AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ಸ್ಲೀಪರ್ ಬಸ್ಸಿನಲ್ಲಿ ಮಗುವಿಗೆ ಜನ್ಮ ನೀಡಿ ಕಿಟಕಿಯಿಂದ ಶಿಶುವನ್ನು ಎಸೆದ ಮಹಿಳೆ

ಬಸ್ಸಿನಲ್ಲಿ ಮಗುವಿಗೆ ಜನ್ಮ ನೀಡಿ ಕಿಟಕಿಯಿಂದ ಶಿಶುವನ್ನು ಹೊರಗೆಸೆದಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಂಗಳವಾರ ಬೆಳಗ್ಗೆ 6.30 ರ ಸುಮಾರಿಗೆ ಪತ್ರಿ-ಸೇಲು ರಸ್ತೆಯಲ್ಲಿ ಈ ಘಟನೆ ನಡೆದಿದೆ. ಸ್ಥಳೀಯ ಪೊಲೀಸರ ಪ್ರಕಾರ, ಯುವತಿ ಮತ್ತು ಆಕೆಯ ಸಹಚರರು ಸಂತ ಪ್ರಯಾಗ್ ಟ್ರಾವೆಲ್ಸ್ ಸ್ಲೀಪರ್ ಕೋಚ್ ಬಸ್‌ನಲ್ಲಿ ಪುಣೆಯಿಂದ ಪರ್ಭಾನಿಗೆ ಪ್ರಯಾಣಿಸುತ್ತಿದ್ದರು. ಪ್ರಯಾಣದ ಸಮಯದಲ್ಲಿ, ರಿತಿಕಾ ಧೇರೆ ಎಂದು ಗುರುತಿಸಲಾದ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡು ಬಸ್ಸಿನೊಳಗೆ ಮಗುವಿಗೆ ಜನ್ಮ ನೀಡಿದರು. ಅವರ ಜೊತೆ ಆಕೆಯ ಪತಿ ಎಂದು ಹೇಳಿಕೊಂಡ ಅಲ್ತಾಫ್ ಶೇಖ್ ಕೂಡ ಇದ್ದ.

ಮಹಾರಾಷ್ಟ್ರ: ಸ್ಲೀಪರ್ ಬಸ್ಸಿನಲ್ಲಿ ಮಗುವಿಗೆ ಜನ್ಮ ನೀಡಿ ಕಿಟಕಿಯಿಂದ ಶಿಶುವನ್ನು ಎಸೆದ ಮಹಿಳೆ
ಮಗು-ಸಾಂದರ್ಭಿಕ ಚಿತ್ರ Image Credit source: Adobe Stock
ನಯನಾ ರಾಜೀವ್
|

Updated on:Jul 16, 2025 | 11:21 AM

Share

ಮಹಾರಾಷ್ಟ್ರ, ಜುಲೈ 16: ಚಲಿಸುತ್ತಿರುವ ಬಸ್ಸಿನಲ್ಲೇ ಮಗು(Baby)ವಿಗೆ ಜನ್ಮ ನೀಡಿದ್ದ  ಮಹಿಳೆ ಪತಿಯ ಸಹಾಯದಿಂದ ಕಿಟಕಿಯಿಂದ ಮಗುವನ್ನು ಎಸೆದಿರುವ ಘಟನೆ ಮಹಾರಾಷ್ಟ್ರದ ಪರ್ಭಾನಿಯಲ್ಲಿ ನಡೆದಿದೆ. ಚಲಿಸುತ್ತಿರುವ ಸ್ಲೀಪರ್ಬಸ್ಸಿನಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ್ದಾಳೆ, ಪತಿ ಎಂದು ಹೇಳಿಕೊಂಡ ವ್ಯಕ್ತಿಯ ಸಹಾಯದಿಂದ ನವಜಾತ ಶಿಶುವನ್ನು ಕಿಟಕಿಯಿಂದ ಹೊರಗೆ ಎಸೆದಿದ್ದಾರೆ. ಶಿಶು ಗಂಭೀರ ಗಾಯಗಳಿಂದಾಗಿ  ಸಾವನ್ನಪ್ಪಿದೆ.

ಮಂಗಳವಾರ ಬೆಳಗ್ಗೆ 6.30 ರ ಸುಮಾರಿಗೆ ಪತ್ರಿ-ಸೇಲು ರಸ್ತೆಯಲ್ಲಿ ಈ ಘಟನೆ ನಡೆದಿದೆ. ಸ್ಥಳೀಯ ಪೊಲೀಸರ ಪ್ರಕಾರ, ಯುವತಿ ಮತ್ತು ಆಕೆಯ ಸಹಚರರು ಸಂತ ಪ್ರಯಾಗ್ ಟ್ರಾವೆಲ್ಸ್ ಸ್ಲೀಪರ್ ಕೋಚ್ ಬಸ್‌ನಲ್ಲಿ ಪುಣೆಯಿಂದ ಪರ್ಭಾನಿಗೆ ಪ್ರಯಾಣಿಸುತ್ತಿದ್ದರು. ಪ್ರಯಾಣದ ಸಮಯದಲ್ಲಿ, ರಿತಿಕಾ ಧೇರೆ ಎಂದು ಗುರುತಿಸಲಾದ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡು ಬಸ್ಸಿನೊಳಗೆ ಮಗುವಿಗೆ ಜನ್ಮ ನೀಡಿದರು. ಅವರ ಜೊತೆ ಆಕೆಯ ಪತಿ ಎಂದು ಹೇಳಿಕೊಂಡ ಅಲ್ತಾಫ್ ಶೇಖ್ ಕೂಡ ಇದ್ದ.

ಹೆರಿಗೆಯಾದ ಸ್ವಲ್ಪ ಸಮಯದ ನಂತರ, ದಂಪತಿ ನವಜಾತ ಶಿಶುವನ್ನು ಬಟ್ಟೆಯಲ್ಲಿ ಸುತ್ತಿ ಬಸ್ಸಿನ ಕಿಟಕಿಯಿಂದ ಹೊರಗೆ ಎಸೆದಿದ್ದರು ಎಂದು ಆರೋಪಿಸಲಾಗಿದೆ. ಆರಂಭದಲ್ಲಿ, ಬಸ್ ಪ್ರಯಾಣದಿಂದ ಮಹಿಳೆ ವಾಂತಿ ಮಾಡಿಕೊಂಡಿದ್ದಾಳೆ ಎಂದು ಅವರು ಇತರ ಪ್ರಯಾಣಿಕರು ಮತ್ತು ಬಸ್ ಚಾಲಕರಿಗೆ ತಿಳಿಸಿದರು. ಬಸ್ಸಿನ ಹಿಂದೆ ಪ್ರಯಾಣಿಸುತ್ತಿದ್ದ ಮೋಟಾರ್ ಸೈಕಲ್ ಸವಾರನೊಬ್ಬ ಕಿಟಕಿಯಿಂದ ಅನುಮಾನಾಸ್ಪದವಾಗಿ ಏನೋ ಎಸೆದಿರುವುದನ್ನು ಗಮನಿಸಿದ್ದಾರೆ.

ಮತ್ತಷ್ಟು ಓದಿ:  ನವಜಾತ ಶಿಶು ಕೊಲೆ ಪ್ರಕರಣ: ಬಂಧಿತ ಮಹಿಳೆಯಿಂದ ಕ್ಷಣಕ್ಕೊಂದು ಹೇಳಿಕೆ; ಶಿಶು, ಮಹಿಳೆಯ ಡಿಎನ್​ಎ ಪರೀಕ್ಷೆಗೆ ನಿರ್ಧಾರ

ಬಟ್ಟೆಯಲ್ಲಿ ಸುತ್ತಿಕೊಂಡಿದ್ದ ನವಜಾತ ಶಿಶುವನ್ನು ಕಂಡು ಆಘಾತಕ್ಕೊಳಗಾಗಿ ತಕ್ಷಣ ತುರ್ತು ಸಹಾಯವಾಣಿ (112) ಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದರು.

ಸ್ಥಳೀಯ ಪೊಲೀಸ್ ಗಸ್ತು ತಂಡವು ಬಸ್ ಅನ್ನು ತಡೆದು ಪ್ರಾಥಮಿಕ ವಿಚಾರಣೆಯ ನಂತರ ದಂಪತಿಯನ್ನು ಬಂಧಿಸಿತು. ವಿಚಾರಣೆಯ ಸಮಯದಲ್ಲಿ, ಮಗುವನ್ನು ಬೆಳೆಸಲು ತಮಗೆ ಸಾಧ್ಯವಿಲ್ಲ ಎಂದು ಹೇಳಿ ಮಗುವನ್ನು ಎಸೆದಿದ್ದಾಗಿ ಇಬ್ಬರೂ ಒಪ್ಪಿಕೊಂಡರು. ಚಲಿಸುವ ಬಸ್ಸಿನಿಂದ ಬಿದ್ದ ಪರಿಣಾಮ ಶಿಶು ಸಾವನ್ನಪ್ಪಿದೆ.

ದಂಪತಿ ಪತಿ-ಪತ್ನಿ ಎಂದು ಹೇಳಿಕೊಂಡು ಕಳೆದ ಒಂದೂವರೆ ವರ್ಷಗಳಿಂದ ಪುಣೆಯಲ್ಲಿ ವಾಸಿಸುತ್ತಿದ್ದರು ಆದರೆ ವೈವಾಹಿಕ ಸ್ಥಿತಿಯನ್ನು ದೃಢೀಕರಿಸುವ ಯಾವುದೇ ದಾಖಲೆಯನ್ನು ಅವರಿಗೆ ಪ್ರಸ್ತುತಪಡಿಸಲು ಸಾಧ್ಯವಾಗಿಲ್ಲ. ಘಟನೆಯ ನಂತರ ಮಹಿಳೆಯನ್ನು ಪೊಲೀಸರು ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:18 am, Wed, 16 July 25

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!