ಮತ್ತಷ್ಟು ಓದಿ: ಪಕ್ಷ ಮರುಸಂಘಟಗೆ ಶರದ್ ಪವಾರ್ ಶಪಥ, ಎನ್​ಸಿಪಿ ನಮ್ಮ ಪಕ್ಷ ಎಂದ ಅಜಿತ್ ಪವಾರ್; ಶಿವಸೇನೆಯಂತೆ ವಿಭಾಗವಾಯ್ತಾ ಎನ್​ಸಿಪಿ?

ಬಾಂದ್ರಾದಲ್ಲಿ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಪ್ರತಿಸ್ಪರ್ಧಿ ಗುಂಪು ಪಕ್ಷದ ಬಹುಪಾಲು ಶಾಸಕರ ಬೆಂಬಲವನ್ನು ಸಾಬೀತುಪಡಿಸುವ ಪ್ರಯತ್ನದಲ್ಲಿ ಪ್ರತ್ಯೇಕ ಸಭೆ ನಡೆಸಲಿದೆ. ಮುಂಬೈನ ವಿವಿಧೆಡೆ ಶರದ್ ಪವಾರ್ ಅಥವಾ ಅಜಿತ್ ಪವಾರ್ ಅವರಿಗೆ ಬೆಂಬಲ ಕೋರಿ ಪೋಸ್ಟರ್ ಗಳು ಹುಟ್ಟಿಕೊಂಡಿವೆ.

ಕಳೆದ ವಾರ ಅಜಿತ್ ಪವಾರ್ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದರು ಮತ್ತು ಗಂಟೆಗಳ ನಂತರ ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇತರ ಎಂಟು ಎನ್‌ಸಿಪಿ ಶಾಸಕರು ಕೂಡ ಪ್ರಮಾಣ ವಚನ ಸ್ವೀಕರಿಸಿದರು ಮತ್ತು ರಾಜ್ಯ ಸರ್ಕಾರ ಶೀಘ್ರದಲ್ಲೇ ಸಂಪುಟ ವಿಸ್ತರಣೆಯನ್ನು ಘೋಷಿಸುವ ನಿರೀಕ್ಷೆಯಿದೆ.

ಮಹಾರಾಷ್ಟ್ರ ವಿಧಾನಸಭೆಯಲ್ಲಿ ಎನ್‌ಸಿಪಿ 53 ಶಾಸಕರನ್ನು ಹೊಂದಿದೆ. ಮೂಲಗಳ ಪ್ರಕಾರ, ಅಜಿತ್ ಪವಾರ್ ತನಗೆ 43 ಮಂದಿ ಬೆಂಬಲವಿದೆ ಎಂದು ಹೇಳಿಕೊಂಡಿದ್ದಾರೆ. ಏಕನಾಥ್ ಶಿಂದೆ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಅಜಿತ್ ಪವಾರ್ ಮತ್ತು 8 ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಶರದ್ ಪವಾರ್ ಅವರ ಪಕ್ಷವು ವಿಧಾನಸಭಾಧ್ಯಕ್ಷ ರಾಹುಲ್ ನಾರ್ವೇಕರ್ ಅವರಿಗೆ ಮನವಿ ಸಲ್ಲಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!