Maharashtra Politics: ಶಿಂದೆ ಬಣದ ಶಾಸಕರ ಅನರ್ಹತೆ ಪ್ರಕರಣ, ವಿಧಾನಸಭೆ ಸ್ಪೀಕರ್​ಗೆ ಸುಪ್ರೀಂ ನೋಟಿಸ್

ಶಿವಸೇನೆಯ ಉದ್ಧವ್ ಠಾಕ್ರೆ(Uddhav Thackeray) ಬಣದ ನಾಯಕ ಸುನೀಲ್ ಪ್ರಭು ಅವರ ಅರ್ಜಿಯ ಮೇರೆಗೆ ಸುಪ್ರೀಂ ಕೋರ್ಟ್ ಶುಕ್ರವಾರ  ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ರಾಹುಲ್ ನಾರ್ವೇಕರ್ ಅವರಿಗೆ ನೋಟಿಸ್ ಜಾರಿ ಮಾಡಿದೆ. 

Maharashtra Politics: ಶಿಂದೆ ಬಣದ ಶಾಸಕರ ಅನರ್ಹತೆ ಪ್ರಕರಣ, ವಿಧಾನಸಭೆ ಸ್ಪೀಕರ್​ಗೆ ಸುಪ್ರೀಂ ನೋಟಿಸ್
ಸುಪ್ರೀಂಕೋರ್ಟ್​
Image Credit source: LiveLaw

Updated on: Jul 14, 2023 | 1:44 PM

ಶಿವಸೇನೆಯ ಉದ್ಧವ್ ಠಾಕ್ರೆ(Uddhav Thackeray) ಬಣದ ನಾಯಕ ಸುನೀಲ್ ಪ್ರಭು ಅವರ ಅರ್ಜಿಯ ಮೇರೆಗೆ ಸುಪ್ರೀಂ ಕೋರ್ಟ್ ಶುಕ್ರವಾರ  ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ರಾಹುಲ್ ನಾರ್ವೇಕರ್ ಅವರಿಗೆ ನೋಟಿಸ್ ಜಾರಿ ಮಾಡಿದೆ.  ಮುಖ್ಯಮಂತ್ರಿ ಏಕನಾಥ್ ಶಿಂದೆ(Eknath Shinde) ಸೇರಿದಂತೆ ಬಂಡಾಯ ನಾಯಕರ ಅನರ್ಹತೆ ವಿಚಾರವಾಗಿ ಸುಪ್ರೀಂ ಕೋರ್ಟ್ ಈ ಸೂಚನೆ ನೀಡಿದೆ. ಈ ಪ್ರಕರಣದ ಮುಂದಿನ ವಿಚಾರಣೆ 2 ವಾರಗಳ ನಂತರ ನಡೆಯಲಿದೆ.

ಏಕನಾಥ್ ಶಿಂದೆ ನೇತೃತ್ವದ ಬಂಡಾಯ ಶಾಸಕರ ವಿರುದ್ಧ ಬಾಕಿ ಉಳಿದಿರುವ ಅನರ್ಹತೆ ಅರ್ಜಿಗಳ ಕುರಿತು ತ್ವರಿತ ನಿರ್ಧಾರ ತೆಗೆದುಕೊಳ್ಳುವಂತೆ ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್‌ಗೆ ನಿರ್ದೇಶನ ನೀಡುವಂತೆ ಕೋರಿ ಶಿವಸೇನೆಯ ಉದ್ಧವ್ ಠಾಕ್ರೆ ನೇತೃತ್ವದ ಬಣದ ಮನವಿಯ ಮೇಲೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಈ ಅರ್ಜಿಯ ಕುರಿತು ಎರಡು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಕೋರಿದೆ ಎಂದು ಎಎನ್‌ಐ ವರದಿ ಮಾಡಿದೆ. ಉದ್ಧವ್ ಠಾಕ್ರೆ ಗುಂಪಿನ ನಾಯಕ ಸುನೀಲ್ ಪ್ರಭು ಮಾತನಾಡಿ, ಮುಖ್ಯಮಂತ್ರಿ ಏಕನಾಥ್ ಶಿಂದೆ ಅವರ ಮಿತ್ರರಾಗಿರುವ ಶಾಸಕರ ಅನರ್ಹತೆ ವಿಚಾರವು ಸ್ಪೀಕರ್ ಬಳಿ ಬಹಳ ದಿನಗಳಿಂದ ಬಾಕಿ ಉಳಿದಿದೆ.

ಮತ್ತಷ್ಟು ಓದಿ: Maharashtra Politics: ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಊಹಾಪೋಹಗಳ ನಡುವೆ ಶಿಂದೆ, ಫಡ್ನವಿಸ್ ಮಹತ್ವದ ಚರ್ಚೆ

ಸ್ಪೀಕರ್ ಬೇಗ ನಿರ್ಧಾರ ತೆಗೆದುಕೊಳ್ಳುವಂತೆ ಕೇಳಿಕೊಳ್ಳುತ್ತೇವೆ. ಸಿಜೆಐ ಡಿವೈ ಚಂದ್ರಚೂಡ್ ನೇತೃತ್ವದ ನ್ಯಾಯಮೂರ್ತಿ ಪಿ ಎಸ್ ನರಸಿಂಹ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರ ತ್ರಿಸದಸ್ಯ ಪೀಠವು ವಿಚಾರಣೆ ನಡೆಸುತ್ತಿದೆ.

ಬಾಕಿ ಉಳಿದಿರುವ ಅನರ್ಹತೆ ಅರ್ಜಿಗಳನ್ನು ಸಮಂಜಸವಾದ ಅವಧಿಯೊಳಗೆ ತೀರ್ಮಾನಿಸಬೇಕು ಎಂದು ಮೇ 11 ರ ತೀರ್ಪಿನಲ್ಲಿ ಉನ್ನತ ನ್ಯಾಯಾಲಯದ ನಿರ್ದಿಷ್ಟ ನಿರ್ದೇಶನದ ಹೊರತಾಗಿಯೂ ಸ್ಪೀಕರ್ ಒಂದೇ ಒಂದು ವಿಚಾರಣೆಯನ್ನು ನಡೆಸಿರಲಿಲ್ಲ.

ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಅವರು ಅನರ್ಹತೆಯ ವಿಷಯದ ಬಗ್ಗೆ ಉತ್ತರ ನೀಡುವಂತೆ ಉದ್ಧವ್ ಠಾಕ್ರೆ ಮತ್ತು ಶಿವಸೇನೆಯ ಸಿಎಂ ಏಕನಾಥ್ ಶಿಂದೆ ಬಣದ ಶಾಸಕರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಶಿಂದೆ ಬಣದ 40 ಮತ್ತು ಉದ್ಧವ್ ಪಾಳಯದ 14 ಶಾಸಕರಿಗೆ ನೋಟಿಸ್ ನೀಡಲಾಗಿದೆ ಎಂದು ವಿಧಾನಸಭಾ ಸ್ಪೀಕರ್ ನಾರ್ವೇಕರ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ಉಲ್ಲೇಖಿಸಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us