AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

King of Spices: MDH ಗ್ರೂಪ್‌ ಮಾಲೀಕ ಮಹಾಶಯ ಧರ್ಮಪಾಲ್ ಗುಲಾಟಿ ನಿಧನ

ಭಾರತೀಯ ಮಸಾಲೆ ಇಂಡಸ್ಟ್ರಿಯ ಪಿತಾಮಹ ಎಂದೇ ಖ್ಯಾತಿ ಪಡೆದಿದ್ದ MDH ಗ್ರೂಪ್‌ ಮುಖ್ಯಸ್ಥ ಮಹಾಶಯ ಧರ್ಮಪಾಲ್ ಗುಲಾಟಿ(98) ಕೊನೆಯುಸಿರೆಳೆದಿದ್ದಾರೆ.

King of Spices: MDH ಗ್ರೂಪ್‌ ಮಾಲೀಕ ಮಹಾಶಯ ಧರ್ಮಪಾಲ್ ಗುಲಾಟಿ ನಿಧನ
MDH ಗ್ರೂಪ್‌ ಮುಖ್ಯಸ್ಥ ಮಹಾಶಯ ಧರ್ಮಪಾಲ್
ಆಯೇಷಾ ಬಾನು
|

Updated on:Dec 04, 2020 | 6:49 AM

Share

ದೆಹಲಿ: ಭಾರತೀಯ ಮಸಾಲೆ ಇಂಡಸ್ಟ್ರಿಯ ಪಿತಾಮಹ ಎಂದೇ ಖ್ಯಾತಿ ಪಡೆದಿದ್ದ MDH ಗ್ರೂಪ್‌ ಮುಖ್ಯಸ್ಥ ಮಹಾಶಯ ಧರ್ಮಪಾಲ್ ಗುಲಾಟಿ (98) ಕೊನೆಯುಸಿರೆಳೆದಿದ್ದಾರೆ. ಧರ್ಮಪಾಲ್ ನಿಧನಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಂತಾಪ ಸೂಚಿಸಿದ್ದಾರೆ.

ಮಸಾಲೆ ಪದಾರ್ಥಗಳಲ್ಲಿ ಭಾರತ ಅತಿ ದೊಡ್ಡ ಹೆಸರು ಮಾಡಿದೆ. ಭಾರತದಲ್ಲಿ ಸಿಗುವ ಮಸಾಲೆಗಳು ಬೇರೆಲ್ಲೂ ಸಿಗುವುದಿಲ್ಲ. ಹೀಗಾಗಿ ಯೂರೋಪಿಯನ್ನರು ಸಹ ನಮ್ಮ ದೇಶದ ಮಸಾಲೆಗೆ ಮಾರು ಹೋಗಿದ್ದಾರೆ. ಇಂತಹ ಮಸಾಲೆ ಬ್ರಾಂಡ್ MDH ಮಾಲೀಕ ಮಹಾಶಯ ಧರ್ಮಪಾಲ್ ಗುಲಾಟಿ ಅವರು ಇಂದು ನಿಧನರಾಗಿದ್ದಾರೆ. ವರದಿಗಳ ಪ್ರಕಾರ, ಅವರು ಕಳೆದ ಮೂರು ವಾರಗಳಿಂದ ದೆಹಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಿಗ್ಗೆ 5:30 ಕ್ಕೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ದೇಶದಲ್ಲಿ ಮಸಾಲೆ ಪದಾರ್ಥಗಳಿಂದಲೇ ಖ್ಯಾತಿ ಪಡೆದಿದ್ದ ಮಹಾಶಯ: ‘ದಾದಾಜಿ’ ಮತ್ತು ‘ಮಹಾಶಯ’ ಎಂದು ಪ್ರೀತಿಯಿಂದ ಕರೆಯಲ್ಪಡುವ ಧರ್ಮಪಾಲ್ 1923 ರಲ್ಲಿ ಪಾಕಿಸ್ತಾನದ ಸಿಯಾಲ್‌ಕೋಟ್‌ನಲ್ಲಿ ಜನಿಸಿದರು. ಶಾಲೆಯಿಂದ ಹೊರಗುಳಿದ ಇವರು ತಮ್ಮ ಆರಂಭಿಕ ಜೀವನವನ್ನು ತಂದೆಯ ಜೊತೆ ಸೇರಿ ಮಸಾಲೆ ವ್ಯವಹಾರದಲ್ಲೇ ಕಳೆದಿದ್ದಾರೆ.

1947 ಭಾರತ-ಪಾಕಿಸ್ತಾನ ವಿಭಜನೆಯ ನಂತರ, ಅವರು ಭಾರತಕ್ಕೆ ಬಂದು ಅಮೃತಸರದ ನಿರಾಶ್ರಿತರ ಶಿಬಿರದಲ್ಲಿ ತಂಗಿದ್ದರು. ನಂತರ ಅವರು ದೆಹಲಿಯ ಕರೋಲ್ ಬಾಗ್‌ಗೆ ತೆರಳಿ ಅಲ್ಲಿ ಒಂದು ಅಂಗಡಿಯನ್ನು ತೆರೆದರು. ಬಳಿಕ 1959 ರಲ್ಲಿ MDH ಮಸಾಲೆ ಅಂಗಡಿಯನ್ನು ಬ್ರಾಂಡ್ ಆಗಿ ಪ್ರಾರಂಭಿಸಿದರು. ದೇಶದಲ್ಲಿ 2ನೇ ಅತಿದೊಡ್ಡ ಮಸಾಲೆ ಪದಾರ್ಥ ಉತ್ಪನ್ನಗಳನ್ನ ಉತ್ಪಾದಿಸೋ ಕಂಪನಿ ಅನ್ನೋ ಖ್ಯಾತಿ ಎಂಡಿಹೆಚ್​ಗೆ ಸಲ್ಲುವಂತೆ ಗ್ರೂಪ್​ನ ಅಧ್ಯಕ್ಷ ಧರ್ಮಪಾಲ್​ ಮಾಡಿದ್ದರು.

Mahashian Di Hatti Private Limited

Published On - 9:49 am, Thu, 3 December 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ