AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ ಕೊವಿಡ್​ನಂತೆ ಹರಡುತ್ತಿದೆ ಗುಯಿಲಿನ್ ಬ್ಯಾರೆ ಸಿಂಡ್ರೋಮ್‌; ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಗುಯಿಲಿನ್ ಬ್ಯಾರೆ ಸಿಂಡ್ರೋಮ್ ಒಂದು ಅಪರೂಪದ ನರ ಅಸ್ವಸ್ಥತೆಯಾಗಿದ್ದು, ಇದರಿಂದ ರೋಗನಿರೋಧಕ ವ್ಯವಸ್ಥೆ ನರಮಂಡಲದ ಮೇಲೆ ದಾಳಿ ಮಾಡುತ್ತದೆ. ಆರೋಗ್ಯ ಅಧಿಕಾರಿಗಳ ಸಂಖ್ಯೆಯ ಪ್ರಕಾರ, ಮಹಾರಾಷ್ಟ್ರದಲ್ಲಿ ಜಿಬಿಎಸ್‌ನಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಇದುವರೆಗೂ ಪತ್ತೆಯಾದ ಜಿಬಿಎಸ್​ ಪ್ರಕರಣಗಳ ಸಂಖ್ಯೆ 130 ಆಗಿದೆ. ಇದು ಜಿಬಿಎಸ್ ಮುಂದಿನ ಕೊರೊನಾವೈರಸ್​ನಂತೆ ಹರಡುವ ಸಾಧ್ಯತೆಯ ಭೀತಿ ಉಂಟಾಗಿದೆ.

ಮಹಾರಾಷ್ಟ್ರದಲ್ಲಿ ಕೊವಿಡ್​ನಂತೆ ಹರಡುತ್ತಿದೆ ಗುಯಿಲಿನ್ ಬ್ಯಾರೆ ಸಿಂಡ್ರೋಮ್‌; ಸಾವಿನ ಸಂಖ್ಯೆ 3ಕ್ಕೆ ಏರಿಕೆ
Guillain Barre Syndrome
ಸುಷ್ಮಾ ಚಕ್ರೆ
|

Updated on: Jan 31, 2025 | 4:30 PM

Share

ಪುಣೆ: ಜಿಬಿಎಸ್ ವೈರಸ್ ಎಂದು ಕರೆಯಲ್ಪಡುವ ಗುಯಿಲಿನ್-ಬ್ಯಾರೆ ಸಿಂಡ್ರೋಮ್‌ನಿಂದಾಗಿ ಮಹಾರಾಷ್ಟ್ರದಲ್ಲಿ ಇಂದು ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಲಭ್ಯವಿರುವ ಮಾಹಿತಿಯ ಪ್ರಕಾರ, ಪಿಂಪ್ರಿ-ಚಿಂಚ್‌ವಾಡ್‌ನಲ್ಲಿ 36 ವರ್ಷದ ರೋಗಿಯೊಬ್ಬರು ಈ ಸಿಂಡ್ರೋಮ್‌ನಿಂದ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ, ಪುಣೆಯಲ್ಲಿ ಜಿಬಿಎಸ್ ವೈರಸ್‌ನ ಗರಿಷ್ಠ ಪ್ರಕರಣಗಳು ವರದಿಯಾಗಿದ್ದು, 130 ಜನರಲ್ಲಿ ಇದೇ ರೀತಿಯ ರೋಗ ಪತ್ತೆಯಾಗಿದೆ.

36 ವರ್ಷದ ಓಲಾ ಚಾಲಕನನ್ನು ಜನವರಿ 21ರಂದು ಯಶವಂತರಾವ್ ಚವಾಣ್ ಸ್ಮಾರಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮರಣೋತ್ತರ ಪರೀಕ್ಷೆಯ ವರದಿಯು ಈ ಸಾವಿಗೆ ಕಾರಣ “ನ್ಯುಮೋನಿಯಾದಿಂದ ಶ್ವಾಸಕೋಶಕ್ಕೆ ಹಾನಿ” ಎಂದು ಹೇಳಿದೆ. ಜಿಬಿಎಸ್ ಸಹ ಇದಕ್ಕೆ ಕಾರಣವಾಗಿದೆ. ಇದುವರೆಗೂ ಗುಯಿಲಿನ್ ಬ್ಯಾರೆ ಸಿಂಡ್ರೋಮ್ (GBS)ನ ಒಟ್ಟು ಪ್ರಕರಣಗಳ ಸಂಖ್ಯೆ 130ಕ್ಕೆ ಏರಿದೆ.

ಇದನ್ನೂ ಓದಿ: ಮಾರಣಾಂತಿಕ ಗಂಭೀರ ರೋಗದಿಂದ ಬಳಲುತ್ತಿರುವವರಿಗೆ ದಯಾಮರಣ ಹಕ್ಕು: ಕರ್ನಾಟಕ ಸರ್ಕಾರ ಮಹತ್ವದ ಆದೇಶ

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಮಹಾನಿರ್ದೇಶಕ ಡಾ. ರಾಜೀವ್ ಬಹ್ಲ್ ಅವರು ತಜ್ಞರ ತಂಡವು ವಿವಿಧ ಮಾದರಿಗಳನ್ನು ಸಂಗ್ರಹಿಸಿರುವುದರಿಂದ ಪ್ರಕರಣಗಳ ತನಿಖೆ ನಡೆಯುತ್ತಿದೆ ಎಂದು ಹೇಳಿದೆ. “ಸೋಂಕಿತರ ಮಲ ಮತ್ತು ರಕ್ತದ ಮಾದರಿಗಳನ್ನು NIV ಪುಣೆ ಪ್ರಯೋಗಾಲಯದಲ್ಲಿ ಪರೀಕ್ಷಿಸಲಾಗುತ್ತಿದೆ. ಆದರೆ, ಅದರ ಹರಡುವಿಕೆಯ ಹಿಂದಿನ ಕಾರಣದ ಬಗ್ಗೆ ಇನ್ನೂ ಯಾವುದೇ ನಿರ್ದಿಷ್ಟ ಸುಳಿವುಗಳು ಸಿಕ್ಕಿಲ್ಲ” ಎಂದು ಡಾ. ಬಹ್ಲ್ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ