AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ ಹೆಚ್ಚಿದ ಕೊರೊನಾ ಹಾವಳಿ; ಒಂದೇ ದಿನ 35 ಸಾವಿರ ಕೇಸ್​ ಪತ್ತೆ

ಕಳೆದ 24 ಗಂಟೆಯಲ್ಲಿ ಮಹಾರಾಷ್ಟ್ರದಲ್ಲಿ 35,952 ಹೊಸ ಕೊರೊನಾ ಪ್ರಕರಣಗಳು ದೃಢವಾಗಿವೆ. 12,764 ಜನರು ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆಗಿದ್ದಾರೆ. 111 ಸಾವು ಸಂಭವಿಸಿದೆ.

ಮಹಾರಾಷ್ಟ್ರದಲ್ಲಿ ಹೆಚ್ಚಿದ ಕೊರೊನಾ ಹಾವಳಿ; ಒಂದೇ ದಿನ 35 ಸಾವಿರ ಕೇಸ್​ ಪತ್ತೆ
ಪ್ರಾತಿನಿಧಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: Mar 25, 2021 | 9:09 PM

Share

ಮುಂಬೈ (ಮಾರ್ಚ್​​ 25): ದೇಶದಲ್ಲಿ ಕೊರೊನಾ ಪ್ರಕರಣಗಳು ಗಣನೀಯವಾಗಿ ಏರಿಕೆ ಕಾಣುತ್ತಿರುವುದು ಮತ್ತೆ ಆತಂಕ ಸೃಷ್ಟಿಸಿದೆ. ನೆರೆಯ ಮಹಾರಾಷ್ಟ್ರದಲ್ಲಿ ಕೊರೊನಾ ಹಾವಳಿ ಮಿತಿ ಮೀರಿದೆ. ಒಂದೇ ದಿನ ಮಹಾರಾಷ್ಟ್ರದಲ್ಲಿ 35 ಸಾವಿರ ಕೊರೊನಾ ಕೇಸ್​ಗಳು ದಾಖಲಾಗಿದ್ದು ಸಾಕಷ್ಟು ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವವರ ಮೇಲೆ ಸರ್ಕಾರ ನಿಗಾ ಇರಿಸಿದೆ.

ಕಳೆದ 24 ಗಂಟೆಯಲ್ಲಿ ಮಹಾರಾಷ್ಟ್ರದಲ್ಲಿ 35,952 ಹೊಸ ಕೊರೊನಾ ಪ್ರಕರಣಗಳು ದೃಢವಾಗಿವೆ. 12,764 ಜನರು ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆಗಿದ್ದಾರೆ. 111 ಸಾವು ಸಂಭವಿಸಿದೆ. ಈ ಮೂಲಕ ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ 26,00,833ಆಗಿದೆ. 22,83,037 ಜನರು ಈಗಾಗಲೇ ಕೊರೊನಾದಿಂದ ಗುಣಮುಖರಾಗಿದ್ದಾರೆ. 2,62,685 ಆ್ಯಕ್ಟಿವ್​ ಪ್ರಕರಣಗಳಿವೆ. ಸಾವಿನ ಸಂಖ್ಯೆ 53,795 ಆಗಿದೆ.

ಮಹಾರಾಷ್ಟ್ರದಲ್ಲಿ ಲಾಕ್​ಡೌನ್​ ಸಾಧ್ಯತೆ? ಹಾರಾಷ್ಟ್ರದಲ್ಲಿ ಕೊರೊನಾ ವೈರಸ್​ ಪ್ರಕರಣಗಳು ಮತ್ತೆ ಹೆಚ್ಚಿದೆ. ಇದು ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ನೇತೃತ್ವದ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಕಠಿಣ ಕ್ರಮ ಕೈಗೊಂಡ ಹೊರತಾಗಿಯೂ ಪ್ರಕರಣಗಳು ನಿಯಂತ್ರಣಕ್ಕೆ ಸಿಗುತ್ತಿಲ್ಲ. ಹೀಗೆಯೇ ಮುಂದುವರಿದರೆ ಲಾಕ್​ಡೌನ್​ ಘೋಷಣೆ ಮಾಡುವ ನಿರ್ಧಾರ ತೆಗೆದುಕೊಳ್ಳುವುದು ಅನಿವಾರ್ಯ ಆಗಲಿದೆ ಎಂದು ಉದ್ಧವ್​ ಠಾಕ್ರೆ ಇತ್ತೀಚೆಗೆ ಅಭಿಪ್ರಾಯಪಟ್ಟಿದ್ದರು.

ಮಹಾರಾಷ್ಟ್ರದ ಕೊವಿಡ್ ಪರಿಸ್ಥಿತಿ ಗಂಭೀರವಾಗಿದೆ. ದೈನಂದಿನ ಅಂಕಿ ಅಂಶಗಳ ಪ್ರಸ್ತುತ ಏರಿಕೆ ಆತಂಕ ಮೂಡಿಸಿದೆ. ಇದು ಸೋಂಕಿನ ಹೊಸ ಅಲೆಯೇ ಎಂದು ಕಂಡುಹಿಡಿಯಲು ಮತ್ತೊಂದು ಲಾಕ್​​ಡೌನ್ ತಪ್ಪಿಸಲು ಜನರು ಕೊರೊನಾ ವೈರಸ್ ನಿಯಂತ್ರಣ ಶಿಷ್ಟಾಚಾರಗಳನ್ನು ಅನುಸರಿಸಬೇಕೆಂದು ಅವರು ಎಚ್ಚರಿಸಿದ್ದರು.

ಲಾಕ್​ಡೌನ್​ ಅಗತ್ಯವಿದೆಯೇ? ನೀವು ಜವಾಬ್ದಾರಿಯುತವಾಗಿ ವರ್ತಿಸಿ. ಲಾಕ್‌ಡೌನ್ ಬೇಡದವರು ಮಾಸ್ಕ್​ ಧರಿಸುತ್ತಾರೆ. ಲಾಕ್‌ಡೌನ್ ಬಯಸುವವರು ಮಾಸ್ಕ್​ ಧರಿಸುವುದಿಲ್ಲ. ಮಾಸ್ಕ್​ ಧರಿಸಿ, ಲಾಕ್​ಡೌನ್​ ಬೇಡವೆನ್ನಿ ಎಂದು ಉದ್ಧವ್​ ಕರೆ ನೀಡಿದ್ದರು. ಆದರೂ, ಜನರು ಗುಂಪು ಸೇರುತ್ತಿರುವುದು ನಿಲ್ಲುತ್ತಿಲ್ಲ. ಜನರು ಕೊರೊನಾ ನಿಯಮ ಪಾಲನೆ ಮಾಡುತ್ತಿಲ್ಲ.

ಇದನ್ನೂ ಓದಿ: ದೇಶದ ವಿವಿಧೆಡೆ ಮತ್ತೆ ಕೊರೊನಾ ಆತಂಕ: ಮಾಸ್ಕ್ ಕಡ್ಡಾಯಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಸೂಚನೆ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More