AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಗನಾ ರನೌತ್ ವಿರುದ್ಧ ಹಕ್ಕುಚ್ಯುತಿ ಮಂಡಿಸಿದ ಶಾಸಕ ಪ್ರತಾಪ್ ಸರ್​ನಾಯಕ್

ಪ್ರಕರಣಕ್ಕೆ ಸಂಬಂಧಿಸಿದ ಮಹಾರಾಷ್ಟ್ರ ವಿಧಾನಸಭೆಯ ಪ್ರಧಾನ ಕಾರ್ಯದರ್ಶಿ ಅನಂತ್​ ಕಲ್ಸೆಗೆ ದೂರು ನೀಡಿದ್ದಾರೆ.

ಕಂಗನಾ ರನೌತ್ ವಿರುದ್ಧ ಹಕ್ಕುಚ್ಯುತಿ ಮಂಡಿಸಿದ ಶಾಸಕ ಪ್ರತಾಪ್ ಸರ್​ನಾಯಕ್
ಸಾಂದರ್ಭಿಕ ಚಿತ್ರ
shruti hegde
| Edited By: |

Updated on: Dec 14, 2020 | 8:18 PM

Share

ಮುಂಬೈ: ನಟಿ ಕಂಗನಾ ರನೌತ್ ಅವರಿಂದ ಹಕ್ಕುಚ್ಯುತಿ ಉಂಟಾಗಿದೆ ಎಂದು ಶಿವಸೇನಾ ಶಾಸಕ ಪ್ರತಾಪ್ ಸರ್​ನಾಯಕ್ ಆರೋಪಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದ ಮಹಾರಾಷ್ಟ್ರ ವಿಧಾನಸಭೆಯ ಪ್ರಧಾನ ಕಾರ್ಯದರ್ಶಿ ಅನಂತ್​ ಕಲ್ಸೆಗೆ ದೂರು ನೀಡಿದ್ದಾರೆ.

ಇತ್ತೀಚೆಗೆ ಪ್ರತಾಪ್ ಸರ್​ನಾಯಕ್ ಅವರ ಮನೆಯ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಎರಡು ಬಾರಿ ದಾಳಿ ನಡೆಸಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಟ್ವೀಟ್​ ಮಾಡಿದ್ದ ಕಂಗನಾ ರನೌತ್​, ನನಗೆ ಥಳಿಸುವ ಬೆದರಿಕೆ ಹಾಕಿದ್ದವರ ಮನೆಯಲ್ಲಿ ಪಾಕಿಸ್ತಾನದ ಕ್ರೆಡಿಟ್​ ಕಾರ್ಡ್​ ಸಿಕ್ಕಿತ್ತು ಎಂದು ಬರೆದುಕೊಂಡಿದ್ದರು. ಈ ಆರೋಪ ಸಂಪೂರ್ಣವಾಗಿ ಸುಳ್ಳು ಎಂದು ಪ್ರತಾಪ್ ಸರ್​ನಾಯಕ್ ಹೇಳಿದ್ದಾರೆ.

ನನ್ನ ಹಾಗೂ ನನ್ನ ಮಗನನ್ನು ಇಡಿ ವಿಚಾರಣೆ ಮಾಡಿತ್ತು. ನಾವು ಅದಕ್ಕೆ ಸಹಕಾರ ಕೂಡ ನೀಡಿದ್ದೆವು. ಈ ಬಗ್ಗೆ ಸಮಸ್ಯೆ ಇಲ್ಲ. ಆದರೆ, ಕಂಗನಾ ಟ್ವೀಟ್​ ನಂತರದಲ್ಲಿ ಮಾಧ್ಯಮದವರು ನನ್ನ ಬಗ್ಗೆ ಸಾಕಷ್ಟು ಸುದ್ದಿಗಳನ್ನು ಪ್ರಕಟ ಮಾಡಿದ್ದರು. ಇದರಿಂದ ನನಗೆ ಮಾನಹಾನಿ ಆಗಿದೆ. ನನ್ನ ಮನೆಯಲ್ಲಿ ಏನೂ ಸಿಕ್ಕಿಲ್ಲ ಎಂದು ಖುದ್ದು ಜಾರಿ ನಿರ್ದೇಶನಾಲಯದ ಅಧಿಕಾರಿಗಳೇ ಘೋಷಣೆ ಮಾಡಿದ್ದರು ಎಂದು ಸರ್​ನಾಯಕ್​ ದೂರಿ​ನಲ್ಲಿ ತಿಳಿಸಿದ್ದಾರೆ.

ಈ ದೂರನ್ನು ಸ್ವೀಕರಿಸಿ ಕಂಗನಾ ರನೌತ್​ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಒಂದೊಮ್ಮೆ ಮಹಾರಾಷ್ಟ್ರ ವಿಧಾನ ಸಭೆಯ ಪ್ರಧಾನ ಕಾರ್ಯದರ್ಶಿ ಈ ದೂರನ್ನು ಸ್ವೀಕರಿಸಿದರೆ, ಕಂಗನಾ ವಿರುದ್ಧ ತನಿಖೆಗೆ ಆಗ್ರಹಿಸುವ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ.

ಅಕ್ರಮ ಹಣ ವರ್ಗಾವಣೆ: ಶಿವಸೇನೆ ಶಾಸಕ ಪ್ರತಾಪ್ ಸರ್​ನಾಯಕ್ ಅರ್ಜಿಗೆ ಸುಪ್ರೀಂಕೋರ್ಟ್ ಮನ್ನಣೆ

ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!