AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಗನಾ ರನೌತ್ ವಿರುದ್ಧ ಹಕ್ಕುಚ್ಯುತಿ ಮಂಡಿಸಿದ ಶಾಸಕ ಪ್ರತಾಪ್ ಸರ್​ನಾಯಕ್

ಪ್ರಕರಣಕ್ಕೆ ಸಂಬಂಧಿಸಿದ ಮಹಾರಾಷ್ಟ್ರ ವಿಧಾನಸಭೆಯ ಪ್ರಧಾನ ಕಾರ್ಯದರ್ಶಿ ಅನಂತ್​ ಕಲ್ಸೆಗೆ ದೂರು ನೀಡಿದ್ದಾರೆ.

ಕಂಗನಾ ರನೌತ್ ವಿರುದ್ಧ ಹಕ್ಕುಚ್ಯುತಿ ಮಂಡಿಸಿದ ಶಾಸಕ ಪ್ರತಾಪ್ ಸರ್​ನಾಯಕ್
ಸಾಂದರ್ಭಿಕ ಚಿತ್ರ
shruti hegde
| Edited By: |

Updated on: Dec 14, 2020 | 8:18 PM

Share

ಮುಂಬೈ: ನಟಿ ಕಂಗನಾ ರನೌತ್ ಅವರಿಂದ ಹಕ್ಕುಚ್ಯುತಿ ಉಂಟಾಗಿದೆ ಎಂದು ಶಿವಸೇನಾ ಶಾಸಕ ಪ್ರತಾಪ್ ಸರ್​ನಾಯಕ್ ಆರೋಪಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದ ಮಹಾರಾಷ್ಟ್ರ ವಿಧಾನಸಭೆಯ ಪ್ರಧಾನ ಕಾರ್ಯದರ್ಶಿ ಅನಂತ್​ ಕಲ್ಸೆಗೆ ದೂರು ನೀಡಿದ್ದಾರೆ.

ಇತ್ತೀಚೆಗೆ ಪ್ರತಾಪ್ ಸರ್​ನಾಯಕ್ ಅವರ ಮನೆಯ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಎರಡು ಬಾರಿ ದಾಳಿ ನಡೆಸಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಟ್ವೀಟ್​ ಮಾಡಿದ್ದ ಕಂಗನಾ ರನೌತ್​, ನನಗೆ ಥಳಿಸುವ ಬೆದರಿಕೆ ಹಾಕಿದ್ದವರ ಮನೆಯಲ್ಲಿ ಪಾಕಿಸ್ತಾನದ ಕ್ರೆಡಿಟ್​ ಕಾರ್ಡ್​ ಸಿಕ್ಕಿತ್ತು ಎಂದು ಬರೆದುಕೊಂಡಿದ್ದರು. ಈ ಆರೋಪ ಸಂಪೂರ್ಣವಾಗಿ ಸುಳ್ಳು ಎಂದು ಪ್ರತಾಪ್ ಸರ್​ನಾಯಕ್ ಹೇಳಿದ್ದಾರೆ.

ನನ್ನ ಹಾಗೂ ನನ್ನ ಮಗನನ್ನು ಇಡಿ ವಿಚಾರಣೆ ಮಾಡಿತ್ತು. ನಾವು ಅದಕ್ಕೆ ಸಹಕಾರ ಕೂಡ ನೀಡಿದ್ದೆವು. ಈ ಬಗ್ಗೆ ಸಮಸ್ಯೆ ಇಲ್ಲ. ಆದರೆ, ಕಂಗನಾ ಟ್ವೀಟ್​ ನಂತರದಲ್ಲಿ ಮಾಧ್ಯಮದವರು ನನ್ನ ಬಗ್ಗೆ ಸಾಕಷ್ಟು ಸುದ್ದಿಗಳನ್ನು ಪ್ರಕಟ ಮಾಡಿದ್ದರು. ಇದರಿಂದ ನನಗೆ ಮಾನಹಾನಿ ಆಗಿದೆ. ನನ್ನ ಮನೆಯಲ್ಲಿ ಏನೂ ಸಿಕ್ಕಿಲ್ಲ ಎಂದು ಖುದ್ದು ಜಾರಿ ನಿರ್ದೇಶನಾಲಯದ ಅಧಿಕಾರಿಗಳೇ ಘೋಷಣೆ ಮಾಡಿದ್ದರು ಎಂದು ಸರ್​ನಾಯಕ್​ ದೂರಿ​ನಲ್ಲಿ ತಿಳಿಸಿದ್ದಾರೆ.

ಈ ದೂರನ್ನು ಸ್ವೀಕರಿಸಿ ಕಂಗನಾ ರನೌತ್​ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಒಂದೊಮ್ಮೆ ಮಹಾರಾಷ್ಟ್ರ ವಿಧಾನ ಸಭೆಯ ಪ್ರಧಾನ ಕಾರ್ಯದರ್ಶಿ ಈ ದೂರನ್ನು ಸ್ವೀಕರಿಸಿದರೆ, ಕಂಗನಾ ವಿರುದ್ಧ ತನಿಖೆಗೆ ಆಗ್ರಹಿಸುವ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ.

ಅಕ್ರಮ ಹಣ ವರ್ಗಾವಣೆ: ಶಿವಸೇನೆ ಶಾಸಕ ಪ್ರತಾಪ್ ಸರ್​ನಾಯಕ್ ಅರ್ಜಿಗೆ ಸುಪ್ರೀಂಕೋರ್ಟ್ ಮನ್ನಣೆ

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ