AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: 12ನೇ ಮಹಡಿಯಿಂದ ಬಿದ್ದು 3 ವರ್ಷದ ಬಾಲಕಿ ಸಾವು

ವಸತಿ ಕಟ್ಟಡದ 12ನೇ ಮಹಡಿಯಿಂದ ಬಿದ್ದು 3 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮೃತ ಬಾಲಕಿ ಪಾಲ್ಘರ್ ಜಿಲ್ಲೆಯ ವಸಾಯಿಯ ನಲಸೋಪರಾ ಪೂರ್ವದಲ್ಲಿ ವಾಸವಿರುವ ಎಲೆಕ್ಟ್ರಿಷಿಯನ್ ಅವರ ಪುತ್ರಿ. ನೈಗಾಂವ್ ಪೊಲೀಸ್ ಠಾಣೆಯಲ್ಲಿ ಸಲ್ಲಿಸಲಾದ ಪೊಲೀಸ್ ವರದಿಯ ಪ್ರಕಾರ, ಈ ಘಟನೆ ಜುಲೈ 22 ರಂದು ರಾತ್ರಿ 8.20 ರ ಸುಮಾರಿಗೆ ಸಂಭವಿಸಿದೆ.

ಮಹಾರಾಷ್ಟ್ರ: 12ನೇ ಮಹಡಿಯಿಂದ ಬಿದ್ದು 3 ವರ್ಷದ ಬಾಲಕಿ  ಸಾವು
ಮಗುImage Credit source: Shutterstock
ನಯನಾ ರಾಜೀವ್
|

Updated on: Jul 24, 2025 | 2:19 PM

Share

ಪುಣೆ, ಜುಲೈ 24: ವಸತಿ ಕಟ್ಟಡದ 12ನೇ ಮಹಡಿಯಿಂದ ಬಿದ್ದು 3 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮೃತ ಬಾಲಕಿ ಪಾಲ್ಘರ್ ಜಿಲ್ಲೆಯ ವಸಾಯಿಯ ನಲಸೋಪರಾ ಪೂರ್ವದಲ್ಲಿ ವಾಸವಿರುವ ಎಲೆಕ್ಟ್ರಿಷಿಯನ್ ಅವರ ಪುತ್ರಿ. ನೈಗಾಂವ್ ಪೊಲೀಸ್ ಠಾಣೆಯಲ್ಲಿ ಸಲ್ಲಿಸಲಾದ ಪೊಲೀಸ್ ವರದಿಯ ಪ್ರಕಾರ, ಈ ಘಟನೆ ಜುಲೈ 22 ರಂದು ರಾತ್ರಿ 8.20 ರ ಸುಮಾರಿಗೆ ಸಂಭವಿಸಿದೆ.

ಕಟ್ಟಡದ ಅದೇ ಮಹಡಿಯಲ್ಲಿ ವಾಸವಾಗಿದ್ದ ಸಂಬಂಧಿಕರನ್ನು ಭೇಟಿ ಮಾಡಲು ಬಾಲಕಿ ತನ್ನ ಪೋಷಕರೊಂದಿಗೆ ಹೋಗಿತ್ತು. ಕುಟುಂಬ ಸದಸ್ಯರು ಮನೆಗೆ ಹಿಂದಿರುಗಲು ಸಿದ್ಧರಾದಾಗ ಬಾಲಕಿಯನ್ನು ಚಪ್ಪಲಿ ಸ್ಟ್ಯಾಂಡ್​ ಮೇಲೆ ನಿಲ್ಲಿಸಲಾಗಿತ್ತು. ಆಗ ಪೋಷಕರು ಆಕೆಯ ಕಾಲಿಗೆ ಶೂ ಧರಿಸಲು ಸಹಾಯ ಮಾಡುತ್ತಿದ್ದರು. ಆಗ ಬಾಲಕಿ ಸಮತೋಲನ ಕಳೆದುಕೊಂಡು ಹಿಂದಕ್ಕೆ ಬಾಗಿದ್ದಾಳೆ.ಆಗ 12ನೇ ಮಹಡಿಯ ಕಾರಿಡಾರ್​ನಿಂದ ಕೆಳಗೆ ಬಿದ್ದು ಗಂಭೀರ ಗಾಯವಾಗಿತ್ತು.

ತಕ್ಷಣ ಆಕೆಯನ್ನು ವಸಾಯಿಯಲ್ಲಿರುವ ಡಿಎಂ ಪೆಟಿಟ್ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ವೈದ್ಯರು ಆಕೆಯನ್ನು ಆಸ್ಪತ್ರೆಗೆ ತರುವಷ್ಟರಲ್ಲಿ ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ಹೇಳಿದ್ದಾರೆ.ಮಗುವಿನ ತಂದೆ ಈ ಘಟನೆ ಸಂಪೂರ್ಣವಾಗಿ ಆಕಸ್ಮಿಕವಾಗಿದ್ದು, ಇದಕ್ಕೆ ಯಾರನ್ನೂ ಹೊಣೆಗಾರರನ್ನಾಗಿ ಮಾಡಲ್ಲ ಎಂದು ಹೇಳಿದ್ದಾರೆ. ಯಾವುದೇ ದೂರು ದಾಖಲಾಗಿಲ್ಲ ಮತ್ತು ಇದರಲ್ಲಿ ಯಾವುದೇ ರೀತಿಯ ಅಕ್ರಮ ನಡೆದಿರುವ ಶಂಕೆ ವ್ಯಕ್ತವಾಗಿಲ್ಲ.

ಮತ್ತಷ್ಟು ಓದಿ: ಬೆಂಗಳೂರು: 20ನೇ ಮಹಡಿಯಿಂದ ಬಿದ್ದು 15 ವರ್ಷದ ಬಾಲಕಿ ಸಾವು

ಸಿಆರ್‌ಪಿಸಿ ಸೆಕ್ಷನ್ 174 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ನಯಾ ಗಾಂವ್ ಪೊಲೀಸ್ ಠಾಣೆಯ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ದೇವದಾಸ್ ಪಾಟೀಲ್ ಅವರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಈ ದುರಂತ ಸಾವು ಸ್ಥಳೀಯ ಸಮುದಾಯವನ್ನು ಆಘಾತಕ್ಕೆ ದೂಡಿದ್ದು, ಬಹುಮಹಡಿ ವಸತಿ ಕಟ್ಟಡಗಳಲ್ಲಿ ಮಕ್ಕಳ ಸುರಕ್ಷತಾ ಕ್ರಮಗಳ ಬಗ್ಗೆ ಮತ್ತೊಮ್ಮೆ ಕಳವಳ ವ್ಯಕ್ತಪಡಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!