AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಥಾಣೆಯ ಆಸ್ಪತ್ರೆಯಲ್ಲಿ ವೈದ್ಯರ ಮೇಲೆ ಹಲ್ಲೆ; ಶಿವಸೇನಾ ಕಾರ್ಪೊರೇಟರ್ ಬಂಧನ

ಶಾಸ್ತ್ರಿನಗರ ಆಸ್ಪತ್ರೆಯಲ್ಲಿ ಮಂಗಳವಾರ ರಾತ್ರಿ ವೈದ್ಯರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಶಿವಸೇನಾ ಕಾರ್ಪೋರೇಟರ್ ರಮೇಶ್ ಮ್ಹಾತ್ರೆ ಅವರನ್ನು ವಿಷ್ಣುನಗರ ಪೊಲೀಸರು ಇಂದು ಬಂಧಿಸಿದ್ದಾರೆ. ಇದಕ್ಕೂ ಮುನ್ನ, ಪೊಲೀಸರು ಈ ಘಟನೆಗೆ ಸಂಬಂಧಿಸಿದಂತೆ ಅವರ ಮೂವರು ಸಹಚರರನ್ನು ಬಂಧಿಸಿದ್ದರು. 9 ತಿಂಗಳ ಗರ್ಭಿಣಿಯೊಬ್ಬರಿಗೆ ಹೆರಿಗೆಗೆ ಸಂಬಂಧಿಸಿದ ಗಂಭೀರ ತೊಂದರೆಗಳು ಕಾಣಿಸಿಕೊಂಡಾಗ ಆಸ್ಪತ್ರೆಯ ಸಿಬ್ಬಂದಿ ನವಜಾತ ಶಿಶು ಮತ್ತು ಆ ಮಹಿಳೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಅವರ ಕುಟುಂಬಕ್ಕೆ ಸಲಹೆ ನೀಡಿದ್ದರು. ಇದನ್ನು ವಿರೋಧಿಸಿ ಕಾರ್ಪೋರೇಟರ್ ರಮೇಶ್ ಮ್ಹಾತ್ರೆ ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಥಾಣೆಯ ಆಸ್ಪತ್ರೆಯಲ್ಲಿ ವೈದ್ಯರ ಮೇಲೆ ಹಲ್ಲೆ; ಶಿವಸೇನಾ ಕಾರ್ಪೊರೇಟರ್ ಬಂಧನ
Ramesh Mhatre Attack
ಸುಷ್ಮಾ ಚಕ್ರೆ
|

Updated on: Jul 08, 2026 | 7:34 PM

Share

ಥಾಣೆ, ಜುಲೈ 8: ಕಲ್ಯಾಣ್-ಡೊಂಬಿವ್ಲಿ ಮುನ್ಸಿಪಲ್ ಕಾರ್ಪೊರೇಷನ್ (KDMC) ವ್ಯಾಪ್ತಿಯ ಶಾಸ್ತ್ರಿನಗರ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಆಸ್ಪತ್ರೆಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಶಿವಸೇನಾ ಕಾರ್ಪೊರೇಟರ್ ರಮೇಶ್ ಮ್ಹಾತ್ರೆ ಅವರನ್ನು ಬಂಧಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ರಮೇಶ್ ಮ್ಹಾತ್ರೆ ಸೇರಿ 6 ಜನರ ವಿರುದ್ಧ ಪೊಲೀಸ್ ಮೊಕದ್ದಮೆ ದಾಖಲಾದ ಬೆನ್ನಲ್ಲೇ ಈ ಬಂಧನ ನಡೆದಿದೆ.

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮುನ್ಸಿಪಲ್ ಆಸ್ಪತ್ರೆಯಲ್ಲಿ ನವಜಾತ ಶಿಶುವೊಂದರ ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ಮತ್ತೊಂದು ಸುಸಜ್ಜಿತ ಆಸ್ಪತ್ರೆಗೆ ಕರೆದುಕೊಂಡು ಹೋಗಲು ವೈದ್ಯರು ಪೋಷಕರಿಗೆ ಸಲಹೆ ನೀಡಿದ್ದರು. ಈ ವಿಷಯದಿಂದ ವೈದ್ಯರು ಮತ್ತು ಮಗುವಿನ ಕುಟುಂಬಸ್ಥರ ನಡುವೆ ವಾಗ್ವಾದ ಉಂಟಾಗಿತ್ತು. ಇದಾದ ಬಳಿಕ ಈ ವಿಷಯಕ್ಕೆ ವೈದ್ಯರು ಮತ್ತು ಆಸ್ಪತ್ರೆಯ ನೌಕರರ ಮೇಲೆ ದೈಹಿಕ ಹಲ್ಲೆ ನಡೆದಿತ್ತು. ನಿನ್ನೆ ಸಂಜೆ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ವಿವಾದ ಭುಗಿಲೆದ್ದಿತ್ತು.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಶಿವಸೇನೆ ಹೈಡ್ರಾಮಾ; ಶಿಂಧೆ ಬಣ ಸೇರಲು ಸಜ್ಜಾದ 6 ಬಂಡಾಯ ಸಂಸದರು

ಈ ವಿಡಿಯೋ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ವೈದ್ಯರು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದರು. ಪೊಲೀಸರ ಪ್ರಕಾರ, ಶಿವಸೇನೆ ಕಾರ್ಪೊರೇಟರ್ ರಮೇಶ್ ಮ್ಹಾತ್ರೆ ಮತ್ತು ಅವರ ಬೆಂಬಲಿಗರು ಇಬ್ಬರೂ ವೈದ್ಯರು ಮತ್ತು ಇತರ ಆಸ್ಪತ್ರೆಯ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಸಾರ್ವಜನಿಕರ ಹೆಚ್ಚುತ್ತಿರುವ ಒತ್ತಡ ಮತ್ತು ಭಾರತೀಯ ವೈದ್ಯಕೀಯ ಮಂಡಳಿಯು (IMA) ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಪೊಲೀಸರು ಇಂದು ರಾತ್ರಿ ರಮೇಶ್ ಮ್ಹಾತ್ರೆ ಮತ್ತು ಇತರ ಐವರ ವಿರುದ್ಧ ಪ್ರಕರಣ ದಾಖಲಿಸಿದ್ದರು. ತಕ್ಷಣವೇ ಕಾನೂನು ಕ್ರಮ ಕೈಗೊಳ್ಳದಿದ್ದರೆ ಈ ಭಾಗದಾದ್ಯಂತ ಕ್ಲಿನಿಕ್ ಮತ್ತು ಆಸ್ಪತ್ರೆಗಳನ್ನು ಮುಚ್ಚಲಾಗುವುದು ಎಂದು ಐಎಂಎ ಎಚ್ಚರಿಕೆ ನೀಡಿತ್ತು.

ಇದನ್ನೂ ಓದಿ: ಈಗ ಉಳಿದಿರುವುದು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮಾತ್ರ; ಉದ್ಧವ್ ಠಾಕ್ರೆಗೆ ಅಮಿತ್ ಶಾ ಟಾಂಗ್

ಈ ಘಟನೆಗೆ ಕಾರಣ ಕೇಳಿ ಶಿವಸೇನಾ ಪಕ್ಷ ಕಾರ್ಪೋರೇಟರ್ ರಮೇಶ್ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಪೊಲೀಸರು ರಮೇಶ್ ಮ್ಹಾತ್ರೆ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 132 ಮತ್ತು 121(1) ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣದ ಉಳಿದ ಮೂವರು ಸಹ-ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ