AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: 12ನೇ ಮಹಡಿಯಿಂದ ಬಿದ್ದು 3 ವರ್ಷದ ಬಾಲಕಿ ಸಾವು

ವಸತಿ ಕಟ್ಟಡದ 12ನೇ ಮಹಡಿಯಿಂದ ಬಿದ್ದು 3 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮೃತ ಬಾಲಕಿ ಪಾಲ್ಘರ್ ಜಿಲ್ಲೆಯ ವಸಾಯಿಯ ನಲಸೋಪರಾ ಪೂರ್ವದಲ್ಲಿ ವಾಸವಿರುವ ಎಲೆಕ್ಟ್ರಿಷಿಯನ್ ಅವರ ಪುತ್ರಿ. ನೈಗಾಂವ್ ಪೊಲೀಸ್ ಠಾಣೆಯಲ್ಲಿ ಸಲ್ಲಿಸಲಾದ ಪೊಲೀಸ್ ವರದಿಯ ಪ್ರಕಾರ, ಈ ಘಟನೆ ಜುಲೈ 22 ರಂದು ರಾತ್ರಿ 8.20 ರ ಸುಮಾರಿಗೆ ಸಂಭವಿಸಿದೆ.

ಮಹಾರಾಷ್ಟ್ರ: 12ನೇ ಮಹಡಿಯಿಂದ ಬಿದ್ದು 3 ವರ್ಷದ ಬಾಲಕಿ  ಸಾವು
ಮಗುImage Credit source: Shutterstock
ನಯನಾ ರಾಜೀವ್
|

Updated on: Jul 24, 2025 | 2:19 PM

Share

ಪುಣೆ, ಜುಲೈ 24: ವಸತಿ ಕಟ್ಟಡದ 12ನೇ ಮಹಡಿಯಿಂದ ಬಿದ್ದು 3 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮೃತ ಬಾಲಕಿ ಪಾಲ್ಘರ್ ಜಿಲ್ಲೆಯ ವಸಾಯಿಯ ನಲಸೋಪರಾ ಪೂರ್ವದಲ್ಲಿ ವಾಸವಿರುವ ಎಲೆಕ್ಟ್ರಿಷಿಯನ್ ಅವರ ಪುತ್ರಿ. ನೈಗಾಂವ್ ಪೊಲೀಸ್ ಠಾಣೆಯಲ್ಲಿ ಸಲ್ಲಿಸಲಾದ ಪೊಲೀಸ್ ವರದಿಯ ಪ್ರಕಾರ, ಈ ಘಟನೆ ಜುಲೈ 22 ರಂದು ರಾತ್ರಿ 8.20 ರ ಸುಮಾರಿಗೆ ಸಂಭವಿಸಿದೆ.

ಕಟ್ಟಡದ ಅದೇ ಮಹಡಿಯಲ್ಲಿ ವಾಸವಾಗಿದ್ದ ಸಂಬಂಧಿಕರನ್ನು ಭೇಟಿ ಮಾಡಲು ಬಾಲಕಿ ತನ್ನ ಪೋಷಕರೊಂದಿಗೆ ಹೋಗಿತ್ತು. ಕುಟುಂಬ ಸದಸ್ಯರು ಮನೆಗೆ ಹಿಂದಿರುಗಲು ಸಿದ್ಧರಾದಾಗ ಬಾಲಕಿಯನ್ನು ಚಪ್ಪಲಿ ಸ್ಟ್ಯಾಂಡ್​ ಮೇಲೆ ನಿಲ್ಲಿಸಲಾಗಿತ್ತು. ಆಗ ಪೋಷಕರು ಆಕೆಯ ಕಾಲಿಗೆ ಶೂ ಧರಿಸಲು ಸಹಾಯ ಮಾಡುತ್ತಿದ್ದರು. ಆಗ ಬಾಲಕಿ ಸಮತೋಲನ ಕಳೆದುಕೊಂಡು ಹಿಂದಕ್ಕೆ ಬಾಗಿದ್ದಾಳೆ.ಆಗ 12ನೇ ಮಹಡಿಯ ಕಾರಿಡಾರ್​ನಿಂದ ಕೆಳಗೆ ಬಿದ್ದು ಗಂಭೀರ ಗಾಯವಾಗಿತ್ತು.

ತಕ್ಷಣ ಆಕೆಯನ್ನು ವಸಾಯಿಯಲ್ಲಿರುವ ಡಿಎಂ ಪೆಟಿಟ್ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ವೈದ್ಯರು ಆಕೆಯನ್ನು ಆಸ್ಪತ್ರೆಗೆ ತರುವಷ್ಟರಲ್ಲಿ ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ಹೇಳಿದ್ದಾರೆ.ಮಗುವಿನ ತಂದೆ ಈ ಘಟನೆ ಸಂಪೂರ್ಣವಾಗಿ ಆಕಸ್ಮಿಕವಾಗಿದ್ದು, ಇದಕ್ಕೆ ಯಾರನ್ನೂ ಹೊಣೆಗಾರರನ್ನಾಗಿ ಮಾಡಲ್ಲ ಎಂದು ಹೇಳಿದ್ದಾರೆ. ಯಾವುದೇ ದೂರು ದಾಖಲಾಗಿಲ್ಲ ಮತ್ತು ಇದರಲ್ಲಿ ಯಾವುದೇ ರೀತಿಯ ಅಕ್ರಮ ನಡೆದಿರುವ ಶಂಕೆ ವ್ಯಕ್ತವಾಗಿಲ್ಲ.

ಮತ್ತಷ್ಟು ಓದಿ: ಬೆಂಗಳೂರು: 20ನೇ ಮಹಡಿಯಿಂದ ಬಿದ್ದು 15 ವರ್ಷದ ಬಾಲಕಿ ಸಾವು

ಸಿಆರ್‌ಪಿಸಿ ಸೆಕ್ಷನ್ 174 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ನಯಾ ಗಾಂವ್ ಪೊಲೀಸ್ ಠಾಣೆಯ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ದೇವದಾಸ್ ಪಾಟೀಲ್ ಅವರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಈ ದುರಂತ ಸಾವು ಸ್ಥಳೀಯ ಸಮುದಾಯವನ್ನು ಆಘಾತಕ್ಕೆ ದೂಡಿದ್ದು, ಬಹುಮಹಡಿ ವಸತಿ ಕಟ್ಟಡಗಳಲ್ಲಿ ಮಕ್ಕಳ ಸುರಕ್ಷತಾ ಕ್ರಮಗಳ ಬಗ್ಗೆ ಮತ್ತೊಮ್ಮೆ ಕಳವಳ ವ್ಯಕ್ತಪಡಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?