AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಗನಾ ರನೌತ್ ವಿರುದ್ಧ ಹಕ್ಕುಚ್ಯುತಿ ಮಂಡಿಸಿದ ಶಾಸಕ ಪ್ರತಾಪ್ ಸರ್​ನಾಯಕ್

ಪ್ರಕರಣಕ್ಕೆ ಸಂಬಂಧಿಸಿದ ಮಹಾರಾಷ್ಟ್ರ ವಿಧಾನಸಭೆಯ ಪ್ರಧಾನ ಕಾರ್ಯದರ್ಶಿ ಅನಂತ್​ ಕಲ್ಸೆಗೆ ದೂರು ನೀಡಿದ್ದಾರೆ.

ಕಂಗನಾ ರನೌತ್ ವಿರುದ್ಧ ಹಕ್ಕುಚ್ಯುತಿ ಮಂಡಿಸಿದ ಶಾಸಕ ಪ್ರತಾಪ್ ಸರ್​ನಾಯಕ್
ಸಾಂದರ್ಭಿಕ ಚಿತ್ರ
shruti hegde
| Edited By: |

Updated on: Dec 14, 2020 | 8:18 PM

Share

ಮುಂಬೈ: ನಟಿ ಕಂಗನಾ ರನೌತ್ ಅವರಿಂದ ಹಕ್ಕುಚ್ಯುತಿ ಉಂಟಾಗಿದೆ ಎಂದು ಶಿವಸೇನಾ ಶಾಸಕ ಪ್ರತಾಪ್ ಸರ್​ನಾಯಕ್ ಆರೋಪಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದ ಮಹಾರಾಷ್ಟ್ರ ವಿಧಾನಸಭೆಯ ಪ್ರಧಾನ ಕಾರ್ಯದರ್ಶಿ ಅನಂತ್​ ಕಲ್ಸೆಗೆ ದೂರು ನೀಡಿದ್ದಾರೆ.

ಇತ್ತೀಚೆಗೆ ಪ್ರತಾಪ್ ಸರ್​ನಾಯಕ್ ಅವರ ಮನೆಯ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಎರಡು ಬಾರಿ ದಾಳಿ ನಡೆಸಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಟ್ವೀಟ್​ ಮಾಡಿದ್ದ ಕಂಗನಾ ರನೌತ್​, ನನಗೆ ಥಳಿಸುವ ಬೆದರಿಕೆ ಹಾಕಿದ್ದವರ ಮನೆಯಲ್ಲಿ ಪಾಕಿಸ್ತಾನದ ಕ್ರೆಡಿಟ್​ ಕಾರ್ಡ್​ ಸಿಕ್ಕಿತ್ತು ಎಂದು ಬರೆದುಕೊಂಡಿದ್ದರು. ಈ ಆರೋಪ ಸಂಪೂರ್ಣವಾಗಿ ಸುಳ್ಳು ಎಂದು ಪ್ರತಾಪ್ ಸರ್​ನಾಯಕ್ ಹೇಳಿದ್ದಾರೆ.

ನನ್ನ ಹಾಗೂ ನನ್ನ ಮಗನನ್ನು ಇಡಿ ವಿಚಾರಣೆ ಮಾಡಿತ್ತು. ನಾವು ಅದಕ್ಕೆ ಸಹಕಾರ ಕೂಡ ನೀಡಿದ್ದೆವು. ಈ ಬಗ್ಗೆ ಸಮಸ್ಯೆ ಇಲ್ಲ. ಆದರೆ, ಕಂಗನಾ ಟ್ವೀಟ್​ ನಂತರದಲ್ಲಿ ಮಾಧ್ಯಮದವರು ನನ್ನ ಬಗ್ಗೆ ಸಾಕಷ್ಟು ಸುದ್ದಿಗಳನ್ನು ಪ್ರಕಟ ಮಾಡಿದ್ದರು. ಇದರಿಂದ ನನಗೆ ಮಾನಹಾನಿ ಆಗಿದೆ. ನನ್ನ ಮನೆಯಲ್ಲಿ ಏನೂ ಸಿಕ್ಕಿಲ್ಲ ಎಂದು ಖುದ್ದು ಜಾರಿ ನಿರ್ದೇಶನಾಲಯದ ಅಧಿಕಾರಿಗಳೇ ಘೋಷಣೆ ಮಾಡಿದ್ದರು ಎಂದು ಸರ್​ನಾಯಕ್​ ದೂರಿ​ನಲ್ಲಿ ತಿಳಿಸಿದ್ದಾರೆ.

ಈ ದೂರನ್ನು ಸ್ವೀಕರಿಸಿ ಕಂಗನಾ ರನೌತ್​ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಒಂದೊಮ್ಮೆ ಮಹಾರಾಷ್ಟ್ರ ವಿಧಾನ ಸಭೆಯ ಪ್ರಧಾನ ಕಾರ್ಯದರ್ಶಿ ಈ ದೂರನ್ನು ಸ್ವೀಕರಿಸಿದರೆ, ಕಂಗನಾ ವಿರುದ್ಧ ತನಿಖೆಗೆ ಆಗ್ರಹಿಸುವ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ.

ಅಕ್ರಮ ಹಣ ವರ್ಗಾವಣೆ: ಶಿವಸೇನೆ ಶಾಸಕ ಪ್ರತಾಪ್ ಸರ್​ನಾಯಕ್ ಅರ್ಜಿಗೆ ಸುಪ್ರೀಂಕೋರ್ಟ್ ಮನ್ನಣೆ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ