Congress Meeting: ಮಹಾರಾಷ್ಟ್ರದಲ್ಲಿ ಶಿವಸೇನೆ, ಎನ್​ಸಿಪಿ ಒಡೆದ ಬೆನ್ನಲ್ಲೇ ಶಾಸಕರನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಕಸರತ್ತು

ಮಹಾರಾಷ್ಟ್ರದಲ್ಲಿ ಶಿವಸೇನೆ(Shiv Sena) ಮತ್ತು ಎನ್‌ಸಿಪಿ(NCP)ಯಲ್ಲಿ ಭಿನ್ನಾಭಿಪ್ರಾಯ ಭುಗಿಲೆದ್ದಿದ್ದು, ಇದೀಗ ಕಾಂಗ್ರೆಸ್(Congress) ತನ್ನ ಶಾಸಕರನ್ನು ಉಳಿಸಿಕೊಳ್ಳುವ ಕಸರತ್ತಿನಲ್ಲಿ ನಿರತವಾಗಿದೆ.

Congress Meeting: ಮಹಾರಾಷ್ಟ್ರದಲ್ಲಿ ಶಿವಸೇನೆ, ಎನ್​ಸಿಪಿ ಒಡೆದ ಬೆನ್ನಲ್ಲೇ ಶಾಸಕರನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಕಸರತ್ತು
ಮಲ್ಲಿಕಾರ್ಜುನ ಖರ್ಗೆ-ರಾಹುಲ್ ಗಾಂಧಿImage Credit source: ABP Live
Follow us
|

Updated on: Jul 11, 2023 | 9:10 AM

ಮಹಾರಾಷ್ಟ್ರದಲ್ಲಿ ಶಿವಸೇನೆ(Shiv Sena) ಮತ್ತು ಎನ್‌ಸಿಪಿ(NCP)ಯಲ್ಲಿ ಭಿನ್ನಾಭಿಪ್ರಾಯ ಭುಗಿಲೆದ್ದಿದ್ದು, ಇದೀಗ ಕಾಂಗ್ರೆಸ್(Congress) ತನ್ನ ಶಾಸಕರನ್ನು ಉಳಿಸಿಕೊಳ್ಳುವ ಕಸರತ್ತಿನಲ್ಲಿ ನಿರತವಾಗಿದೆ. ಕಾಂಗ್ರೆಸ್ ಶಾಸಕರ ಮೇಲೆ ಇರುವ ಅಪಾಯವನ್ನು ಮನಗಂಡ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಯಲ್ಲಿ ಮಹಾರಾಷ್ಟ್ರದ ಪ್ರಮುಖ ನಾಯಕರ ಸಭೆ ಕರೆದಿದ್ದಾರೆ. ಇದರಲ್ಲಿ ರಾಜ್ಯದ ಬದಲಿಗೆ ರಾಜಕೀಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕಾರ್ಯತಂತ್ರ ರೂಪಿಸಲಾಗುವುದು. ಈ ಸಭೆಯಲ್ಲಿ ಮಹಾರಾಷ್ಟ್ರದಲ್ಲಿ ನಡೆಯಲಿರುವ ಬಿಎಂಸಿ ಚುನಾವಣೆ ಹಾಗೂ ಲೋಕಸಭೆ ಚುನಾವಣೆ ಬಗ್ಗೆಯೂ ಚರ್ಚೆ ನಡೆಯಲಿದೆ. ಸಭೆಯಲ್ಲಿ ರಾಹುಲ್ ಗಾಂಧಿ ಕೂಡ ಭಾಗಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.

ಮೊದಲು ಶಿವಸೇನೆ ನಂತರ ಎನ್‌ಸಿಪಿಯಲ್ಲಿ ಒಡಕು ಮೂಡಿತ್ತು, ಇದೀಗ ಕಾಂಗ್ರೆಸ್‌ನಲ್ಲೂ ಬಂಡಾಯದ ಗುಸುಗುಸು ಶುರುವಾಗಿದೆ. ಕಾಂಗ್ರೆಸ್ ಶಾಸಕರು ತಮ್ಮ ಸಂಪರ್ಕದಲ್ಲಿದ್ದಾರೆ ಎಂದು ಹಲವು ಬಿಜೆಪಿ ನಾಯಕರು ಹೇಳಿಕೊಂಡಿದ್ದಾರೆ.

ಮತ್ತಷ್ಟು ಓದಿ: ನಾನು ದಣಿದಿಲ್ಲ, ನಿವೃತ್ತಿಯೂ ಆಗಿಲ್ಲ: ಅಜಿತ್ ಪವಾರ್ ಟೀಕೆಗೆ ಖಡಕ್ ಪ್ರತಿಕ್ರಿಯೆ ನೀಡಿದ ಶರದ್ ಪವಾರ್

ಏತನ್ಮಧ್ಯೆ, ದೆಹಲಿಯಲ್ಲಿ ದೊಡ್ಡ ಮಂಥನ ನಡೆಯಲಿದೆ. ಶಿವಸೇನೆ ಮತ್ತು ಎನ್‌ಸಿಪಿಯ ಬಹುತೇಕ ಶಾಸಕರ ಬದಲಾವಣೆಯಿಂದಾಗಿ ಎರಡೂ ಪಕ್ಷಗಳು ಎರಡು ಇಬ್ಭಾಗವಾಗಿವೆ. ಹೀಗಾಗಿ ತಮ್ಮ ಶಾಸಕರನ್ನು ಉಳಿಸಿಕೊಳ್ಳಲು ಉನ್ನತ ನಾಯಕರು ದೆಹಲಿಯಲ್ಲಿ ಸಭೆ ಕರೆದಿದ್ದಾರೆ.

ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ನಡೆಯಲಿರುವ ಸಭೆಯಲ್ಲಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಈ ಕಾಂಗ್ರೆಸ್ ನಾಯಕರು ಭಾಗಿಯಾಗಲಿದ್ದಾರೆ .

ಅವರಲ್ಲದೆ, ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿ ಎಚ್‌ಕೆ ಪಾಟೀಲ್, ಸಹ ಉಸ್ತುವಾರಿ ಆಶಿಶ್ ದುವಾ, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ, ಮಾಜಿ ಮುಖ್ಯಮಂತ್ರಿಗಳಾದ ಅಶೋಕ್ ಚವ್ಹಾಣ್, ಪೃಥ್ವಿರಾಜ್ ಚವಾಣ್, ಸುಶೀಲ್ ಕುಮಾರ್ ಶಿಂಧೆ, ಬಾಳಾಸಾಹೇಬ್ ಥೋರಟ್, ನಸೀಮ್ ಖಾನ್ ಮುಂತಾದ ನಾಯಕರು ಭಾಗವಹಿಸಲಿದ್ದಾರೆ.

44 ಶಾಸಕರನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಈಗ ಅತಿದೊಡ್ಡ ವಿರೋಧ ಪಕ್ಷವಾಗಿದೆ. ಹಲವು ಶಾಸಕರು ಎನ್​ಡಿಎ ಸೇರಲು ಬಯಸುತ್ತಿದ್ದಾರೆ ಎನ್ನುವ ವಿಚಾರ ಹರಿದಾಡುತ್ತಿದ್ದು ಒಂದೊಮ್ಮೆ ಆ ರೀತಿಯಾಗಿದ್ದೇ ಆದಲ್ಲಿ ವಿಧಾನಸಭೆ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ದೊಡ್ಡ ಹೊಡೆತ ಬೀಳಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ