ಪತಿಯಿಂದ ವಿಚ್ಛೇದನ ಪಡೆದು ಹೆಚ್ಚಿನ ಪರಿಹಾರ ಹಣಕ್ಕಾಗಿ ಆತನನ್ನೇ ಅಪಹರಿಸಿದ ಪತ್ನಿ

ವಿಚ್ಛೇದನದ ಬಳಿಕ ಪತಿಯಿಂದ ಹೆಚ್ಚಿನ ಪರಿಹಾರ ಪಡೆಯುವ ದೃಷ್ಟಿಯಿಂದ ಮಹಿಳೆ ಆತನನ್ನು ಅಪಹರಿಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಪತಿಯಿಂದ ವಿಚ್ಛೇದನ ಪಡೆದು ಹೆಚ್ಚಿನ ಪರಿಹಾರ ಹಣಕ್ಕಾಗಿ ಆತನನ್ನೇ ಅಪಹರಿಸಿದ ಪತ್ನಿ
ಅಪಹರಣ
Image Credit source: Lawctopus

Updated on: Sep 30, 2024 | 2:40 PM

ವಿಚ್ಛೇದನ ಪಡೆದಿದ್ದ ಮಹಿಳೆ ಮಾಜಿ ಪತಿಯಿಂದ ಹೆಚ್ಚಿನ ಪರಿಹಾರ ಹಣ ಪಡೆಯಲು ಆತನನ್ನೇ ಅಪಹರಿಸಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಪತಿ ಉಲ್ಲಾಸ್​ನಗರ ಪ್ರದೇಶದ ಪಂಜಾಬಿ ಕಾಲೊನಿಯ ನಿವಾಸಿಯಾಗಿದ್ದಾರೆ. ಜೂನ್ 20ರಂದು ಅಂಗಡಿಯಿಂದ ಸಾಮಾನುಗಳನ್ನು ಕೊಳ್ಳಲು ಹೊರಬಂದಾಗ ಗುಂಪೊಂದು ಅವರನ್ನು ಅಪಹರಿಸಿತ್ತು.

ವಿಚ್ಛೇದಿತ ಪತ್ನಿಯ ಒತ್ತಾಯದ ಮೇರೆಗೆ ವ್ಯಕ್ತಿಯನ್ನು ಕಿಡ್ನಾಪ್ ಮಾಡಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ವಿಚ್ಛೇದಿತ ಪತ್ನಿಗೆ ನೀಡುವ ಪರಿಹಾರ ಮೊತ್ತವನ್ನು 15 ಲಕ್ಷದಿಂದ 20 ಲಕ್ಷ ರೂ.ಗೆ ಹೆಚ್ಚಿಸುವಂತೆ ಗ್ಯಾಂಗ್ ಬೆದರಿಕೆ ಹಾಕಿತ್ತು.

ಆ ವ್ಯಕ್ತಿ ಅಷ್ಟು ಹಣ ಕೊಡಲು ಸಾಧ್ಯವಿಲ್ಲ ಎಂದು ಹೇಳಿದಾಗ ಗ್ಯಾಂಗ್ ಅವರನ್ನು ಅಪಹರಿಸಿ ಏಕಾಂತ ಸ್ಥಳಕ್ಕೆ ಕರೆದೊಯ್ದಿತ್ತು ಎಂದು ಉಲ್ಲಾಸ್‌ನಗರದ ಸೆಂಟ್ರಲ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವ್ಯಕ್ತಿಯನ್ನು ಸೆಪ್ಟೆಂಬರ್ 28 ರವರೆಗೆ ಪಾಳುಬಿದ್ದ ಮನೆಯೊಂದರಲ್ಲಿ ಬಂಧಿಯಾಗಿರಿಸಲಾಯಿತು ಮತ್ತು ಅವನು ತಪ್ಪಿಸಿಕೊಳ್ಳದಂತೆ ನೋಡಿಕೊಳ್ಳಲು ಇನ್ನಿಬ್ಬರನ್ನು ಉಸ್ತುವಾರಿ ವಹಿಸಲಾಯಿತು. ತನ್ನ ಪತ್ನಿಗೆ ಪರಿಹಾರ ಮೊತ್ತವನ್ನು ಹೆಚ್ಚಿಗೆ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದರು.

ಮತ್ತಷ್ಟು ಓದಿ: ಮಗುವಾಗಿದ್ದಾಗ ಅಪಹರಣ, ತನ್ನ ಪ್ರಕರಣದ ಆರೋಪಿಗಳಿಗೆ 17 ವರ್ಷಗಳ ಬಳಿಕ ಶಿಕ್ಷೆ ಕೊಡಿಸಿದ ವಕೀಲ

ಹೇಗೋ ಅವರು ಅಪಹರಣಕಾರರ ಬಿಗಿಮುಷ್ಟಿಯಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ವ್ಯಕ್ತಿಯ ದೂರಿನ ಆಧಾರದ ಮೇಲೆ ಥಾಣೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪತ್ನಿ, ಆಕೆಯ ಸಹೋದರ ಮತ್ತು ಇತರ ನಾಲ್ವರು ಸಂಬಂಧಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us