AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿಯಿಂದ ವಿಚ್ಛೇದನ ಪಡೆದು ಹೆಚ್ಚಿನ ಪರಿಹಾರ ಹಣಕ್ಕಾಗಿ ಆತನನ್ನೇ ಅಪಹರಿಸಿದ ಪತ್ನಿ

ವಿಚ್ಛೇದನದ ಬಳಿಕ ಪತಿಯಿಂದ ಹೆಚ್ಚಿನ ಪರಿಹಾರ ಪಡೆಯುವ ದೃಷ್ಟಿಯಿಂದ ಮಹಿಳೆ ಆತನನ್ನು ಅಪಹರಿಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಪತಿಯಿಂದ ವಿಚ್ಛೇದನ ಪಡೆದು ಹೆಚ್ಚಿನ ಪರಿಹಾರ ಹಣಕ್ಕಾಗಿ ಆತನನ್ನೇ ಅಪಹರಿಸಿದ ಪತ್ನಿ
ಅಪಹರಣImage Credit source: Lawctopus
ನಯನಾ ರಾಜೀವ್
|

Updated on: Sep 30, 2024 | 2:40 PM

Share

ವಿಚ್ಛೇದನ ಪಡೆದಿದ್ದ ಮಹಿಳೆ ಮಾಜಿ ಪತಿಯಿಂದ ಹೆಚ್ಚಿನ ಪರಿಹಾರ ಹಣ ಪಡೆಯಲು ಆತನನ್ನೇ ಅಪಹರಿಸಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಪತಿ ಉಲ್ಲಾಸ್​ನಗರ ಪ್ರದೇಶದ ಪಂಜಾಬಿ ಕಾಲೊನಿಯ ನಿವಾಸಿಯಾಗಿದ್ದಾರೆ. ಜೂನ್ 20ರಂದು ಅಂಗಡಿಯಿಂದ ಸಾಮಾನುಗಳನ್ನು ಕೊಳ್ಳಲು ಹೊರಬಂದಾಗ ಗುಂಪೊಂದು ಅವರನ್ನು ಅಪಹರಿಸಿತ್ತು.

ವಿಚ್ಛೇದಿತ ಪತ್ನಿಯ ಒತ್ತಾಯದ ಮೇರೆಗೆ ವ್ಯಕ್ತಿಯನ್ನು ಕಿಡ್ನಾಪ್ ಮಾಡಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ವಿಚ್ಛೇದಿತ ಪತ್ನಿಗೆ ನೀಡುವ ಪರಿಹಾರ ಮೊತ್ತವನ್ನು 15 ಲಕ್ಷದಿಂದ 20 ಲಕ್ಷ ರೂ.ಗೆ ಹೆಚ್ಚಿಸುವಂತೆ ಗ್ಯಾಂಗ್ ಬೆದರಿಕೆ ಹಾಕಿತ್ತು.

ಆ ವ್ಯಕ್ತಿ ಅಷ್ಟು ಹಣ ಕೊಡಲು ಸಾಧ್ಯವಿಲ್ಲ ಎಂದು ಹೇಳಿದಾಗ ಗ್ಯಾಂಗ್ ಅವರನ್ನು ಅಪಹರಿಸಿ ಏಕಾಂತ ಸ್ಥಳಕ್ಕೆ ಕರೆದೊಯ್ದಿತ್ತು ಎಂದು ಉಲ್ಲಾಸ್‌ನಗರದ ಸೆಂಟ್ರಲ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವ್ಯಕ್ತಿಯನ್ನು ಸೆಪ್ಟೆಂಬರ್ 28 ರವರೆಗೆ ಪಾಳುಬಿದ್ದ ಮನೆಯೊಂದರಲ್ಲಿ ಬಂಧಿಯಾಗಿರಿಸಲಾಯಿತು ಮತ್ತು ಅವನು ತಪ್ಪಿಸಿಕೊಳ್ಳದಂತೆ ನೋಡಿಕೊಳ್ಳಲು ಇನ್ನಿಬ್ಬರನ್ನು ಉಸ್ತುವಾರಿ ವಹಿಸಲಾಯಿತು. ತನ್ನ ಪತ್ನಿಗೆ ಪರಿಹಾರ ಮೊತ್ತವನ್ನು ಹೆಚ್ಚಿಗೆ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದರು.

ಮತ್ತಷ್ಟು ಓದಿ: ಮಗುವಾಗಿದ್ದಾಗ ಅಪಹರಣ, ತನ್ನ ಪ್ರಕರಣದ ಆರೋಪಿಗಳಿಗೆ 17 ವರ್ಷಗಳ ಬಳಿಕ ಶಿಕ್ಷೆ ಕೊಡಿಸಿದ ವಕೀಲ

ಹೇಗೋ ಅವರು ಅಪಹರಣಕಾರರ ಬಿಗಿಮುಷ್ಟಿಯಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ವ್ಯಕ್ತಿಯ ದೂರಿನ ಆಧಾರದ ಮೇಲೆ ಥಾಣೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪತ್ನಿ, ಆಕೆಯ ಸಹೋದರ ಮತ್ತು ಇತರ ನಾಲ್ವರು ಸಂಬಂಧಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?