AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತ ಹೋರಾಟಕ್ಕೆ ’ಮಹಾತ್ಮ‘ ಬಲ; ರಾಕೇಶ್ ಟಿಕಾಯತ್ ಭೇಟಿ ಮಾಡಿದ ಮಹಾತ್ಮಾ ಗಾಂಧಿ ಮೊಮ್ಮಗಳು

ಮೊದಲ ಸ್ವಾತಂತ್ರ್ಯ ಸಂಗ್ರಾಮವೂ ಉತ್ತರ ಪ್ರದೇಶದ ಮೀರತ್​ನಿಂದಲೇ ಆರಂಭವಾಗಿತ್ತು ಎಂದು ಮಹಾತ್ಮಾ ಗಾಂಧೀಜಿಯವರ ಮೊಮ್ಮಗಳು 84 ವರ್ಷದ ತಾರಾ ಗಾಂಧಿ ಭಟ್ಟಾಚರ್ಜಿ ಸ್ಮರಿಸಿಕೊಂಡರು..

ರೈತ ಹೋರಾಟಕ್ಕೆ ’ಮಹಾತ್ಮ‘ ಬಲ; ರಾಕೇಶ್ ಟಿಕಾಯತ್ ಭೇಟಿ ಮಾಡಿದ ಮಹಾತ್ಮಾ ಗಾಂಧಿ ಮೊಮ್ಮಗಳು
ರಾಜಕೀಯ ಉದ್ದೇಶವಿಲ್ಲದೇ ರೈತರ ಪ್ರತಿಭಟನೆಯನ್ನು ಬೆಂಬಲಿಸುವುದಾಗಿ ಮಹಾತ್ಮಾ ಗಾಂಧಿ ಮೊಮ್ಮಗಳು ತಾರಾ ಗಾಂಧಿ ಭಟ್ಟಾಚರ್ಜಿ ಹೇಳಿದ್ದಾಗಿ ಭಾರತೀಯ ಕಿಸಾನ್ ಯೂನಿಯನ್​ ಮುಖ್ಯಸ್ಥ ರಾಕೇಶ್ ಟಿಕಾಯತ್ ತಿಳಿಸಿದ್ದಾರೆ.
guruganesh bhat
| Edited By: |

Updated on: Feb 14, 2021 | 2:58 PM

Share

ದೆಹಲಿ: ಕಳೆದ 81 ದಿನಗಳಿಂದ ನಡೆಯುತ್ತಿರುವ ರೈತ ಹೋರಾಟಕ್ಕೆ ಇದೀಗ ‘ಮಹಾತ್ಮ’ ಬಲ ಬಂದಿದೆ. ಮಹಾತ್ಮಾ ಗಾಂಧೀಜಿಯವರ ಮೊಮ್ಮಗಳು 84 ವರ್ಷದ ತಾರಾ ಗಾಂಧಿ ಭಟ್ಟಾಚರ್ಜಿ (Mahatma Gandhis Granddaughter Tara Gandhi Bhattacharjee) ದೆಹಲಿಯ ಘಾಜಿಪುರ ಗಡಿ ಭಾಗದಲ್ಲಿ ರೈತ ಹೋರಾಟಗಾರರನ್ನು ಭೇಟಿ ಮಾಡಿ ಬೆಂಬಲ ಘೋಷಿಸಿದ್ದಾರೆ. ರಾಷ್ಟ್ರೀಯ ಗಾಂಧಿ ಮ್ಯೂಸಿಯಂನ ಅಧ್ಯಕ್ಷರೂ ಆಗಿರುವ ಅವರು, ಕೇಂದ್ರ ಸರ್ಕಾರಕ್ಕೆ ರೈತ ಸಮುದಾಯ ಹಿತ ಕಾಪಾಡುವಂತೆ ಆಗ್ರಹಿಸಿದ್ದಾರೆ.

ರಾಜಕೀಯ ಉದ್ದೇಶವಿಲ್ಲದೇ ರೈತರ ಪ್ರತಿಭಟನೆಯನ್ನು ಬೆಂಬಲಿಸುವುದಾಗಿ ಮಹಾತ್ಮಾ ಗಾಂಧಿ ಮೊಮ್ಮಗಳು ತಾರಾ ಗಾಂಧಿ ಭಟ್ಟಾಚರ್ಜಿ ಹೇಳಿದ್ದಾಗಿ ಭಾರತೀಯ ಕಿಸಾನ್ ಯೂನಿಯನ್​ ಮುಖ್ಯಸ್ಥ ರಾಕೇಶ್ ಟಿಕಾಯತ್ ತಿಳಿಸಿದ್ದಾರೆ. ರೈತರಿಂದಲೇ ದೇಶದ ಇತರ ಜನರು ನೆಮ್ಮದಿಯಿಂದ ಬದುಕುತ್ತಿದ್ದು, ಅವರ ಹಿತರಕ್ಷಣೆ ದೇಶದ ಜವಾಬ್ದಾರಿಯಾಗಿದೆ ಎಂದು ತಾರಾ ಗಾಂಧಿ ಭಟ್ಟಾಚರ್ಜಿ ಅಭಿಪ್ರಾಯ ವ್ಯಕ್ತಪಡಿದ್ದಾರೆ. 1857ರಲ್ಲಿ ನಡೆದ ಮೊದಲ ಸ್ವಾತಂತ್ರ್ಯ ಸಂಗ್ರಾಮವೂ ಉತ್ತರ ಪ್ರದೇಶದ ಮೀರತ್​ನಿಂದಲೇ ಆರಂಭವಾಗಿತ್ತು ಎಂದು ಅವರು ಸ್ಮರಿಸಿಕೊಂಡರು ಎಂದು ಸಹ ರಾಕೇಶ್ ಟಿಕಾಯತ್ ತಿಳಿಸಿದ್ದಾರೆ.

ಅವರು ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷರಾದ ರಾಮಚಂದ್ರ ರಹಿ, ನಿರ್ದೇಶಕ ಸಂಜಯ್ ಸಿಂಘಾ, ಆಲ್ ಇಂಡಿಯಾ ಸರ್ವ ಸೇವಾ ಸಂಘದ ಆಡಳಿತ ಮಂಡಳಿಯ ಅಶೋಕ್ ಸರನ್ ಮತ್ತು ರಾಷ್ಟ್ರೀಯ ಗಾಂಧಿ ಮ್ಯೂಸಿಯಂನ ನಿರ್ದೇಶಕ ಎ.ಅಣ್ಣಾಮಲೈ ಅವರ ಜತೆಗೆ ಗಾಜಿಪುರ ಗಡಿಯಲ್ಲಿ ಪ್ರತಿಭಟನಾ ನಿರತ ರಾಕೇಶ್ ಟಿಕಾಯತ್ ಮತ್ತು ಸಂಗಡಿಗರನ್ನು ಭೇಟಿಯಾಗಿದ್ದಾರೆ.

ಕಳೆದ 81 ದಿನಗಳಿಂದ ನಿರಂತರವಾಗಿ ದೆಹಲಿಯ ಗಡಿ ಪ್ರದೇಶಗಳಲ್ಲಿ ನಡೆಯುತ್ತಿರುವ ರೈತ ಹೋರಾಟವು ಹಲವು ತಿರುವುಗಳನ್ನು ಪಡೆದುಕೊಂಡಿತ್ತು. ಗಣರಾಜ್ಯೋತ್ಸವ ದಿನದಂದು ದೆಹಲಿಯ ಐತಿಹಾಸಿಕ ಕೆಂಪುಕೋಟೆಯ ಮೇಲೆ ಅನ್ಯ ಧ್ವಜ ಹಾರಿಸಿ, ಪ್ರತಿಭಟನೆ ಗಲಭೆಯ ಸ್ವರೂಪ ಪಡೆದುಕೊಂಡಿದ್ದಲ್ಲದೇ ಹಲವು ರೈತರು, ಪೊಲೀಸರು ಗಾಯಗೊಂಡಿದ್ದರು. ಇದನ್ನೂ ಓದಿ: Deep Sidhu: ಬಂಧಿತ ದೀಪ್​ ಸಿಧು, ಇಕ್ಬಾಲ್​ ಸಿಂಗ್​​ರನ್ನು ಕೆಂಪುಕೋಟೆಗೆ ಕರೆದುಕೊಂಡು ಹೋದ ದೆಹಲಿ ಪೊಲೀಸರು

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ