AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra Politics: ಪಕ್ಷದೊಳಗಿನ ಬಿಕ್ಕಟ್ಟಿನಿಂದ ಹಲವು ಶಿವಸೇನೆ ನಾಯಕರನ್ನು ವಜಾಗೊಳಿಸಿದ ಉದ್ಧವ್ ಠಾಕ್ರೆ

ಉದ್ಧವ್ ಠಾಕ್ರೆ ಅವರ ಸರ್ಕಾರವನ್ನು ಉರುಳಿಸಿದ ನಂತರ ಸಿಎಂ ಪಟ್ಟಕ್ಕೇರಿದ ಏಕನಾಥ್ ಶಿಂಧೆ ಈ ಸಮಯವನ್ನು ಸರಿಯಾಗಿ ಬಳಸಿಕೊಂಡಿದ್ದು, ಉದ್ಧವ್ ಠಾಕ್ರೆ ವಜಾಗೊಳಿಸಿದ ಶಿವಸೇನೆ ನಾಯಕರನ್ನು ತನ್ನತ್ತ ಸೆಳೆದುಕೊಂಡಿದ್ದಾರೆ.

Maharashtra Politics: ಪಕ್ಷದೊಳಗಿನ ಬಿಕ್ಕಟ್ಟಿನಿಂದ ಹಲವು ಶಿವಸೇನೆ ನಾಯಕರನ್ನು ವಜಾಗೊಳಿಸಿದ ಉದ್ಧವ್ ಠಾಕ್ರೆ
ಉದ್ಧವ್ ಠಾಕ್ರೆImage Credit source: India Today
TV9 Web
| Updated By: Digi Tech Desk|

Updated on:Jul 19, 2022 | 9:55 AM

Share

ಮುಂಬೈ: ಮಹಾರಾಷ್ಟ್ರ ರಾಜಕೀಯ (Maharashtra Politics) ಕಳೆದ ಒಂದು ತಿಂಗಳಿನಿಂದ ಬಹಳ ಕುತೂಹಲ ಮೂಡಿಸಿದೆ. ಉದ್ಧವ್ ಠಾಕ್ರೆ ಅವರ ಸರ್ಕಾರ ಪತನವಾಗಿ, ಏಕನಾಥ್ ಶಿಂಧೆ (Eknath Shinde) ಸರ್ಕಾರ ರಚನೆಯಾದ ನಂತರವೂ ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟು ಇನ್ನೂ ಬಗೆಹರಿದಿಲ್ಲ. ಈ ನಡುವೆ ಶಿವಸೇನೆಯಲ್ಲಿ ಭಿನ್ನಮತ ಭುಗಿಲೆದ್ದಿದ್ದು, ಶಿವಸೇನೆಯ ಉದ್ಧವ್ ಠಾಕ್ರೆ (Uddhav Thackeray) ತಮ್ಮ ತಂದೆ ರಚಿಸಿದ ಶಿವಸೇನೆ ಪಕ್ಷದ ನಿಯಂತ್ರಣಕ್ಕಾಗಿ ಏಕನಾಥ್ ಶಿಂಧೆ ವಿರುದ್ಧ ಹೋರಾಡುತ್ತಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಶಿವಸೇನೆಯ ಹಲವಾರು ಪ್ರಮುಖ ನಾಯಕರನ್ನು ಉದ್ಧವ್ ಠಾಕ್ರೆ ವಜಾಗೊಳಿಸಿದ್ದಾರೆ.

ಉದ್ಧವ್ ಠಾಕ್ರೆ ಅವರ ಸರ್ಕಾರವನ್ನು ಉರುಳಿಸಿದ ನಂತರ ಸಿಎಂ ಪಟ್ಟಕ್ಕೇರಿದ ಏಕನಾಥ್ ಶಿಂಧೆ ಈ ಸಮಯವನ್ನು ಸರಿಯಾಗಿ ಬಳಸಿಕೊಂಡಿದ್ದು, ಉದ್ಧವ್ ಠಾಕ್ರೆ ವಜಾಗೊಳಿಸಿದ ಶಿವಸೇನೆ ನಾಯಕರನ್ನು ತನ್ನತ್ತ ಸೆಳೆದುಕೊಂಡಿದ್ದಾರೆ. ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ಬಣ ತಮ್ಮದೇ ನಿಜವಾದ ಶಿವಸೇನೆ ಪಕ್ಷ ಎಂದು ಹೇಳಿಕೊಂಡರೆ, ಉದ್ಧವ್ ಠಾಕ್ರೆ ನೇತೃತ್ವದ ಬಣ ಶಿಂಧೆ ನೇತೃತ್ವದ ಬಂಡಾಯ ಶಾಸಕರ ಬಣ ಶಿವಸೇನೆಯಿಂದ ವಿಭಜನೆಯಾಗಿರುವ ಬಣ ಎಂದು ಹೇಳಿಕೊಳ್ಳುತ್ತಿದೆ.

ಮಹಾರಾಷ್ಟ್ರದ ಶಿವಸೇನೆ ಶಾಸಕರ ಅನರ್ಹತೆ ಮತ್ತು ಪಕ್ಷದೊಳಗಿನ ವಿಪ್ ಮತ್ತು ನೇಮಕಾತಿಗಳ ಕಾನೂನುಬದ್ಧತೆಗೆ ಸಂಬಂಧಿಸಿದಂತೆ ಎರಡೂ ಕಡೆಯ ಅರ್ಜಿಗಳ ಗುಂಪನ್ನು ಬುಧವಾರ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ. ವಿಚಾರಣೆಗೆ ಮುನ್ನವೇ ಶಿವಸೇನೆ ಬಣಗಳ ನಡುವಿನ ಜಟಾಪಟಿ ತೀವ್ರಗೊಂಡಿದ್ದರಿಂದ ಉದ್ಧವ್ ಠಾಕ್ರೆ ಬಣವು ಮಾಜಿ ಸಚಿವ ವಿಜಯ್ ಶಿವತಾರೆ, ಹಿಂಗೋಲಿ ಜಿಲ್ಲಾಧ್ಯಕ್ಷ ಸ್ಥಾನದಿಂದ ಶಾಸಕ ಸಂತೋಷ್ ಬಂಗಾರ್, ಥಾಣೆಯ ಜಿಲ್ಲಾ ಪ್ರಮುಖ್ (ಜಿಲ್ಲಾ ಮುಖ್ಯಸ್ಥ) ಸ್ಥಾನದಿಂದ ನರೇಶ್ ಮ್ಹಾಸ್ಕೆ ಅವರನ್ನು ವಜಾಗೊಳಿಸಿದೆ.

ಇದನ್ನೂ ಓದಿ: Maharashtra Political Analysis: ಶಿವಸೇನೆ ಪಕ್ಷದ ಇಬ್ಭಾಗ ಖಚಿತ; ಏಕನಾಥ್ ಶಿಂಧೆ ಬಣದ ಜೊತೆ ಸರ್ಕಾರ ರಚನೆಗೆ ಬಿಜೆಪಿ ಕಾತರ

ಉದ್ಧವ್ ಠಾಕ್ರೆ ಅವರು ಥಾಣೆ, ಪಾಲ್ಘರ್, ಅಮರಾವತಿ ಮತ್ತು ಯವತ್ಮಾಲ್ ಜಿಲ್ಲೆಗಳಲ್ಲಿ 100ಕ್ಕೂ ಹೆಚ್ಚು ಹೊಸ ಪದಾಧಿಕಾರಿಗಳನ್ನು ನೇಮಿಸಿದ್ದಾರೆ. ಹೊಸ ಪದಾಧಿಕಾರಿಗಳು ಬಂಡಾಯ ಶಾಸಕರು ಬಿಟ್ಟುಹೋದ ಖಾಲಿ ಹುದ್ದೆಗಳಿಗೆ ಎರಡನೇ ಹಂತದ ನಾಯಕರಾಗಿದ್ದಾರೆ. ಶಿವಸೇನೆ ಪಕ್ಷಕ್ಕೆ ಸೇರಿದ 55 ಶಾಸಕರ ಪೈಕಿ 53 ಮಂದಿ ಒಂದಲ್ಲ ಒಂದು ಕಡೆ ಅನರ್ಹತೆ ಪಟ್ಟಿಯಲ್ಲಿದ್ದಾರೆ. ಏಕನಾಥ್ ಶಿಂಧೆ ಸೇರಿದಂತೆ ಶಿಂಧೆ ಬಣದ 16 ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಉದ್ಧವ್ ಠಾಕ್ರೆ ಪ್ರತಿಪಾದಿಸಿದ್ದಾರೆ.

ಜೂನ್ 25ರಂದು ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಉದ್ಧವ್ ಠಾಕ್ರೆ ತಂಡ 6 ಪ್ರಮುಖ ನಿರ್ಣಯಗಳನ್ನು ಅಂಗೀಕರಿಸಿದ್ದಾರೆ. ಈ ವೇಳೆ ಉದ್ಧವ್ ಠಾಕ್ರೆ ಅವರನ್ನು ಸೇನಾ ಮುಖ್ಯಸ್ಥ ಎಂದು ಶಾಸಕರು ಪುನರುಚ್ಚರಿಸಿದ್ದಾರೆ. ಅಲ್ಲದೆ, ಶಿವಸೇನೆ ಪಕ್ಷದ ಎಲ್ಲಾ ನಿರ್ಧಾರಗಳನ್ನು ತೆಗೆದುಕೊಳ್ಳಲು ಅವರಿಗೆ ಅಧಿಕಾರ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ಸಚಿವ ಸಂಪುಟ ರಚನೆ ಕುರಿತು ಎರಡನೇ ಸುತ್ತಿನ ಮಾತುಕತೆಗಾಗಿ ಏಕನಾಥ್ ಶಿಂಧೆ ದೆಹಲಿಗೆ ಭೇಟಿ ನೀಡಲಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ಹುದ್ದೆಗೆ ಶಿವಸೇನೆಯ ರಾಜನ್ ಸಾಲ್ವಿ ನಾಮಪತ್ರ ಸಲ್ಲಿಕೆ

ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿ ಬಿಜೆಪಿಯ ದೇವೇಂದ್ರ ಫಡ್ನವಿಸ್ ಜೂನ್ 30ರಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆದರೆ, ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿರುವ ಪ್ರಕರಣಗಳನ್ನು ನೀಡಿದ ಬಂಡಾಯ ಶಾಸಕರ ಭವಿಷ್ಯದ ಬಗ್ಗೆ ಕಳವಳದ ನಡುವೆ ಸಚಿವ ಸಂಪುಟವನ್ನು ಇನ್ನೂ ರಚಿಸಲಾಗಿಲ್ಲ.

Published On - 8:24 am, Tue, 19 July 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್