AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಗನಾ ರನೌತ್ ವಿರುದ್ಧ ಹಕ್ಕುಚ್ಯುತಿ ಮಂಡಿಸಿದ ಶಾಸಕ ಪ್ರತಾಪ್ ಸರ್​ನಾಯಕ್

ಪ್ರಕರಣಕ್ಕೆ ಸಂಬಂಧಿಸಿದ ಮಹಾರಾಷ್ಟ್ರ ವಿಧಾನಸಭೆಯ ಪ್ರಧಾನ ಕಾರ್ಯದರ್ಶಿ ಅನಂತ್​ ಕಲ್ಸೆಗೆ ದೂರು ನೀಡಿದ್ದಾರೆ.

ಕಂಗನಾ ರನೌತ್ ವಿರುದ್ಧ ಹಕ್ಕುಚ್ಯುತಿ ಮಂಡಿಸಿದ ಶಾಸಕ ಪ್ರತಾಪ್ ಸರ್​ನಾಯಕ್
ಸಾಂದರ್ಭಿಕ ಚಿತ್ರ
shruti hegde
| Edited By: |

Updated on: Dec 14, 2020 | 8:18 PM

Share

ಮುಂಬೈ: ನಟಿ ಕಂಗನಾ ರನೌತ್ ಅವರಿಂದ ಹಕ್ಕುಚ್ಯುತಿ ಉಂಟಾಗಿದೆ ಎಂದು ಶಿವಸೇನಾ ಶಾಸಕ ಪ್ರತಾಪ್ ಸರ್​ನಾಯಕ್ ಆರೋಪಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದ ಮಹಾರಾಷ್ಟ್ರ ವಿಧಾನಸಭೆಯ ಪ್ರಧಾನ ಕಾರ್ಯದರ್ಶಿ ಅನಂತ್​ ಕಲ್ಸೆಗೆ ದೂರು ನೀಡಿದ್ದಾರೆ.

ಇತ್ತೀಚೆಗೆ ಪ್ರತಾಪ್ ಸರ್​ನಾಯಕ್ ಅವರ ಮನೆಯ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಎರಡು ಬಾರಿ ದಾಳಿ ನಡೆಸಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಟ್ವೀಟ್​ ಮಾಡಿದ್ದ ಕಂಗನಾ ರನೌತ್​, ನನಗೆ ಥಳಿಸುವ ಬೆದರಿಕೆ ಹಾಕಿದ್ದವರ ಮನೆಯಲ್ಲಿ ಪಾಕಿಸ್ತಾನದ ಕ್ರೆಡಿಟ್​ ಕಾರ್ಡ್​ ಸಿಕ್ಕಿತ್ತು ಎಂದು ಬರೆದುಕೊಂಡಿದ್ದರು. ಈ ಆರೋಪ ಸಂಪೂರ್ಣವಾಗಿ ಸುಳ್ಳು ಎಂದು ಪ್ರತಾಪ್ ಸರ್​ನಾಯಕ್ ಹೇಳಿದ್ದಾರೆ.

ನನ್ನ ಹಾಗೂ ನನ್ನ ಮಗನನ್ನು ಇಡಿ ವಿಚಾರಣೆ ಮಾಡಿತ್ತು. ನಾವು ಅದಕ್ಕೆ ಸಹಕಾರ ಕೂಡ ನೀಡಿದ್ದೆವು. ಈ ಬಗ್ಗೆ ಸಮಸ್ಯೆ ಇಲ್ಲ. ಆದರೆ, ಕಂಗನಾ ಟ್ವೀಟ್​ ನಂತರದಲ್ಲಿ ಮಾಧ್ಯಮದವರು ನನ್ನ ಬಗ್ಗೆ ಸಾಕಷ್ಟು ಸುದ್ದಿಗಳನ್ನು ಪ್ರಕಟ ಮಾಡಿದ್ದರು. ಇದರಿಂದ ನನಗೆ ಮಾನಹಾನಿ ಆಗಿದೆ. ನನ್ನ ಮನೆಯಲ್ಲಿ ಏನೂ ಸಿಕ್ಕಿಲ್ಲ ಎಂದು ಖುದ್ದು ಜಾರಿ ನಿರ್ದೇಶನಾಲಯದ ಅಧಿಕಾರಿಗಳೇ ಘೋಷಣೆ ಮಾಡಿದ್ದರು ಎಂದು ಸರ್​ನಾಯಕ್​ ದೂರಿ​ನಲ್ಲಿ ತಿಳಿಸಿದ್ದಾರೆ.

ಈ ದೂರನ್ನು ಸ್ವೀಕರಿಸಿ ಕಂಗನಾ ರನೌತ್​ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಒಂದೊಮ್ಮೆ ಮಹಾರಾಷ್ಟ್ರ ವಿಧಾನ ಸಭೆಯ ಪ್ರಧಾನ ಕಾರ್ಯದರ್ಶಿ ಈ ದೂರನ್ನು ಸ್ವೀಕರಿಸಿದರೆ, ಕಂಗನಾ ವಿರುದ್ಧ ತನಿಖೆಗೆ ಆಗ್ರಹಿಸುವ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ.

ಅಕ್ರಮ ಹಣ ವರ್ಗಾವಣೆ: ಶಿವಸೇನೆ ಶಾಸಕ ಪ್ರತಾಪ್ ಸರ್​ನಾಯಕ್ ಅರ್ಜಿಗೆ ಸುಪ್ರೀಂಕೋರ್ಟ್ ಮನ್ನಣೆ

Follow Us
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!