AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮರಾವತಿಯಲ್ಲಿ ಕೆಮಿಸ್ಟ್ ಹತ್ಯೆ ಪ್ರಕರಣ: ಮಾಸ್ಟರ್‌ಮೈಂಡ್ ಇರ್ಫಾನ್ ಖಾನ್ ಗೆ ಜುಲೈ7ರ ವರೆಗೆ ಪೊಲೀಸ್ ಕಸ್ಟಡಿ

ಸಿಟಿ ಕೊತ್ವಾಲಿ ಪೊಲೀಸ್‌ನ ಹಿರಿಯ ಇನ್ಸ್‌ಪೆಕ್ಟರ್ ನೀಲಿಮಾ ಅರಾಜ್ ಅವರು ಮ್ಯಾಜಿಸ್ಟ್ರೇಟ್ ಮುಂದೆ ವಾದಿಸಿದ್ದು ಇರ್ಫಾನ್ ಖಾನ್ ಇತರ ಆರೋಪಿಗಳನ್ನು ಕೊಲೆ ಮಾಡಲು ಪ್ರೇರೇಪಿಸಿದರು.

ಅಮರಾವತಿಯಲ್ಲಿ ಕೆಮಿಸ್ಟ್ ಹತ್ಯೆ ಪ್ರಕರಣ: ಮಾಸ್ಟರ್‌ಮೈಂಡ್ ಇರ್ಫಾನ್ ಖಾನ್ ಗೆ ಜುಲೈ7ರ ವರೆಗೆ ಪೊಲೀಸ್ ಕಸ್ಟಡಿ
ಇರ್ಫಾನ್ ಖಾನ್
TV9 Web
| Edited By: |

Updated on: Jul 03, 2022 | 7:10 PM

Share

ಕಳೆದ ತಿಂಗಳು ಮಹಾರಾಷ್ಟ್ರದ (Maharashtra) ಅಮರಾವತಿ ಜಿಲ್ಲೆಯಲ್ಲಿ (Amravati killing) ಕೆಮಿಸ್ಟ್ ಹತ್ಯೆಯ ಹಿಂದಿನ ಮಾಸ್ಟರ್‌ಮೈಂಡ್ ಇರ್ಫಾನ್ ಖಾನ್ (35) (Irfan Khan) ಅವರನ್ನು ಭಾನುವಾರ ಮಧ್ಯಾಹ್ನ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು ಮತ್ತು ಜುಲೈ 7 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಸಿಟಿ ಕೊತ್ವಾಲಿ ಪೊಲೀಸ್‌ನ ಹಿರಿಯ ಇನ್ಸ್‌ಪೆಕ್ಟರ್ ನೀಲಿಮಾ ಅರಾಜ್ ಅವರು ಮ್ಯಾಜಿಸ್ಟ್ರೇಟ್ ಮುಂದೆ ವಾದಿಸಿದ್ದು ಇರ್ಫಾನ್ ಖಾನ್ ಇತರ ಆರೋಪಿಗಳನ್ನು ಕೊಲೆ ಮಾಡಲು ಪ್ರೇರೇಪಿಸಿದರು. ಇರ್ಫಾನ್ ಖಾನ್​​ನ ಮೊಬೈಲ್ ಫೋನ್, ದ್ವಿಚಕ್ರ ವಾಹನ ಮತ್ತು ಅಪರಾಧದಲ್ಲಿ ಬಳಸಲಾಗಿದೆ ನಾಲ್ಕು ಚಕ್ರ ವಾಹನ ಮರುಪಡೆಯಲು ಮತ್ತು ಅವರ ಬ್ಯಾಂಕ್ ಖಾತೆಯ ವಿವರಗಳನ್ನು ಪಡೆಯಲು ಇರ್ಫಾನ್ ಖಾನ್ ಅವರ ಕಸ್ಟಡಿ ಅಗತ್ಯವಿದೆ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದರು. ಪ್ರಕರಣದಲ್ಲಿ ಹೆಚ್ಚಿನ ಮಾಹಿತಿಗಳು ಯಾವುದಾದರೂ ಇದ್ದರೆ ಕಂಡುಹಿಡಿಯಲು ಅವರ ಮೊಬೈಲ್ ಫೋನ್ ಅಗತ್ಯವಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನನ್ನ ಕ್ಲೈಂಟ್ ಒಬ್ಬ ಸಾಮಾಜಿಕ ಕಾರ್ಯಕರ್ತ ಮತ್ತು ಸಾಂಕ್ರಾಮಿಕ ಸಮಯದಲ್ಲಿ ಅನೇಕ ಜನರಿಗೆ ಸಹಾಯ ಮಾಡಿದ್ದಾರೆ. ಅವರು ಸ್ಥಳದಲ್ಲಿ ಇರಲಿಲ್ಲ ಮತ್ತು ಅಪರಾಧಕ್ಕೂ ಯಾವುದೇ ಸಂಬಂಧವಿಲ್ಲ. ಅವರ ಕಸ್ಟಡಿ ವಿಚಾರಣೆ ಅಗತ್ಯವಿಲ್ಲ ಎಂದು ಆರೋಪಿ ಪರ ವಕೀಲ ಮುರ್ತುಜಾ ಆಜಾದ್ ಹೇಳಿದರು. ಆರೋಪಿ ಪರ ಇನ್ನೊಬ್ಬ ವಕೀಲ ವಾಸಿಂ ಶೇಖ್ ಕೂಡಾ ವಾದಿಸಿದ್ದಾರೆ.

ಕ್ರಿಮಿನಲ್ ಪಿತೂರಿಯ (ಐಪಿಸಿ) ಸೆಕ್ಷನ್ ಅನ್ನು ಅನ್ವಯಿಸಲಾಗಿದೆ ಎಂಬ ಪ್ರತಿವಾದವನ್ನು ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರತಿವಾದಿಸಿದ್ದು ಆರೋಪಿಯು ಮುಖ್ಯ ಸಂಚುಕೋರ ಎಂದು ಹೇಳಿದರು. ಎರಡೂ ಕಡೆಯ ವಾದವನ್ನು ಆಲಿಸಿದ ನಂತರ ಮ್ಯಾಜಿಸ್ಟ್ರೇಟ್ ಎ ಆರ್ ಕಲಹಾಪುರೆ ಅವರು ಇರ್ಫಾನ್ ಖಾನ್​​ನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದರು.

ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರು ಪ್ರವಾದಿಯವರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ಬೆಂಬಲಿಸುವ ಸಾಮಾಜಿಕ ಮಾಧ್ಯಮ ಪೋಸ್ಟ್ ಅನ್ನು ಪೋಸ್ಟ್ ಮಾಡಿದ್ದಕ್ಕಾಗಿ ಉಮೇಶ್ ಪ್ರಹ್ಲಾದರಾವ್ ಕೊಲ್ಹೆ (54) ಜೂನ್ 21 ರಂದು ಕೊಲೆಯಾಗಿದೆ.

ಇರ್ಫಾನ್ ಖಾನ್ ಮತ್ತು ಪಶುವೈದ್ಯ ಯೂಸುಫ್ ಖಾನ್ (44) ಅವರ ಬಂಧನವನ್ನು ಪೊಲೀಸರು ಶನಿವಾರ ಖಚಿತಪಡಿಸಿದ್ದು, ಕೊಲೆ ಪ್ರಕರಣದಲ್ಲಿ ಒಟ್ಟು ಏಳು ಮಂದಿಯನ್ನು ಬಂಧಿಸಿದ್ದಾರೆ. ಕೇಂದ್ರ ಗೃಹ ಸಚಿವಾಲಯವು ಅದೇ ದಿನ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ಹಸ್ತಾಂತರಿಸಿತ್ತು.

ನಾಗ್ಪುರದಿಂದ ಬಂಧಿತನಾಗಿದ್ದ ಇರ್ಫಾನ್ ಖಾನ್, ಅಮರಾವತಿಯ ಪಠಾಣ್ ಚೌಕ್‌ನಲ್ಲಿರುವ ಕಮೇಲಾ ಪ್ರದೇಶದ ನಿವಾಸಿಯಾಗಿದ್ದು, ಬಂಧಿತ ಐವರು ಆರೋಪಿಗಳೊಂದಿಗೆ ಸಂಚು ರೂಪಿಸಿ ಅವರಿಗೆ ಕೆಲಸಗಳನ್ನು ನಿಯೋಜಿಸಿದ್ದರು. ಅವರು ವಾಹನಗಳು ಮತ್ತು ನಗದು ಮುಂತಾದ ವ್ಯವಸ್ಥಾಪನಾ ಬೆಂಬಲವನ್ನು ಸಹ ಒದಗಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರ ಸ್ನೇಹಿತರು ಮತ್ತು ಅವರ ಮೂಲಕ ಸಾಮಾಜಿಕ ಚಟುವಟಿಕೆಗಳಲ್ಲಿ ಸ್ವಯಂಸೇವಕರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇತರ ಆರೋಪಿ ಯೂಸುಫ್ ಖಾನ್ ಕೂಡ ಇರ್ಫಾನ್ ಖಾನ್ ಗೆ ಪರಿಚಿತನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ