AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಗನಾ ರನೌತ್ ವಿರುದ್ಧ ಹಕ್ಕುಚ್ಯುತಿ ಮಂಡಿಸಿದ ಶಾಸಕ ಪ್ರತಾಪ್ ಸರ್​ನಾಯಕ್

ಪ್ರಕರಣಕ್ಕೆ ಸಂಬಂಧಿಸಿದ ಮಹಾರಾಷ್ಟ್ರ ವಿಧಾನಸಭೆಯ ಪ್ರಧಾನ ಕಾರ್ಯದರ್ಶಿ ಅನಂತ್​ ಕಲ್ಸೆಗೆ ದೂರು ನೀಡಿದ್ದಾರೆ.

ಕಂಗನಾ ರನೌತ್ ವಿರುದ್ಧ ಹಕ್ಕುಚ್ಯುತಿ ಮಂಡಿಸಿದ ಶಾಸಕ ಪ್ರತಾಪ್ ಸರ್​ನಾಯಕ್
ಸಾಂದರ್ಭಿಕ ಚಿತ್ರ
shruti hegde
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Dec 14, 2020 | 8:18 PM

Share

ಮುಂಬೈ: ನಟಿ ಕಂಗನಾ ರನೌತ್ ಅವರಿಂದ ಹಕ್ಕುಚ್ಯುತಿ ಉಂಟಾಗಿದೆ ಎಂದು ಶಿವಸೇನಾ ಶಾಸಕ ಪ್ರತಾಪ್ ಸರ್​ನಾಯಕ್ ಆರೋಪಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದ ಮಹಾರಾಷ್ಟ್ರ ವಿಧಾನಸಭೆಯ ಪ್ರಧಾನ ಕಾರ್ಯದರ್ಶಿ ಅನಂತ್​ ಕಲ್ಸೆಗೆ ದೂರು ನೀಡಿದ್ದಾರೆ.

ಇತ್ತೀಚೆಗೆ ಪ್ರತಾಪ್ ಸರ್​ನಾಯಕ್ ಅವರ ಮನೆಯ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಎರಡು ಬಾರಿ ದಾಳಿ ನಡೆಸಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಟ್ವೀಟ್​ ಮಾಡಿದ್ದ ಕಂಗನಾ ರನೌತ್​, ನನಗೆ ಥಳಿಸುವ ಬೆದರಿಕೆ ಹಾಕಿದ್ದವರ ಮನೆಯಲ್ಲಿ ಪಾಕಿಸ್ತಾನದ ಕ್ರೆಡಿಟ್​ ಕಾರ್ಡ್​ ಸಿಕ್ಕಿತ್ತು ಎಂದು ಬರೆದುಕೊಂಡಿದ್ದರು. ಈ ಆರೋಪ ಸಂಪೂರ್ಣವಾಗಿ ಸುಳ್ಳು ಎಂದು ಪ್ರತಾಪ್ ಸರ್​ನಾಯಕ್ ಹೇಳಿದ್ದಾರೆ.

ನನ್ನ ಹಾಗೂ ನನ್ನ ಮಗನನ್ನು ಇಡಿ ವಿಚಾರಣೆ ಮಾಡಿತ್ತು. ನಾವು ಅದಕ್ಕೆ ಸಹಕಾರ ಕೂಡ ನೀಡಿದ್ದೆವು. ಈ ಬಗ್ಗೆ ಸಮಸ್ಯೆ ಇಲ್ಲ. ಆದರೆ, ಕಂಗನಾ ಟ್ವೀಟ್​ ನಂತರದಲ್ಲಿ ಮಾಧ್ಯಮದವರು ನನ್ನ ಬಗ್ಗೆ ಸಾಕಷ್ಟು ಸುದ್ದಿಗಳನ್ನು ಪ್ರಕಟ ಮಾಡಿದ್ದರು. ಇದರಿಂದ ನನಗೆ ಮಾನಹಾನಿ ಆಗಿದೆ. ನನ್ನ ಮನೆಯಲ್ಲಿ ಏನೂ ಸಿಕ್ಕಿಲ್ಲ ಎಂದು ಖುದ್ದು ಜಾರಿ ನಿರ್ದೇಶನಾಲಯದ ಅಧಿಕಾರಿಗಳೇ ಘೋಷಣೆ ಮಾಡಿದ್ದರು ಎಂದು ಸರ್​ನಾಯಕ್​ ದೂರಿ​ನಲ್ಲಿ ತಿಳಿಸಿದ್ದಾರೆ.

ಈ ದೂರನ್ನು ಸ್ವೀಕರಿಸಿ ಕಂಗನಾ ರನೌತ್​ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಒಂದೊಮ್ಮೆ ಮಹಾರಾಷ್ಟ್ರ ವಿಧಾನ ಸಭೆಯ ಪ್ರಧಾನ ಕಾರ್ಯದರ್ಶಿ ಈ ದೂರನ್ನು ಸ್ವೀಕರಿಸಿದರೆ, ಕಂಗನಾ ವಿರುದ್ಧ ತನಿಖೆಗೆ ಆಗ್ರಹಿಸುವ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ.

ಅಕ್ರಮ ಹಣ ವರ್ಗಾವಣೆ: ಶಿವಸೇನೆ ಶಾಸಕ ಪ್ರತಾಪ್ ಸರ್​ನಾಯಕ್ ಅರ್ಜಿಗೆ ಸುಪ್ರೀಂಕೋರ್ಟ್ ಮನ್ನಣೆ

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?