AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ ದುರಂತ: ಬೆಟ್ಟದ ಅಂಚಿನಲ್ಲಿ ನಿಂತಿದ್ದ ಮಗನನ್ನು ರಕ್ಷಿಸಲು ಹೋಗಿ ತಂದೆ-ತಾಯಿ ಸೇರಿ ಮೂವರು ಸಾವು

ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ ಬೆಟ್ಟದ ಅಂಚಿನಲ್ಲಿ ನಿಂತಿದ್ದ 18 ವರ್ಷದ ಮಗನನ್ನು ರಕ್ಷಿಸಲು ಹೋಗಿ ತಂದೆ-ತಾಯಿ ಇಬ್ಬರೂ ಕಣಿವೆಗೆ ಬಿದ್ದು ಮೃತಪಟ್ಟ ದಾರುಣ ಘಟನೆ ನಡೆದಿದೆ. ಪೊಲೀಸರು, ಸಾರ್ವಜನಿಕರ ಸಮ್ಮುಖದಲ್ಲಿಯೇ ಘಟನೆ ನಡೆದಿದೆ. ಮಗನ ರಕ್ಷಣೆಗೆ ಹೋಗಿದ್ದ ತಂದೆಯೂ ಆತನ ಜೊತೆಗೆ ಕಣಿವೆಗೆ ಬಿದ್ದಿದ್ದರೆ, ಆ ಬಳಿಕ ತಾಯಿಯೂ ದುರಂತ ಅಂತ್ಯ ಕಂಡಿದ್ದಾರೆ.

ಮಹಾರಾಷ್ಟ್ರದಲ್ಲಿ ದುರಂತ: ಬೆಟ್ಟದ ಅಂಚಿನಲ್ಲಿ ನಿಂತಿದ್ದ ಮಗನನ್ನು ರಕ್ಷಿಸಲು ಹೋಗಿ ತಂದೆ-ತಾಯಿ ಸೇರಿ ಮೂವರು ಸಾವು
ಮಗನನ್ನು ರಕ್ಷಿಸಲು ಹೋಗಿ ತಂದೆ-ತಾಯಿ ಸೇರಿ ಮೂವರು ಸಾವು
ಪ್ರಸನ್ನ ಹೆಗಡೆ
|

Updated on: Aug 21, 2026 | 4:57 PM

Share

ಮುಂಬೈ, ಆಗಸ್ಟ್​​ 21: ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಬೆಟ್ಟದ ಅಂಚಿನಲ್ಲಿ ನಿಂತು ನಾನು ಜಿಗಿಯುತ್ತೇನೆ ಎಂದು ಪದೇ ಪದೇ ಬೆದರಿಕೆ ಹಾಕುತ್ತಿದ್ದ 18 ವರ್ಷದ ಯುವಕನನ್ನು ರಕ್ಷಿಸಲು ಮುಂದಾದ ತಂದೆ-ತಾಯಿ ಸಹ ಮಗನ ಜೊತೆ ಕಣಿವೆಗೆ ಬಿದ್ದು ಮೃತಪಟ್ಟಿದ್ದಾರೆ. ಖಾವ್ಡಾ ಬೆಟ್ಟದಲ್ಲಿ ಶುಕ್ರವಾರ ಬೆಳಿಗ್ಗೆ ಘಟನೆ ನಡೆದಿದ್ದು, ಸುಮಾರು ಮೂರು ಗಂಟೆಗಳ ಕಾಲ ಪೋಷಕರು, ಗ್ರಾಮಸ್ಥರು ಹಾಗೂ ಪೊಲೀಸರು ಯುವಕನನ್ನು ಸುರಕ್ಷಿತ ಸ್ಥಳಕ್ಕೆ ಬರಲು ಮನವೊಲಿಸಲು ಪ್ರಯತ್ನಿಸಿದ ಹೊರತಾಗಿಯೂ ದುರಂತ ಸಂಭವಿಸಿದೆ.

ಮನವೊಲಿಕೆ ಪ್ರಯತ್ನ ವಿಫಲ

ಬೆಳಿಗ್ಗೆ ಸುಮಾರು 10 ಗಂಟೆಗೆ ದೇವ್ಲಾಯಿ ಪ್ರದೇಶದ ನಿವಾಸಿಯಾಗಿದ್ದ 18 ವರ್ಷದ ಯುವಕ ಬೆಟ್ಟದ ಅಂಚಿಗೆ ತೆರಳಿ ಜಿಗಿಯುವುದಾಗಿ ಹೇಳತೊಡಗಿದ್ದ. ಮುಂದಿನ ಮೂರು ಗಂಟೆಗಳ ಕಾಲ ತಾಯಿ ಹಾಗೂ ಗ್ರಾಮಸ್ಥರು ಆತನ ಭವಿಷ್ಯ, ಪೋಷಕರ ಬಗ್ಗೆ ಯೋಚಿಸುವಂತೆ ಮನವಿ ಮಾಡಿದ್ದರು. ಹೀಗಿದ್ದರೂ ಆತ ಮಾತ್ರ ತನ್ನ ನಿರ್ಧಾರ ಬದಲಿಸಿರಲಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: ಹೋಂವರ್ಕ್ ಮಾಡಿಲ್ಲವೆಂದು ಕೆನ್ನೆಗೆ ಬಾರಿಸಿದ ಟೀಚರ್; ಕುಸಿದುಬಿದ್ದು ಪ್ರಾಣಬಿಟ್ಟ 6 ವರ್ಷದ ಮಗು!

ಕೊನೇ ಕ್ಷಣದಲ್ಲಿ ಆಗಿದ್ದೇನು?

ಕೊನೆಯ 15-20 ನಿಮಿಷಗಳಲ್ಲಿ ಇದುವರೆಗೆ ಕೆಳಗಿನಿಂದ ಮನವಿ ಮಾಡುತ್ತಿದ್ದ ತಂದೆ ಬೆಟ್ಟದ ಮೇಲಕ್ಕೆ ಹತ್ತಿದರು. ಮಧ್ಯಾಹ್ನ ಸುಮಾರು 1 ಗಂಟೆಗೆ, ಮಗನನ್ನು ಅಂಚಿನಿಂದ ದೂರ ಎಳೆಯಲು ಯತ್ನಿಸಿದ ವೇಳೆ ಇಬ್ಬರೂ ಸಮತೋಲನ ಕಳೆದುಕೊಂಡು ಕಣಿವೆಗೆ ಬಿದ್ದಾರೆ. ಈ ದೃಶ್ಯ ಕಂಡು ಗಾಬರಿಗೊಂಡ ತಾಯಿಯೂ ಕೆಲವೇ ಕ್ಷಣಗಳಲ್ಲಿ ಕಣಿವೆಗೆ ಬಿದ್ದಿದ್ದು, ಮೂವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪೋಷಕರು ಮತ್ತು ಗ್ರಾಮಸ್ಥರು ಆತನನ್ನು ಸಮಾಧಾನಪಡಿಸಲು ಸಾಕಷ್ಟು ಪ್ರಯತ್ನಿಸಿದರು. ತಾಯಿ ನಿರಂತರವಾಗಿ ಜಿಗಿಯಬೇಡ ಎಂದು ಬೇಡಿಕೊಳ್ಳುತ್ತಿದ್ದರು. ಪೊಲೀಸರು ಸಹ ಸ್ಥಳದಲ್ಲೇ ಇದ್ದರು ಎಂದು ಪ್ರತ್ಯಕ್ಷದರ್ಶಿ ಸಂಜಯ್ ಜಾಧವ್ ಎಂಬವರು ತಿಳಿಸಿರೋದಾಗಿ ಎನ್​​ಡಿಟಿವಿ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!