AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra Politics: ಸಿಎಂ ಏಕನಾಥ್ ಶಿಂಧೆ ಸರ್ಕಾರಕ್ಕೆ ಉದ್ಧವ್ ಠಾಕ್ರೆ ಬಣದಿಂದ ಹೊಸ ಸವಾಲು

ಬಿಜೆಪಿಯೊಂದಿಗೆ ಕೈಜೋಡಿಸಿದ್ದ ಶಿವಸೇನೆ ಬಂಡಾಯ ಬಣದ ನೂತನ ಸರ್ಕಾರ ರಚನೆಗೆ ಮುಂದಾಗಿತ್ತು. ಅದರಂತೆ ಏಕನಾಥ್ ಶಿಂಧೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಮತ್ತು ದೇವೇಂದ್ರ ಫಡ್ನವಿಸ್ ಅವರ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

Maharashtra Politics: ಸಿಎಂ ಏಕನಾಥ್ ಶಿಂಧೆ ಸರ್ಕಾರಕ್ಕೆ ಉದ್ಧವ್ ಠಾಕ್ರೆ ಬಣದಿಂದ ಹೊಸ ಸವಾಲು
ಉದ್ಧವ್ ಠಾಕ್ರೆImage Credit source: NDTV
TV9 Web
| Edited By: |

Updated on:Jul 08, 2022 | 12:21 PM

Share

ಮುಂಬೈ: ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ (Maharashtra CM Eknath Shinde) ಮತ್ತು ಉಪಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ (Devendra Fadnavis) ಪ್ರಮಾಣವಚನ ಸ್ವೀಕಾರ ಮಾಡಿದ್ದರೂ ಅಲ್ಲಿನ ರಾಜಕೀಯ ಬಿಕ್ಕಟ್ಟು ಇನ್ನೂ ಬಗೆಹರಿದಿಲ್ಲ. ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಏಕನಾಥ್ ಶಿಂಧೆ ಅವರನ್ನು ಆಹ್ವಾನಿಸುವ ರಾಜ್ಯಪಾಲ ಭಗತ್ ಸಿಂಗ್ ನಿರ್ಧಾರದ ವಿರುದ್ಧ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣ ಸುಪ್ರೀಂ ಕೋರ್ಟ್‌ಗೆ (Supreme Court) ಮೊರೆ ಹೋಗಿದೆ. ಏಕನಾಥ್ ಶಿಂಧೆ ಅವರನ್ನು ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಮತ್ತು ಸ್ಪೀಕರ್ ಆಯ್ಕೆಗೆ ಆಹ್ವಾನಿಸುವ ಮಹಾರಾಷ್ಟ್ರ ರಾಜ್ಯಪಾಲರ ನಿರ್ಧಾರವನ್ನು ಪ್ರಶ್ನಿಸಿ ಉದ್ಧವ್ ಠಾಕ್ರೆ ನೇತೃತ್ವದ ಬಣದ ಅರ್ಜಿಯನ್ನು ಜುಲೈ 11ರಂದು ಸುಪ್ರೀಂ ಕೋರ್ಟ್ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ.

ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಏಕನಾಥ್ ಶಿಂಧೆ ವಿಶ್ವಾಸಮತ ಯಾಚನೆಯಲ್ಲಿ ಬಹುಮತ ಸಾಬೀತುಪಡಿಸಿ ಅಧಿಕಾರದದಲ್ಲಿ ಮುಂದುವರೆದಿದ್ದರು. ಆದರೆ, ಅನರ್ಹತೆ ಪ್ರಕ್ರಿಯೆ ಬಾಕಿಯಿರುವ 16 ಬಂಡಾಯ ಶಾಸಕರು ವಿಧಾನಸಭೆ ಕಲಾಪದಲ್ಲಿ ಭಾಗವಹಿಸಲು ಸಾಧ್ಯವಿಲ್ಲ ಎಂದು ಉದ್ಧವ್ ಠಾಕ್ರೆ ಶಿಬಿರ ವಾದಿಸಿತ್ತು.

ಇದನ್ನೂ ಓದಿ: Eknath Shinde: ಪ್ರಜ್ಞೆ ತಪ್ಪಿದ ಮಹಿಳಾ ಕಾನ್​ಸ್ಟೆಬಲ್​ಗೆ ಸಹಾಯ ಮಾಡಿದ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ; ವಿಡಿಯೋ ವೈರಲ್

ಇದನ್ನೂ ಓದಿ
Image
Kerala Rain: ಕೇರಳದಲ್ಲಿ ಐದು ದಿನ ಭಾರೀ ಮಳೆ: ಮುಖ್ಯಮಂತ್ರಿ ಕಚೇರಿಯಿಂದ ಸಿದ್ಧತೆಗೆ ಸೂಚನೆ
Image
Gold Price Today: ಇಂದು ಮತ್ತೆ ಚಿನ್ನದ ಬೆಲೆ 820 ರೂ. ಕುಸಿತ; ಬೆಳ್ಳಿ ದರ ಕೊಂಚ ಏರಿಕೆ
Image
ಒಂದೇ ಕುಟುಂಬದ 9 ಜನರ ಶವ ಪತ್ತೆ ಪ್ರಕರಣ: ಮೂಢನಂಬಿಕೆಗೆ ಮಾರುಹೋಗಿ ಕೊಲೆಯಾದ ಕುಟುಂಬಸ್ಥರು
Image
ಮುಂಬೈಯಲ್ಲಿ 2,500 ಕೆಜಿಗಿಂತಲೂ ಹೆಚ್ಚು ಬೀಫ್ ವಶಕ್ಕೆ, 10 ಮಂದಿ ಬಂಧನ

ಜೂನ್ 30ರಂದು ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ ಬಳಿಕ ಗೋವಾದಲ್ಲಿ ಬಿಡಾರ ಹೂಡಿದ್ದ ಬಂಡಾಯ ಶಾಸಕರು ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದರು. ಬಿಜೆಪಿಯೊಂದಿಗೆ ಕೈಜೋಡಿಸಿದ್ದ ಶಿವಸೇನೆ ಬಂಡಾಯ ಬಣದ ನೂತನ ಸರ್ಕಾರ ರಚನೆಗೆ ಮುಂದಾಗಿತ್ತು. ಅದರಂತೆ ಏಕನಾಥ್ ಶಿಂಧೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಮತ್ತು ದೇವೇಂದ್ರ ಫಡ್ನವಿಸ್ ಅವರ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಇದನ್ನೂ ಓದಿ: Eknath Shinde: ಮರ್ಸಿಡಿಸ್ ಬೆಂಜ್ ಕಾರನ್ನು ಆಟೋರಿಕ್ಷಾ ಹಿಂದಿಕ್ಕಿದೆ; ಉದ್ಧವ್ ಠಾಕ್ರೆಗೆ ಏಕನಾಥ್ ಶಿಂಧೆ ತಿರುಗೇಟು

ಅದಾದ ನಾಲ್ಕು ದಿನಗಳ ನಂತರ ಏಕನಾಥ್ ಶಿಂಧೆ ಅವರ ಪಾಳಯ ಮಹಾರಾಷ್ಟ್ರದ 288 ಸದಸ್ಯರ ಅಸೆಂಬ್ಲಿಯಲ್ಲಿ 164 ಮತಗಳನ್ನು ಪಡೆದಿದ್ದರು. ಸರಳ ಬಹುಮತಕ್ಕೆ 144ಕ್ಕಿಂತ ಹೆಚ್ಚು ಶಾಸಕರ ಬೆಂಬಲ ಬೇಕಾಗಿತ್ತು. ಆದರೆ, ಏಕನಾಥ್ ಶಿಂಧೆ ಅವರಿಗೆ 164 ಶಾಸಕರು ಬೆಂಬಲ ಘೋಷಿಸಿದ್ದರು. ಕೇವಲ 99 ಶಾಸಕರು ಮಾತ್ರ ಅದರ ವಿರುದ್ಧ ಮತ ಚಲಾಯಿಸಿದ್ದರು.

Published On - 9:13 am, Fri, 8 July 22

Follow Us
Web contact
Web contact

TV9 Kannada

Read More
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ