AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾತ್ಮ ಗಾಂಧಿ ಪುಣ್ಯತಿಥಿ: ವೈಯಕ್ತಿಕ ಡೈರಿಯಲ್ಲಿ ಗಾಂಧಿ ಬಗ್ಗೆ ಪ್ರಧಾನಿ ಮೋದಿ ಬರೆದಿರುವುದೇನು?

ಇಂದು ರಾಷ್ಟ್ರಪಿತ ಮಹಾತ್ಮ ಗಾಂಧಿ ಪುಣ್ಯತಿಥಿ. ಪ್ರಧಾನಿ ನರೇಂದ್ರ ಮೋದಿ(Narendra Modi) ಗಾಂಧಿಯವರ ಬಗೆಗಿನ ಸಾಕಷ್ಟು ಪುಸ್ತಕಗಳನ್ನು ಓದಿದ್ದಲ್ಲದೇ, ಕೆಲವು ವಿಚಾರಗಳನ್ನು ತಮ್ಮ ವೈಯಕ್ತಿಕ ದಿನಚರಿಯಲ್ಲಿ ಉಲ್ಲೇಖ ಮಾಡಿದ್ದಾರೆ. ಅದರ ಕೆಲವು ಸಾಲುಗಳನ್ನು  ಮೋದಿ ಆರ್ವೈವ್ಸ್​ ಹಂಚಿಕೊಂಡಿದೆ. ಜನವರಿ 30, 1948 ರಂದು, ಮಹಾತ್ಮ ಗಾಂಧಿಯವರನ್ನು ನಾಥೂರಾಂ ಗೋಡ್ಸೆ ಹತ್ಯೆ ಮಾಡಿದ್ದರು.

ಮಹಾತ್ಮ ಗಾಂಧಿ ಪುಣ್ಯತಿಥಿ: ವೈಯಕ್ತಿಕ ಡೈರಿಯಲ್ಲಿ ಗಾಂಧಿ ಬಗ್ಗೆ ಪ್ರಧಾನಿ ಮೋದಿ ಬರೆದಿರುವುದೇನು?
ನರೇಂದ್ರ ಮೋದಿImage Credit source: NDTV
ನಯನಾ ರಾಜೀವ್
|

Updated on: Jan 30, 2024 | 10:56 AM

Share

ಇಂದು ರಾಷ್ಟ್ರಪಿತ ಮಹಾತ್ಮ ಗಾಂಧಿ ಪುಣ್ಯತಿಥಿ. ಪ್ರಧಾನಿ ನರೇಂದ್ರ ಮೋದಿ(Narendra Modi) ಗಾಂಧಿಯವರ ಬಗೆಗಿನ ಸಾಕಷ್ಟು ಪುಸ್ತಕಗಳನ್ನು ಓದಿದ್ದಲ್ಲದೇ, ಕೆಲವು ವಿಚಾರಗಳನ್ನು ತಮ್ಮ ವೈಯಕ್ತಿಕ ದಿನಚರಿಯಲ್ಲಿ ಉಲ್ಲೇಖ ಮಾಡಿದ್ದಾರೆ. ಅದರ ಕೆಲವು ಸಾಲುಗಳನ್ನು  ಮೋದಿ ಆರ್ವೈವ್ಸ್​ ಹಂಚಿಕೊಂಡಿದೆ. ಜನವರಿ 30, 1948 ರಂದು, ಮಹಾತ್ಮ ಗಾಂಧಿಯವರನ್ನು ನಾಥೂರಾಂ ಗೋಡ್ಸೆ ಹತ್ಯೆ ಮಾಡಿದ್ದರು.

ಮಹಾತ್ಮ ಗಾಂಧಿಯವರು ಭಾರತದ ಸ್ವಾತಂತ್ರ್ಯ ಚಳವಳಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಅವರು ತಮ್ಮ   ದೇಶವಾಸಿಗಳನ್ನು ಒಟ್ಟುಗೂಡಿಸಿದರು ಮತ್ತು ಬ್ರಿಟಿಷರ ವಿರುದ್ಧ ಚಳವಳಿಯನ್ನು ಪ್ರಾರಂಭಿಸಿದರು. ವಿದೇಶಿ ಶಕ್ತಿಯು ಭಾರತವನ್ನು ಸ್ವತಂತ್ರಗೊಳಿಸಬೇಕಾಯಿತು. ಅನೇಕ ನಾಯಕರು ಮಹಾತ್ಮ ಗಾಂಧಿಯವರ ಜೀವನದಿಂದ ಸ್ಫೂರ್ತಿ ಪಡೆದಿದ್ದಾರೆ. ಅವರಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಒಬ್ಬರು.

ಪ್ರಧಾನಿ ಮೋದಿ ತಮ್ಮ ಭಾಷಣಗಳಲ್ಲಿ ಮಹಾತ್ಮಾ ಗಾಂಧಿಯವರ ಬಗ್ಗೆ ನಿರಂತರವಾಗಿ ಮಾತನಾಡುತ್ತಾರೆ. ಅವರ ಜೀವನದ ಉದಾಹರಣೆಗಳನ್ನು ನೀಡುತ್ತಾರೆ. ಬಡವರ ಅಭ್ಯುದಯಕ್ಕಾಗಿ ಮಹಾತ್ಮ ಗಾಂಧೀಜಿಯವರ ಚಿಂತನೆಗಳನ್ನು ಮೋದಿ ಕೂಡ ಅನುಸರಿಸುತ್ತಾರೆ. ಜತೆಗೆ ಸ್ವಚ್ಛತಾ ಅಭಿಯಾನವೂ ಒಂದು.

ಮತ್ತಷ್ಟು ಓದಿ:

ಮಹಾತ್ಮ ಗಾಂಧಿಯವರ ವಿಚಾರಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಕೆಲಸವನ್ನು ಮೋದಿ ಈಗಾಗಲೇ ಮಾಡುತ್ತಿದ್ದಾರೆ. ಮೋದಿ ಅವರು ಮಹಾತ್ಮ ಗಾಂಧಿಯವರ ಬಗ್ಗೆ ಸಾಕಷ್ಟು ಓದಿದ್ದಾರೆ ಮತ್ತು ಅವರು ತಮ್ಮ ವೈಯಕ್ತಿಕ ದಿನಚರಿಯಲ್ಲಿ ಮಹಾತ್ಮ ಗಾಂಧಿಯವರ ಆಲೋಚನೆಗಳನ್ನು ಬರೆಯುತ್ತಿದ್ದರು.

ಮೋದಿಯವರ ದಿನಚರಿಯ ಪುಟಗಳು ಅವರು ಮಹಾತ್ಮ ಗಾಂಧಿಯವರ ಜೀವನದಿಂದ ಪ್ರೀತಿ ಮತ್ತು ಸಹನೆಯನ್ನು ಕಲಿತಿದ್ದಾರೆ ಎಂದು ತೋರಿಸುತ್ತದೆ. ಮೋದಿಯವರು ತಮ್ಮ ಜೀವನ ಮತ್ತು ಆಡಳಿತದ ಮೂಲ ಮಂತ್ರವನ್ನಾಗಿಸಿಕೊಂಡಿರುವ ಮಹಾತ್ಮ ಗಾಂಧಿಯವರ ಚಿಂತನೆಗಳನ್ನು ನೋಡಿ.

-ರಕ್ತ ಚೆಲ್ಲಿದರೆ ಅದು ನಮ್ಮದೇ ಆಗಿರಲಿ ಕೊಲ್ಲದೆ ಸಾಯುವ ಪ್ರಶಾಂತ ಗುಣವನ್ನು ಬೆಳಸಿಕೊಳ್ಳೋಣ. -ಮನುಷ್ಯನ ಅಗತ್ಯಕ್ಕೆ ಜಗತ್ತಿನಲ್ಲಿ ಸಾಕಷ್ಟಿದೆ ಆದರೆ ದುರಾಸೆಗಲ್ಲ -ಹೇಡಿತನ, ದೌರ್ಬಲ್ಯಕ್ಕಿಲ್ಲಿ ಜಾಗವಿಲ್ಲ, ಹಿಂಸಾತ್ಮಕ ಮನುಷ್ಯನೂ ಒಂದು ದಿನ ಅಂಹಿಸಾ ಪ್ರವೃತ್ತಿ ಬೆಳೆಸಿಕೊಳ್ಳುತ್ತಾನೆ ಎಂದು ಬರೆದಿದ್ದಾರೆ.

ಮಹಾತ್ಮ ಗಾಂಧಿಯವರ ಚಿಂತನೆಯಂತೆ 2014ರಲ್ಲಿ ಸರ್ಕಾರ ರಚಿಸಿದ ಮೋದಿ ಬಡವರ ಕಲ್ಯಾಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಂಡಿದ್ದರು. ಎಲ್ಲರಿಗೂ ಬ್ಯಾಂಕ್ ಗಳಲ್ಲಿ ಜನ್ ಧನ್ ಖಾತೆ ತೆರೆಯಲು ನಿರ್ಧರಿಸಿದರು. ಬಡವರಿಗೆ ಕಡಿಮೆ ದರದಲ್ಲಿ ವಸತಿ ಮತ್ತು ಅಡುಗೆ ಅನಿಲ ನೀಡಲು ನಿರ್ಧರಿಸಲಾಗಿದೆ. ಕೊರೊನಾ ಅವಧಿಯಲ್ಲಿ ಯಾವುದೇ ವ್ಯಕ್ತಿ ಹಸಿವಿನಿಂದ ಇರಬಾರದು ಎಂದು ಖಚಿತಪಡಿಸಿಕೊಳ್ಳಲು ಮೋದಿ ಉಚಿತ ಆಹಾರ ಧಾನ್ಯಗಳ ಯೋಜನೆಯನ್ನು ಪ್ರಾರಂಭಿಸಿದರು ಮತ್ತು ಈಗ ಅದನ್ನು ಮತ್ತೆ 5 ವರ್ಷಗಳವರೆಗೆ ವಿಸ್ತರಿಸಿದ್ದಾರೆ.

ಒಟ್ಟಿನಲ್ಲಿ ಮಹಾತ್ಮಾ ಗಾಂಧೀಜಿಯವರ ಬಡವರ ಬಗೆಗಿನ ಭಾವನೆಗಳನ್ನು ನೆಲಕ್ಕೆ ತರುವ ಕೆಲಸವನ್ನು ಪ್ರಧಾನಿ ಮೋದಿ ಮಾಡಿದ್ದಾರೆ. ನಾನು ಪೂಜ್ಯ ಬಾಪು ಅವರಿಗೆ ಅವರ ಪುಣ್ಯ ತಿಥಿಯಂದು ಗೌರವ ಸಲ್ಲಿಸುತ್ತೇನೆ. ನಮ್ಮ ರಾಷ್ಟ್ರಕ್ಕಾಗಿ ಹುತಾತ್ಮರಾದ ಎಲ್ಲರಿಗೂ ನಾನು ಗೌರವ ಸಲ್ಲಿಸುತ್ತೇನೆ ಎಂದು ಪ್ರಧಾನಿ ಮೋದಿ ಎಕ್ಸ್​ನಲ್ಲಿ ಪೋಸ್ಟ್​ ಮಾಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ