AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbai Crime News: ಆಸ್ತಿ ವಿಚಾರವಾಗಿ ಇಬ್ಬರು ಸಹೋದರಿಯರಿಗೆ ವಿಷ ಹಾಕಿ ಹತ್ಯೆ; ಕೃತ್ಯವೆಸಗಲು ಆರೋಪಿ 53 ಬಾರಿ ಗೂಗಲ್ ಸರ್ಚ್ ಮಾಡಿದ್ದ

ಸೋನಾಲಿ ಅವರನ್ನು ಅಕ್ಟೋಬರ್ 16 ರಂದು ಅಲಿಬಾಗ್‌ನ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಸಮಯದಲ್ಲಿ ಅವರು ಸಾವಿಗೀಡಾಗಿದ್ದರು. ನಂತರ ಸ್ನೇಹಾ ಮರುದಿನ ಆಸ್ಪತ್ರೆಗೆ ದಾಖಲಾಗಿದ್ದಳು. ಎಸ್ಪಿ (ರಾಯಗಡ) ಸೋಮನಾಥ್ ಘರ್ಗೆ ಅವರು ಕಾಮೋಥೆಯ ಎಂಜಿಎಂ ಆಸ್ಪತ್ರೆಯ ಪೊಲೀಸರಿಗೆ ಗಣೇಶ್ ತಮ್ಮ ಸೂಪ್‌ನಲ್ಲಿ ಇಲಿ ವಿಷವನ್ನು ಬೆರೆಸಿದ್ದಾನೆ ಎಂದು ಹೇಳಿದ್ದಾರೆ.

Mumbai Crime News: ಆಸ್ತಿ ವಿಚಾರವಾಗಿ ಇಬ್ಬರು ಸಹೋದರಿಯರಿಗೆ ವಿಷ ಹಾಕಿ ಹತ್ಯೆ; ಕೃತ್ಯವೆಸಗಲು ಆರೋಪಿ 53 ಬಾರಿ ಗೂಗಲ್ ಸರ್ಚ್ ಮಾಡಿದ್ದ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Oct 25, 2023 | 12:38 PM

Share

ನವಿ ಮುಂಬೈ ಅಕ್ಟೋಬರ್ 25 : ಅಲಿಬಾಗ್‌ನ(Alibaug) 36 ವರ್ಷದ ರಾಜ್ಯ ಅರಣ್ಯ ಇಲಾಖೆ ಸಿಬ್ಬಂದಿ ಗಣೇಶ್ ಮೋಹಿತೆ ಎಂಬಾತನನ್ನು ಅಕ್ಟೋಬರ್ 15 ರಂದು ಅವರ ಮತ್ತು ಅವರ ತಾಯಿಯೊಂದಿಗೆ ಆಸ್ತಿ ವಿವಾದದ (family property dispute) ನಂತರ ಇಬ್ಬರು ಸಹೋದರಿಯರನ್ನು ಸೂಪ್‌ನಲ್ಲಿ ವಿಷ ಹಾಕಿ ಕೊಂದ (Murder Case) ಆರೋಪದ ಮೇಲೆ ಬಂಧಿಸಲಾಗಿದೆ. ಪೊಲೀಸ್ ಅಧಿಕಾರಿಯ ಪ್ರಕಾರ, ಸಹೋದರಿಯರಾದ ಸೋನಾಲಿ ಮೋಹಿತೆ (34) ಮತ್ತು ಸ್ನೇಹಾ ಮೋಹಿತೆ (30) ಅವರು ಕುಟುಂಬದ ಆಸ್ತಿಯಲ್ಲಿ ತಮ್ಮ ಪಾಲು ಕೇಳುತ್ತಿದ್ದರು.

ಸೋನಾಲಿ ಅವರನ್ನು ಅಕ್ಟೋಬರ್ 16 ರಂದು ಅಲಿಬಾಗ್‌ನ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಸಮಯದಲ್ಲಿ ಅವರು ಸಾವಿಗೀಡಾಗಿದ್ದರು. ನಂತರ ಸ್ನೇಹಾ ಮರುದಿನ ಆಸ್ಪತ್ರೆಗೆ ದಾಖಲಾಗಿದ್ದಳು. ಎಸ್ಪಿ (ರಾಯಗಡ) ಸೋಮನಾಥ್ ಘರ್ಗೆ ಅವರು ಕಾಮೋಥೆಯ ಎಂಜಿಎಂ ಆಸ್ಪತ್ರೆಯ ಪೊಲೀಸರಿಗೆ ಗಣೇಶ್ ತಮ್ಮ ಸೂಪ್‌ನಲ್ಲಿ ಇಲಿ ವಿಷವನ್ನು ಬೆರೆಸಿದ್ದಾನೆ ಎಂದು ಹೇಳಿದ್ದಾರೆ.

ಅಕ್ಟೋಬರ್ 20ರಂದು ಅವರ ತಾಯಿ ಜಯಮಾಲಾ (56) ದೂರು ದಾಖಲಿಸಿದ್ದು, ಕೆಲವು ಸಂಬಂಧಿಕರು ತಮ್ಮ ಹೆಣ್ಣು ಮಕ್ಕಳಿಗೆ ವಿಷ ಉಣಿಸಿದ್ದಾರೆ ಎಂದು ಶಂಕಿಸಿದ್ದಾರೆ. ಅದು ಕೊಲೆ ಪ್ರಕರಣವನ್ನು ದಾಖಲಿಸಿದಾಗ ಮತ್ತು ಸ್ಥಳೀಯ ಪೊಲೀಸರೊಂದಿಗೆ ಸಮಾನಾಂತರ ತನಿಖೆ ನಡೆಸಲು ಅಪರಾಧ ವಿಭಾಗಕ್ಕೆ ವಹಿಸಲಾಯಿತು. ಒಂದು ಕಡೆ ಗಣೇಶ್ ಹಾಗೂ ಇನ್ನೊಂದು ಕಡೆ ಆತನ ಸಹೋದರಿಯರು ಅವರ ತಾಯಿಯೊಂದಿಗೆ ಕೌಟುಂಬಿಕ ಕಲಹ ನಡೆಯುತ್ತಿತ್ತು ಎಂದು ತನಿಖೆ ವೇಳೆ ತಿಳಿದುಬಂದಿದೆ.

2009ರಲ್ಲಿ ಅರಣ್ಯ ಇಲಾಖೆ ಅಧಿಕಾರಿಯಾಗಿದ್ದ ಅವರ ತಂದೆ ತೀರಿಕೊಂಡ ನಂತರ ಗಣೇಶ್ ಅವರು ತಮ್ಮ ಕುಟುಂಬದ ಮನೆಯನ್ನು ಅವರ ಹೆಸರಿಗೆ ವರ್ಗಾಯಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೆ, ಮೂವರಿಗೆ ಆರ್ಥಿಕವಾಗಿ ಬೆಂಬಲ ನೀಡುವುದಾಗಿ ಭರವಸೆ ನೀಡಿ ಅನುಕಂಪದ ಆಧಾರದ ಮೇಲೆ ಅರಣ್ಯ ಇಲಾಖೆಯಲ್ಲಿ ನೌಕರಿ ಪಡೆಯಲು ಒಪ್ಪಿಗೆ ನೀಡುವಂತೆ ತಾಯಿ ಮತ್ತು ಸಹೋದರಿಯರಿಗೆ ಮನವರಿಕೆ ಮಾಡಿಕೊಟ್ಟರು. ಅವರು 2021 ರಲ್ಲಿ ಕೆಲಸ ಪಡೆದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಹೆಣ್ಣು ಭ್ರೂಣ ಲಿಂಗ ಪತ್ತೆ ಮಾಡುತ್ತಿದ್ದ ಜಾಲ ಪತ್ತೆ, ದಂಧೆಗೆ ವೈದ್ಯರೇ ಸಾಥ್

ಕೆಲವು ಹಂತದಲ್ಲಿ ಗಣೇಶ್ ತನ್ನ ತಾಯಿಯ ಬ್ಯಾಂಕ್ ಖಾತೆಯಿಂದ ಆಕೆಯ ಸಹಿಯನ್ನು ನಕಲಿ ಮಾಡಿ ಹಣ ಡ್ರಾ ಮಾಡಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಇದು ಗಣೇಶ್‌ನ ಕೋಪಕ್ಕೆ ಕಾರಣವಾದ ತಾಯಿ ತನ್ನ ಗಂಡನ ಜಾಗಕ್ಕೆ ತನ್ನ ಒಬ್ಬ ಹೆಣ್ಣು ಮಗುವನ್ನು ನೇಮಿಸಿಕೊಳ್ಳುವಂತೆ ಅರಣ್ಯ ಅಧಿಕಾರಿಗಳಿಗೆ ಮನವಿ ಮಾಡಿದ್ದಾಳೆ.

‘ಸಹೋದರಿಯರು ಸಾಯುವ ದಿನಗಳ ಹಿಂದೆ ಗಣೇಶ್ ಅವರು ವಿಷಕಾರಿ ವಸ್ತುಗಳ ಬಗ್ಗೆ ಮಾಹಿತಿಗಾಗಿ 53 ಬಾರಿ ಅಂತರ್ಜಾಲದಲ್ಲಿ ಹುಡುಕಾಟ ನಡೆಸಿದ್ದ’ ಎಂದು ಅಪರಾಧ ವಿಭಾಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲದೆ, ಆತನ ಕಾರಿನಲ್ಲಿ ಇಲಿ ವಿಷದ ಕರಪತ್ರ ಪತ್ತೆಯಾಗಿದೆ. ಗಣೇಶ್ ತನ್ನ ಸಹೋದರಿಯರಿಗೆ ವಿಷವುಣಿಸಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈತ ಬುಧವಾರದವರೆಗೆ ಪೊಲೀಸ್ ಕಸ್ಟಡಿಯಲ್ಲಿರಲಿದ್ದಾನೆ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ