ಸುರಿಯುವ ಮಳೆಯನ್ನೂ ಲೆಕ್ಕಿಸದೆ ಭಾಷಣ ಮಾಡಿದ ಶರದ್ ಪವಾರ್, ಮರುಕಳಿಸಿದ 2019ರ ನೆನಪು

ಸುರಿಯುವ ಮಳೆಯನ್ನೂ ಲೆಕ್ಕಿಸದೆ ನ್ಯಾಷನಲಿಸ್ಟ್​ ಕಾಂಗ್ರೆಸ್​ ಪಾರ್ಟಿ(ಎನ್​ಸಿಪಿ) ಅಧ್ಯಕ್ಷ ಶರದ್ ಪವಾರ್(Sharad Pawar) ಭಾಷಣ ಮಾಡಿದ್ದಾರೆ. ಇದು ಅಕ್ಟೋಬರ್​ 2019ರಲ್ಲಿ ಅವರು ಮಾಡಿದ ಚುನಾವಣಾ ಪ್ರಚಾರವನ್ನು ನೆನಪಿಸುತ್ತಿದೆ. ಮಹಾರಾಷ್ಟ್ರದಲ್ಲಿ ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನೀಡಿದ ಆ ಭಾಷಣದಿಂದ ಅವರ ಪಕ್ಷಕ್ಕೆ ಲಾಭವಾಗಿತ್ತು ಎಂದು ಹೇಳಲಾಗಿದೆ. ಮಹಾರಾಷ್ಟ್ರದಲ್ಲಿ ಬೆಳಗ್ಗೆಯಿಂದಲೂ ಮಳೆ ಸುರಿಯುತ್ತಿತ್ತು, ಸಂಜೆ ಕಾರ್ಯಕ್ರಮದ ವೇಳೆಯೂ ಸಣ್ಣ ಮಳೆ ಬರತೊಡಗಿತು.

ಸುರಿಯುವ ಮಳೆಯನ್ನೂ ಲೆಕ್ಕಿಸದೆ ಭಾಷಣ ಮಾಡಿದ ಶರದ್ ಪವಾರ್, ಮರುಕಳಿಸಿದ 2019ರ ನೆನಪು
ಶರದ್ ಪವಾರ್
Image Credit source: India Today

Updated on: Nov 27, 2023 | 9:50 AM

ಸುರಿಯುವ ಮಳೆಯನ್ನೂ ಲೆಕ್ಕಿಸದೆ ನ್ಯಾಷನಲಿಸ್ಟ್​ ಕಾಂಗ್ರೆಸ್​ ಪಾರ್ಟಿ(ಎನ್​ಸಿಪಿ) ಅಧ್ಯಕ್ಷ ಶರದ್ ಪವಾರ್(Sharad Pawar) ಭಾಷಣ ಮಾಡಿದ್ದಾರೆ. ಇದು ಅಕ್ಟೋಬರ್​ 2019ರಲ್ಲಿ ಅವರು ಮಾಡಿದ ಚುನಾವಣಾ ಪ್ರಚಾರವನ್ನು ನೆನಪಿಸುತ್ತಿದೆ. ಮಹಾರಾಷ್ಟ್ರದಲ್ಲಿ ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನೀಡಿದ ಆ ಭಾಷಣದಿಂದ ಅವರ ಪಕ್ಷಕ್ಕೆ ಲಾಭವಾಗಿತ್ತು ಎಂದು ಹೇಳಲಾಗಿದೆ. ಮಹಾರಾಷ್ಟ್ರದಲ್ಲಿ ಬೆಳಗ್ಗೆಯಿಂದಲೂ ಮಳೆ ಸುರಿಯುತ್ತಿತ್ತು, ಸಂಜೆ ಕಾರ್ಯಕ್ರಮದ ವೇಳೆಯೂ ಸಣ್ಣ ಮಳೆ ಬರತೊಡಗಿತು.

ಅಕ್ಟೋಬರ್ 18, 2019 ರಂದು, ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಮೂರು ದಿನಗಳ ಮೊದಲು, ಪವಾರ್ ಅವರು ಲೋಕಸಭೆ ಉಪಚುನಾವಣೆಗೆ ಎನ್‌ಸಿಪಿ ಅಭ್ಯರ್ಥಿಯ ಪರವಾಗಿ ಪ್ರಚಾರ ಮಾಡಲು ಸತಾರಾದಲ್ಲಿದ್ದರು. ಈ ವೇಳೆ ಜೋರು ಮಳೆಯಲ್ಲಿ ತೊಯ್ದು ಹೋಗುತ್ತಲೇ ಭಾಷಣ ಮಾಡಿದರು.

ಚುನಾವಣೆಯಲ್ಲಿ, ಅವರ ಪಕ್ಷವು 54 ಸ್ಥಾನಗಳನ್ನು ಗೆದ್ದಿತ್ತು. ಇದು ಕಳೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಅವರ ಪಕ್ಷದ ಅದೃಷ್ಟವನ್ನು ಬದಲಾಯಿಸಿತು ಎಂದು ಹೇಳಲಾಗುತ್ತದೆ.

ಮತ್ತಷ್ಟು ಓದಿ: Sharad Pawar: ಶರದ್ ಪವಾರ್ ಒಬಿಸಿ ವರ್ಗಕ್ಕೆ ಸೇರಿದವರೇ? ವೈರಲ್ ಆದ ಜಾತಿ ಪ್ರಮಾಣಪತ್ರದ ನಿಜಾಂಶವೇನು?

ಕಾರ್ಯಕ್ರಮದ ವೇಳೆ ಶರದ್ ಪವಾರ್ ಮಳೆಯಲ್ಲಿ ನೆನೆಯುತ್ತಿರುವ ಫೋಟೊ, ವಿಡಿಯೋಗಳು ವೃರಲ್ ಆಗಿವೆ. ಅವರ ಬೆಂಬಲಿಗರು ನಾಲ್ಕು ವರ್ಷಗಳ ಹಿಂದೆ ನಡೆದ ಚುನಾವಣಾ ಪ್ರಚಾರವನ್ನು ನೆನಪಿಸಿಕೊಂಡರು.

ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಬಣವು ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯನ್ನು ಪಡೆಯಲು ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ. ಅಜಿತ್ ಪವಾರ್ ಅವರು 40 ಶಾಸಕರ ಬೆಂಬಲವನ್ನು ಪ್ರತಿಪಾದಿಸಿದ್ದಾರೆ.

ಅಷ್ಟು ಮಳೆ ಸುರಿಯುತ್ತಿದ್ದರೂ ಛತ್ರಿ ನೀಡಲು ಬಂದರೆ ಪವಾರ್ ನಿರಾಕರಿಸಿದ್ದರು. ವರುಣದೇವ ಎನ್​ಸಿಪಿಯನ್ನು ಆಶೀರ್ವದಿಸಿದ್ದಾನೆ ಎಂದು ಹೇಳಿದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us