AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ಮದುವೆಗೆ ಒಪ್ಪದಿದ್ದಕ್ಕೆ ಪ್ರಿಯಕರನ ಮರ್ಮಾಂಗಕ್ಕೆ ಚಾಕುವಿನಿಂದ ಇರಿದ ಯುವತಿ

ಗೆಳೆಯ ಮದುವೆಗೆ ಒಪ್ಪಿಲ್ಲ ಎಂದು ಯುವತಿ ಆತನ ಮರ್ಮಾಂಗಕ್ಕೆ ಚಾಕುವಿನಿಂದ ಇರಿದಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಇಷ್ಟು ವರ್ಷಗಳ ಕಾಲ ಪ್ರೀತಿಸಿದ್ದ ಪ್ರಿಯಕರ ತನಗೆ ಸಿಗುವುದಿಲ್ಲ ಎಂದು ಕೋಪಗೊಂಡ ಯುವತಿ ಆತನ ಮೇಲೆ ಹಲ್ಲೆ ನಡೆಸಿದ್ದಾಳೆ.

ಮಹಾರಾಷ್ಟ್ರ: ಮದುವೆಗೆ ಒಪ್ಪದಿದ್ದಕ್ಕೆ ಪ್ರಿಯಕರನ ಮರ್ಮಾಂಗಕ್ಕೆ ಚಾಕುವಿನಿಂದ ಇರಿದ ಯುವತಿ
ಪೊಲೀಸ್​Image Credit source: India Today
ನಯನಾ ರಾಜೀವ್
|

Updated on: Aug 21, 2024 | 10:31 AM

Share

ಮದುವೆಗೆ ಒಪ್ಪದಿದ್ದಕ್ಕೆ ಯುವತಿಯೊಬ್ಬಳು ಪ್ರಿಯಕರನ ಮರ್ಮಾಂಗಕ್ಕೆ ಚಾಕುವಿನಿಂದ ಇರಿದಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಆಗಸ್ಟ್ 16 ರಂದು ಭಿವಂಡಿಯಲ್ಲಿ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪದ್ಮಾ ನಗರ ಪ್ರದೇಶದ ತನ್ನ ಮನೆಯಲ್ಲಿ ಮಹಿಳೆ ತನ್ನ 31 ವರ್ಷದ ಗೆಳೆಯನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾಳೆ. ತನ್ನನ್ನು ಮದುವೆಯಾಗಲು ನಿರಾಕರಿಸಿದ ನಂತರ ಆಕೆ ವ್ಯಕ್ತಿಯ ಖಾಸಗಿ ಅಂಗಗಳಿಗೆ ಇರಿದು ಗಾಯಗೊಳಿಸಿದ್ದಾಳೆ ಎಂದು ಅವರು ಹೇಳಿದರು.

ಸಂತ್ರಸ್ತೆ ಮನೆಯಿಂದ ಹೊರಗೆ ಓಡಿ ಆಸ್ಪತ್ರೆಗೆ ದಾಖಲಾದರು. ನಂತರ ಅವರು ಪೊಲೀಸ್ ದೂರು ದಾಖಲಿಸಿದರು, ಅದರ ಆಧಾರದ ಮೇಲೆ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 118 (1) (ಸ್ವಯಂಪ್ರೇರಿತವಾಗಿ ಗಾಯಗೊಳಿಸುವುದು ಅಥವಾ ಅಪಾಯಕಾರಿ ಆಯುಧಗಳು ಅಥವಾ ವಿಧಾನಗಳಿಂದ ಗಂಭೀರವಾದ ಗಾಯವನ್ನು ಉಂಟುಮಾಡುವುದು) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಯಾವುದೇ ಬಂಧನವಾಗಿಲ್ಲ, ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.

ಮತ್ತಷ್ಟು ಓದಿ: ಬೆಂಗಳೂರಿನಲ್ಲಿ ಯುವಕನ ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತಿಸಿದ ಮಂಗಳಮುಖಿಯರು!

ಇತ್ತೀಚೆಗಷ್ಟೇ ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಇಂತಹದ್ದೇ ಪ್ರಕರಣ ಬೆಳಕಿಗೆ ಬಂದಿತ್ತು. ಇಲ್ಲಿ ಮಹಿಳೆಯೊಬ್ಬರು ತನ್ನ ಇಬ್ಬರು ಸ್ನೇಹಿತರ ಜೊತೆ ಸೇರಿ ಪತಿಯ ಖಾಸಗಿ ಅಂಗಗಳನ್ನು ಬ್ಲೇಡ್ ನಿಂದ ಕತ್ತರಿಸಿದ್ದರು. ವಾಸ್ತವವಾಗಿ, ಪತಿ ಯಾವಾಗಲೂ ತನ್ನ ಹೆಂಡತಿ ಬೇರೊಬ್ಬರೊಂದಿಗೆ ಸಂಬಂಧ ಹೊಂದಿದ್ದಾಳೆ ಎಂದು ಅನುಮಾನಿಸುತ್ತಿದ್ದ ಎನ್ನಲಾಗಿದೆ.

ಯುವಕನ ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತಿಸಿದ ಮಂಗಳಮುಖಿಯರು ಟೀ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ಯುವಕನನ್ನು ಹೆದರಿಸಿ, ಬೆದರಿಸಿ ಮನೆಯಲ್ಲಿ ಇರಿಸಿಕೊಂಡಿದ್ದ ಮಂಗಳಮುಖಿಯರು ಪ್ರಜ್ಞೆ ತಪ್ಪಿಸಿ ಆತನ ಮರ್ಮಾಂಗ ಕತ್ತರಿಸಿ, ಲಿಂಗ ಪರಿವರ್ತಿಸಿದ್ದಾರೆ. ಸುಲಭವಾಗಿ ಹಣ ಸಂಪಾದನೆ ಮಾಡುವ ದೃಷ್ಟಿಯಿಂದ ಇಂತಹ ಕೃತ್ಯ‌ ನಡೆಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

ಬೆಂಗಳೂರಿನ ಪುಲಿಕೇಶಿನಗರ ಠಾಣಾ ವ್ಯಾಪ್ತಿಯ ಫ್ರೆಜರ್ ಟೌನ್ ನಲ್ಲಿ 18 ವರ್ಷದ ಯುವಕನನ್ನ ಐವರು ಮಂಗಳ ಮುಖಿಯರ ಅಟ್ಟಹಾಸ ಮೆರೆದಿರುವ ಘಟನೆ ಬೆಳಕಿಗೆ ಬಂದಿದೆ. ಬಲವಂತವಾಗಿ ಹುಡುಗನೊಬ್ಬನಿಗೆ ಲಿಂಗ ಪರಿವರ್ತನೆ ಮಾಡಿಸಿರುವ ಆರೋಪ ಕೇಳಿ ಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ