AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತ ಹೋರಾಟಕ್ಕೆ ’ಮಹಾತ್ಮ‘ ಬಲ; ರಾಕೇಶ್ ಟಿಕಾಯತ್ ಭೇಟಿ ಮಾಡಿದ ಮಹಾತ್ಮಾ ಗಾಂಧಿ ಮೊಮ್ಮಗಳು

ಮೊದಲ ಸ್ವಾತಂತ್ರ್ಯ ಸಂಗ್ರಾಮವೂ ಉತ್ತರ ಪ್ರದೇಶದ ಮೀರತ್​ನಿಂದಲೇ ಆರಂಭವಾಗಿತ್ತು ಎಂದು ಮಹಾತ್ಮಾ ಗಾಂಧೀಜಿಯವರ ಮೊಮ್ಮಗಳು 84 ವರ್ಷದ ತಾರಾ ಗಾಂಧಿ ಭಟ್ಟಾಚರ್ಜಿ ಸ್ಮರಿಸಿಕೊಂಡರು..

ರೈತ ಹೋರಾಟಕ್ಕೆ ’ಮಹಾತ್ಮ‘ ಬಲ; ರಾಕೇಶ್ ಟಿಕಾಯತ್ ಭೇಟಿ ಮಾಡಿದ ಮಹಾತ್ಮಾ ಗಾಂಧಿ ಮೊಮ್ಮಗಳು
ರಾಜಕೀಯ ಉದ್ದೇಶವಿಲ್ಲದೇ ರೈತರ ಪ್ರತಿಭಟನೆಯನ್ನು ಬೆಂಬಲಿಸುವುದಾಗಿ ಮಹಾತ್ಮಾ ಗಾಂಧಿ ಮೊಮ್ಮಗಳು ತಾರಾ ಗಾಂಧಿ ಭಟ್ಟಾಚರ್ಜಿ ಹೇಳಿದ್ದಾಗಿ ಭಾರತೀಯ ಕಿಸಾನ್ ಯೂನಿಯನ್​ ಮುಖ್ಯಸ್ಥ ರಾಕೇಶ್ ಟಿಕಾಯತ್ ತಿಳಿಸಿದ್ದಾರೆ.
guruganesh bhat
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Feb 14, 2021 | 2:58 PM

Share

ದೆಹಲಿ: ಕಳೆದ 81 ದಿನಗಳಿಂದ ನಡೆಯುತ್ತಿರುವ ರೈತ ಹೋರಾಟಕ್ಕೆ ಇದೀಗ ‘ಮಹಾತ್ಮ’ ಬಲ ಬಂದಿದೆ. ಮಹಾತ್ಮಾ ಗಾಂಧೀಜಿಯವರ ಮೊಮ್ಮಗಳು 84 ವರ್ಷದ ತಾರಾ ಗಾಂಧಿ ಭಟ್ಟಾಚರ್ಜಿ (Mahatma Gandhis Granddaughter Tara Gandhi Bhattacharjee) ದೆಹಲಿಯ ಘಾಜಿಪುರ ಗಡಿ ಭಾಗದಲ್ಲಿ ರೈತ ಹೋರಾಟಗಾರರನ್ನು ಭೇಟಿ ಮಾಡಿ ಬೆಂಬಲ ಘೋಷಿಸಿದ್ದಾರೆ. ರಾಷ್ಟ್ರೀಯ ಗಾಂಧಿ ಮ್ಯೂಸಿಯಂನ ಅಧ್ಯಕ್ಷರೂ ಆಗಿರುವ ಅವರು, ಕೇಂದ್ರ ಸರ್ಕಾರಕ್ಕೆ ರೈತ ಸಮುದಾಯ ಹಿತ ಕಾಪಾಡುವಂತೆ ಆಗ್ರಹಿಸಿದ್ದಾರೆ.

ರಾಜಕೀಯ ಉದ್ದೇಶವಿಲ್ಲದೇ ರೈತರ ಪ್ರತಿಭಟನೆಯನ್ನು ಬೆಂಬಲಿಸುವುದಾಗಿ ಮಹಾತ್ಮಾ ಗಾಂಧಿ ಮೊಮ್ಮಗಳು ತಾರಾ ಗಾಂಧಿ ಭಟ್ಟಾಚರ್ಜಿ ಹೇಳಿದ್ದಾಗಿ ಭಾರತೀಯ ಕಿಸಾನ್ ಯೂನಿಯನ್​ ಮುಖ್ಯಸ್ಥ ರಾಕೇಶ್ ಟಿಕಾಯತ್ ತಿಳಿಸಿದ್ದಾರೆ. ರೈತರಿಂದಲೇ ದೇಶದ ಇತರ ಜನರು ನೆಮ್ಮದಿಯಿಂದ ಬದುಕುತ್ತಿದ್ದು, ಅವರ ಹಿತರಕ್ಷಣೆ ದೇಶದ ಜವಾಬ್ದಾರಿಯಾಗಿದೆ ಎಂದು ತಾರಾ ಗಾಂಧಿ ಭಟ್ಟಾಚರ್ಜಿ ಅಭಿಪ್ರಾಯ ವ್ಯಕ್ತಪಡಿದ್ದಾರೆ. 1857ರಲ್ಲಿ ನಡೆದ ಮೊದಲ ಸ್ವಾತಂತ್ರ್ಯ ಸಂಗ್ರಾಮವೂ ಉತ್ತರ ಪ್ರದೇಶದ ಮೀರತ್​ನಿಂದಲೇ ಆರಂಭವಾಗಿತ್ತು ಎಂದು ಅವರು ಸ್ಮರಿಸಿಕೊಂಡರು ಎಂದು ಸಹ ರಾಕೇಶ್ ಟಿಕಾಯತ್ ತಿಳಿಸಿದ್ದಾರೆ.

ಅವರು ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷರಾದ ರಾಮಚಂದ್ರ ರಹಿ, ನಿರ್ದೇಶಕ ಸಂಜಯ್ ಸಿಂಘಾ, ಆಲ್ ಇಂಡಿಯಾ ಸರ್ವ ಸೇವಾ ಸಂಘದ ಆಡಳಿತ ಮಂಡಳಿಯ ಅಶೋಕ್ ಸರನ್ ಮತ್ತು ರಾಷ್ಟ್ರೀಯ ಗಾಂಧಿ ಮ್ಯೂಸಿಯಂನ ನಿರ್ದೇಶಕ ಎ.ಅಣ್ಣಾಮಲೈ ಅವರ ಜತೆಗೆ ಗಾಜಿಪುರ ಗಡಿಯಲ್ಲಿ ಪ್ರತಿಭಟನಾ ನಿರತ ರಾಕೇಶ್ ಟಿಕಾಯತ್ ಮತ್ತು ಸಂಗಡಿಗರನ್ನು ಭೇಟಿಯಾಗಿದ್ದಾರೆ.

ಕಳೆದ 81 ದಿನಗಳಿಂದ ನಿರಂತರವಾಗಿ ದೆಹಲಿಯ ಗಡಿ ಪ್ರದೇಶಗಳಲ್ಲಿ ನಡೆಯುತ್ತಿರುವ ರೈತ ಹೋರಾಟವು ಹಲವು ತಿರುವುಗಳನ್ನು ಪಡೆದುಕೊಂಡಿತ್ತು. ಗಣರಾಜ್ಯೋತ್ಸವ ದಿನದಂದು ದೆಹಲಿಯ ಐತಿಹಾಸಿಕ ಕೆಂಪುಕೋಟೆಯ ಮೇಲೆ ಅನ್ಯ ಧ್ವಜ ಹಾರಿಸಿ, ಪ್ರತಿಭಟನೆ ಗಲಭೆಯ ಸ್ವರೂಪ ಪಡೆದುಕೊಂಡಿದ್ದಲ್ಲದೇ ಹಲವು ರೈತರು, ಪೊಲೀಸರು ಗಾಯಗೊಂಡಿದ್ದರು. ಇದನ್ನೂ ಓದಿ: Deep Sidhu: ಬಂಧಿತ ದೀಪ್​ ಸಿಧು, ಇಕ್ಬಾಲ್​ ಸಿಂಗ್​​ರನ್ನು ಕೆಂಪುಕೋಟೆಗೆ ಕರೆದುಕೊಂಡು ಹೋದ ದೆಹಲಿ ಪೊಲೀಸರು

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ