AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಣೆಯಲ್ಲಿ ನೈಟ್ ಕರ್ಫ್ಯೂ ಜಾರಿ; ನಾಳೆಯಿಂದ 7 ದಿನ ಬಾರ್, ಹೊಟೆಲ್, ರೆಸ್ಟೋರೆಂಟ್ ಬಂದ್

ನಾಳೆಯಿಂದ (ಏಪ್ರಿಲ್ 3) ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ, 12 ಗಂಟೆಗಳ ನೈಟ್ ಕರ್ಫ್ಯೂ ಜಾರಿಯಾಗಲಿದೆ. ಮುಂದಿನ ಶುಕ್ರವಾರ ಪರಿಸ್ಥಿತಿಯನ್ನು ಮತ್ತೆ ಅವಲೋಕಿಸಲಾಗುವುದು ಎಂದು ಡಿವಿಷನಲ್ ಕಮಿಷನರ್ ಸೌರಭ್ ರಾವ್ ತಿಳಿಸಿದ್ದಾರೆ.

ಪುಣೆಯಲ್ಲಿ ನೈಟ್ ಕರ್ಫ್ಯೂ ಜಾರಿ; ನಾಳೆಯಿಂದ 7 ದಿನ ಬಾರ್, ಹೊಟೆಲ್, ರೆಸ್ಟೋರೆಂಟ್ ಬಂದ್
ಸೌಜನ್ಯ : ಅಂತರ್ಜಾಲ
TV9 Web
| Edited By: |

Updated on:Apr 05, 2022 | 12:59 PM

Share

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯದ ಪುಣೆ ಜಿಲ್ಲೆಯಲ್ಲಿ ನಾಳೆಯಿಂದ (ಏಪ್ರಿಲ್ 3) ಕಠಿಣ ನಿಯಮಾವಳಿಗಳನ್ನು ಜಾರಿಗೊಳಿಸುವ ಬಗ್ಗೆ ಇಂದು (ಏಪ್ರಿಲ್ 2) ಮಾರ್ಗಸೂಚಿ ಬಿಡುಗಡೆಗೊಳಿಸಿದ್ದಾರೆ. ನೂತನ ಆದೇಶದಂತೆ ಪುಣೆ ಜಿಲ್ಲೆಯಲ್ಲಿ ನಾಳೆಯಿಂದ ರಾತ್ರಿ ಕರ್ಫ್ಯೂ ಜಾರಿಯಾಗಲಿದೆ.

ಪುಣೆ (ಮಹಾರಾಷ್ಟ್ರ) ಡಿವಿಷನಲ್ ಕಮಿಷನರ್ ಹೊರಡಿಸಿರುವ ಮಾರ್ಗಸೂಚಿಯ ಪ್ರಕಾರ, ಬಾರ್, ಹೊಟೇಲ್, ರೆಸ್ಟೋರೆಂಟ್​ಗಳು ಏಳು ದಿನಗಳ ಕಾಲ ಕಾರ್ಯನಿರ್ವಹಿಸುವಂತಿಲ್ಲ. ಹೊಟೆಲ್ ಹಾಗೂ ರೆಸ್ಟೋರೆಂಟ್​ಗಳಿಂದ ಹೋಮ್ ಡೆಲಿವರಿಗೆ ಮಾತ್ರ ಅವಕಾಶವಿದೆ. ಜೊತೆಗೆ, ಧಾರ್ಮಿಕ ಕ್ಷೇತ್ರಗಳು ಕೂಡ 7 ದಿನಗಳ ಕಾಲ ಸಂಪೂರ್ಣವಾಗಿ ಮುಚ್ಚಲಿವೆ.

ಮದುವೆ ಹಾಗೂ ಅಂತ್ಯಕ್ರಿಯೆಯ ವಿಧಿವಿಧಾನಗಳನ್ನು ಹೊರತುಪಡಿಸಿ, ಉಳಿದೆಲ್ಲಾ ಸಾರ್ವಜನಿಕ ಕಾರ್ಯಕ್ರಮಗಳಿಗೆ ಸರ್ಕಾರ ತಡೆಯೊಡ್ಡಿದೆ. ಸಾವು ಸಂಭವಿಸಿದಲ್ಲಿ ಕೇವಲ 20 ಮತ್ತು ವಿವಾಹ ಸಮಾರಂಭದಲ್ಲಿ ಕೇವಲ 50 ಜನರು ಸೇರಬಹುದು ಎಂದು ಸೂಚನೆ ನೀಡಲಾಗಿದೆ.

ನಾಳೆಯಿಂದ (ಏಪ್ರಿಲ್ 3) ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ, 12 ಗಂಟೆಗಳ ನೈಟ್ ಕರ್ಫ್ಯೂ ಜಾರಿಯಾಗಲಿದೆ. ಮುಂದಿನ ಶುಕ್ರವಾರ ಪರಿಸ್ಥಿತಿಯನ್ನು ಮತ್ತೆ ಅವಲೋಕಿಸಲಾಗುವುದು ಎಂದು ಡಿವಿಷನಲ್ ಕಮಿಷನರ್ ಸೌರಭ್ ರಾವ್ ತಿಳಿಸಿದ್ದಾರೆ.

ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ, ಗುರುವಾರ (ಏಪ್ರಿಲ್ 2) ಸುಮಾರು 8,011 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದೆ. ಈ ಮೂಲಕ ಒಟ್ಟು ಕೊವಿಡ್-19 ಕೇಸ್​ಗಳ ಸಂಖ್ಯೆ 5,42,422 ಕ್ಕೆ ಏರಿಕೆಯಾಗಿದೆ. ಪುಣೆಯಲ್ಲಿ ಸತತವಾಗಿ ಎರಡನೇ ದಿನ 8,000ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಕಾಣಿಸಿಕೊಳ್ಳುತ್ತಿದೆ. ಬುಧವಾರ (ಏಪ್ರಿಲ್ 1) 8,605 ಕೊವಿಡ್-19 ಪ್ರಕರಣಗಳು ದೃಢಪಟ್ಟಿದ್ದವು. ಕೊರೊನಾ ಸಾಂಕ್ರಾಮಿಕ ರೋಗವು ಕಳೆದ ವರ್ಷ ಆರಂಭವಾದ ಬಳಿಕ, ಒಂದು ದಿನದಲ್ಲಿ ದಾಖಲಾದ ಅತಿ ಹೆಚ್ಚು ಸೋಂಕು ಇದಾಗಿದೆ.

ಮಹಾರಾಷ್ಟ್ರದಲ್ಲಿ ಗುರುವಾರ 43,183 ಕೊರೊನಾ ಪ್ರಕರಣಗಳು ದಾಖಲಾಗಿದೆ. ಇದು ಕೂಡ ಕೊರೊನಾ ಸೋಂಕು ಆರಂಭವಾದ ಬಳಿಕ ಒಂದು ದಿನದ ಅವಧಿಯಲ್ಲಿ ದಾಖಲಾದ ಅತಿ ಹೆಚ್ಚು ಪ್ರಕರಣವಾಗಿದೆ. ಇದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 28,56,163 ಆಗಿದೆ. ಗುರುವಾರ, ರಾಜ್ಯದಲ್ಲಿ ಒಟ್ಟು 249 ಸಾವು ಸಂಭವಿಸಿದ್ದು, ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 54,898 ಆಗಿದೆ. ಕೊರೊನಾ ಸೋಂಕು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಇಂದು ಸಂಜೆ 8.30ಕ್ಕೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಾಜ್ಯವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಇದನ್ನೂ ಓದಿ: Corona New Guidelines: ರಾಜ್ಯದಲ್ಲಿ ಲಾಕ್​ಡೌನ್, ನೈಟ್ ಕರ್ಫ್ಯೂ ಇಲ್ಲ; ನೂತನ ಕೊರೊನಾ ತಡೆ ಮಾರ್ಗದರ್ಶಿ ಸೂತ್ರ ಬಿಡುಗಡೆ

ಕೊರೊನಾ ನಡುವೆ ರಾಜ್ಯದಲ್ಲಿ ಭರ್ಜರಿ ಮದ್ಯ ಮಾರಾಟ

(Maharashtra Pune Shutdown covid 19 coronavirus 7 days night curfew imposed malls hotels bars to remain closed)

Published On - 3:22 pm, Fri, 2 April 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ