AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್‌ನಲ್ಲಿ ದುಷ್ಕರ್ಮಿಗಳಿಂದ ಮಹಾತ್ಮ ಗಾಂಧೀಜಿ ಪ್ರತಿಮೆ ಧ್ವಂಸ

ಪಂಜಾಬ್‌ನ ಬಟಿಂಡಾದಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು  ದುಷ್ಕರ್ಮಿಗಳ ಗುಂಪು ಧ್ವಂಸಗೊಳಿಸಿದೆ. ಶುಕ್ರವಾರದ ಮಧ್ಯರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಂಜಾಬ್‌ನಲ್ಲಿ ದುಷ್ಕರ್ಮಿಗಳಿಂದ ಮಹಾತ್ಮ ಗಾಂಧೀಜಿ ಪ್ರತಿಮೆ ಧ್ವಂಸ
Mahatma Gandhi
TV9 Web
| Edited By: |

Updated on: Jul 16, 2022 | 5:01 PM

Share

ಬಟಿಂಡಾ: ಪಂಜಾಬ್‌ನ ಬಟಿಂಡಾದಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆಯನ್ನು  ದುಷ್ಕರ್ಮಿಗಳ ಗುಂಪು ಧ್ವಂಸಗೊಳಿಸಿದೆ. ಶುಕ್ರವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಈಗಾಗಲೇ ತನಿಖೆ ನಡೆಯುತ್ತಿದೆ.  ಗಾಂಧಿ ಪ್ರತಿಮೆಯನ್ನು  ರಾಮನ್ ಮಂಡಿಯ ಸಾರ್ವಜನಿಕ ಉದ್ಯಾನವನದಲ್ಲಿ ಸ್ಥಾಪಿಸಲಾಗಿತ್ತು. ಇದೀಗ ಆ ಪ್ರತಿಮೆಯನ್ನು ಹೊಡೆದು ಹಾಕಿದ್ದಾರೆ. ಈ ಘಟನೆಯ ಬಗ್ಗೆ  ರಮ್ಮನ್ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಆ ಪ್ರದೇಶದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಶೀಘ್ರದಲ್ಲೇ ದುಷ್ಕರ್ಮಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸರು ಭರವಸೆ ನೀಡಿದ್ದಾರೆ.

ಈ ವಿಧ್ವಂಸಕ ಕೃತ್ಯವನ್ನು ಸ್ಥಳೀಯರು ತೀವ್ರವಾಗಿ ಖಂಡಿಸಿದ್ದು, ಈ ಕೃತ್ಯದಲ್ಲಿ ಭಾಗಿಯಾಗಿರುವವರನ್ನು  ಕೂಡಲೇ ಬಂಧಿಸಬೇಕು ಎಂದು ಜಿಲ್ಲಾ ನಗರ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಸಿಂಗ್ ಒತ್ತಾಯಿಸಿದ್ದಾರೆ.

ಕೆನಡಾದ ಒಂಟಾರಿಯೊ ಪ್ರಾಂತ್ಯದಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಅಪವಿತ್ರಗೊಳಿಸಿದ ಕೆಲವೇ ದಿನಗಳಲ್ಲಿ ಭಟಿಂಡಾದಲ್ಲಿ ಈ ಘಟನೆ ನಡೆದಿದೆ. ವರದಿಗಳ ಪ್ರಕಾರ, ಯೋಂಗ್ ಸ್ಟ್ರೀಟ್ ಮತ್ತು ಗಾರ್ಡನ್ ಅವೆನ್ಯೂ ಪ್ರದೇಶದ ವಿಷ್ಣು ಮಂದಿರದಲ್ಲಿ ಗಾಂಧಿ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದೆ.

ಇದನ್ನೂ ಓದಿ
Image
Indian book of Record: ಚಂದ್ರಹಾಸ ಅವರ ಕೃತಿಗೆ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಗೌರವ
Image
Gallstone: ಶಸ್ತ್ರಚಿಕಿತ್ಸೆಯಿಲ್ಲದೆ ಪಿತ್ತಕೋಶದ ಕಲ್ಲುಗಳನ್ನು ತೆಗೆಯಲು ಸಾಧ್ಯವೆ! ಇಲ್ಲಿದೆ ಮನೆಮದ್ದು

ಸ್ಥಳೀಯ ಪೊಲೀಸರು ವಿಧ್ವಂಸಕ ಕೃತ್ಯವನ್ನು ದ್ವೇಷ  ಪ್ರೇರಿತ ಘಟನೆ ಎಂದು ವಿವರಿಸಿದ್ದಾರೆ. ಟೊರೊಂಟೊದಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್ ಈ ಬಗ್ಗೆ ಟ್ವಿಟ್ ಮಾಡಿದ್ದು ರಿಚ್ಮಂಡ್ ಹಿಲ್‌ನಲ್ಲಿರುವ ವಿಷ್ಣು ದೇವಸ್ಥಾನದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಯನ್ನು ಅಪವಿತ್ರಗೊಳಿಸಿದ್ದಕ್ಕಾಗಿ ತುಂಬಾ ನೋವು ಉಂಟು ಮಾಡಿದೆ. ಈ ಕ್ರಿಮಿನಲ್, ದ್ವೇಷಪೂರಿತ ವಿಧ್ವಂಸಕ ಕೃತ್ಯವು ಕೆನಡಾದಲ್ಲಿರುವ ಭಾರತೀಯ ಸಮುದಾಯದ ಭಾವನೆಗಳಿಗೆ ಧಕ್ಕೆ ಮಾಡಿದೆ.  ಈ ಬಗ್ಗೆ ತನಿಖೆ ಮಾಡಲು ನಾವು ಕೆನಡಾದ ಅಧಿಕಾರಿಗಳೊಂದಿಗೆ ಮಾತನಾಡಿದ್ದು, ಇಲ್ಲಿಯ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಭರವಸೆ ನೀಡಿದ್ದಾರೆ.

Follow Us
ಬಂಗಲೆಯ ಹೊರಗೆ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ
ಬಂಗಲೆಯ ಹೊರಗೆ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ
ಸಾಲು ಸಾಲು ರಜೆ: ಮೆಜೆಸ್ಟಿಕ್​​​​ನಲ್ಲಿ ಬಸ್​​​​ಗಳಿಗೆ ಡಿಮ್ಯಾಂಡ್​​
ಸಾಲು ಸಾಲು ರಜೆ: ಮೆಜೆಸ್ಟಿಕ್​​​​ನಲ್ಲಿ ಬಸ್​​​​ಗಳಿಗೆ ಡಿಮ್ಯಾಂಡ್​​
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ