ತನ್ನ ಗುರುತು ಮರೆಮಾಚಿ ಭಾರತದಲ್ಲಿ ವಾಸಿಸುತ್ತಿದ್ದ ಬಾಂಗ್ಲಾದ ನೀಲಿಚಿತ್ರ ತಾರೆ ರಿಯಾ ಬಂಧನ

ಬಾಂಗ್ಲಾದ ನೀಲಿಚಿತ್ರ ತಾರೆಯನ್ನು ಪೊಲೀಸರು ಬಂಧಿಸಿದ್ದಾರೆ, ತನ್ನ ಗುರುತು ಮರೆಮಾಚಿ ಆಕೆ ಭಾರತದಲ್ಲಿ ನೆಲೆಸಿದ್ದಳು. ಆಕೆ ಬಾಂಗ್ಲಾದೇಶದ ಪ್ರಜೆಯಾಗಿದ್ದು, ನಕಲಿ ದಾಖಲೆಗಳ ಆಧಾರದ ಮೇಲೆ ತನ್ನ ಕುಟುಂಬದೊಂದಿಗೆ ಭಾರತದಲ್ಲಿ ನೆಲೆಸಿದ್ದಳು, ಈ ಪ್ರಕರಣದಲ್ಲಿ ಆಕೆಯ ತಾಯಿ, ಸಹೋದರಿ ಮತ್ತು ತಂದೆಯ ಮೇಲೆ ಪೊಲೀಸರು ನಿಗಾ ಇರಿಸಿದ್ದರು.

ತನ್ನ ಗುರುತು ಮರೆಮಾಚಿ ಭಾರತದಲ್ಲಿ ವಾಸಿಸುತ್ತಿದ್ದ ಬಾಂಗ್ಲಾದ ನೀಲಿಚಿತ್ರ ತಾರೆ ರಿಯಾ ಬಂಧನ
ರಿಯಾImage Credit source: News 9
Follow us
|

Updated on: Sep 27, 2024 | 12:02 PM

ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ಆರೋಪದ ಮೇಲೆ ಬಾಂಗ್ಲಾದೇಶದ ನೀಲಿ ಚಿತ್ರತಾರೆ ರಿಯಾ ಬಾರ್ಡೆಯನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ. ಆಕೆ ಬಾಂಗ್ಲಾದೇಶದ ಪ್ರಜೆಯಾಗಿದ್ದು, ನಕಲಿ ದಾಖಲೆಗಳ ಆಧಾರದ ಮೇಲೆ ತನ್ನ ಕುಟುಂಬದೊಂದಿಗೆ ಭಾರತದಲ್ಲಿ ನೆಲೆಸಿದ್ದಳು, ಈ ಪ್ರಕರಣದಲ್ಲಿ ಆಕೆಯ ತಾಯಿ, ಸಹೋದರಿ ಮತ್ತು ತಂದೆಯ ಮೇಲೆ ಪೊಲೀಸರು ನಿಗಾ ಇರಿಸಿದ್ದರು.

ಆಕೆಯ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 420, 465, 468, 479, 34, ಮತ್ತು 14A ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಶಾಂತ್ ಮಿಶ್ರಾ ಎಂದು ಗುರುತಿಸಲಾದ ರಿಯಾ ಅವರ ಸ್ನೇಹಿತರೊಬ್ಬರು ಈ ವಿಷಯ ತಿಳಿಸಿದ್ದಾರೆ, ಅವರು ರಿಯಾ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದಾರೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಅವರ ದೂರಿನ ಮೇರೆಗೆ ಪೊಲೀಸರು ಪ್ರಕರಣದ ತನಿಖೆ ನಡೆಸಿ ಆಕೆಯ ದಾಖಲೆಗಳನ್ನು ಪರಿಶೀಲಿಸಿದ್ದಾರೆ.

ರಿಯಾ ಬರ್ಡೆ ಅವರ ತಾಯಿ ಮೂಲತಃ ಬಾಂಗ್ಲಾದೇಶದವರು ಆದರೆ ಮಹಾರಾಷ್ಟ್ರದ ಅಮರಾವತಿಗೆ ಸೇರಿದ ಅರವಿಂದ ಬಾರ್ಡೆ (ರಿಯಾಳ ತಂದೆ) ಅವರನ್ನು ವಿವಾಹವಾಗಿದ್ದರು. ಇದಾದ ನಂತರ ಆಕೆ ತನ್ನ ರಾಷ್ಟ್ರೀಯತೆಯನ್ನು ಭಾರತೀಯ ಎಂದು ಸಾಬೀತುಪಡಿಸಲು ನಕಲಿ ದಾಖಲೆಗಳನ್ನು ನೀಡಿದ್ದಳು.

ಮತ್ತಷ್ಟು ಓದಿ: ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದು ವಂಚನೆ: ನಟಿ ಉಷಾ ಬಂಧನ

ಆಕೆಯ ಕುಟುಂಬದ ಸದಸ್ಯರನ್ನು ಅಂಜಲಿ ಬರ್ಡೆ ಅಲಿಯಾಸ್ ರೂಬಿ ಶೇಖ್ (ತಾಯಿ), ಅರವಿಂದ್ ಬಾರ್ಡೆ (ತಂದೆ), ರವೀಂದ್ರ ಅಲಿಯಾಸ್ ರಿಯಾಜ್ ಶೇಖ್ (ಸಹೋದರ), ಮತ್ತು ರಿತು ಅಲಿಯಾಸ್ ಮೋನಿ ಶೇಖ್ (ಸಹೋದರಿ) ಎಂದು ಗುರುತಿಸಲಾಗಿದೆ. ಆಕೆಯ ಪೋಷಕರು ಪ್ರಸ್ತುತ ಕತಾರ್‌ನಲ್ಲಿದ್ದಾರೆ ಎಂದು ವರದಿಯಾಗಿದೆ.

ವೇಶ್ಯಾವಾಟಿಕೆಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಯಾ ಬರ್ಡೆ ಅವರನ್ನು ಈ ಹಿಂದೆಯೂ ಬಂಧಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು
ಕ್ಲಾಸ್​ರೂಂನಲ್ಲೇ ಶಿಕ್ಷಕಿಗೆ ಬೆದರಿಕೆ ಹಾಕಿ, ಉಗುಳಿದ ಎಂಬಿಎ ವಿದ್ಯಾರ್ಥಿ
ಕ್ಲಾಸ್​ರೂಂನಲ್ಲೇ ಶಿಕ್ಷಕಿಗೆ ಬೆದರಿಕೆ ಹಾಕಿ, ಉಗುಳಿದ ಎಂಬಿಎ ವಿದ್ಯಾರ್ಥಿ
ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜ
ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜ
ಕಂಠಪೂರ್ತಿ ಕುಡಿದು ಅಪ್ಪನ ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಂದ ಮಗ
ಕಂಠಪೂರ್ತಿ ಕುಡಿದು ಅಪ್ಪನ ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಂದ ಮಗ
ಬೆಂಗಳೂರಿನ ‘ಏರಿಯಾನ್ ಟೆಕ್ನಾಲಜಿ ಕಂಪನಿ’ಯಲ್ಲಿ ಅಗ್ನಿ ಅವಘಡ;ತಪ್ಪಿದ ಅನಾಹುತ
ಬೆಂಗಳೂರಿನ ‘ಏರಿಯಾನ್ ಟೆಕ್ನಾಲಜಿ ಕಂಪನಿ’ಯಲ್ಲಿ ಅಗ್ನಿ ಅವಘಡ;ತಪ್ಪಿದ ಅನಾಹುತ
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್